ವಿಶಾಖಪಟ್ಟಣಂ ನಲ್ಲಿ ಮತ್ತೊಂದು ದುರಂತ: ಔಷಧಿ ತಯಾರಕ ಘಟಕದಲ್ಲಿ ಭಾರೀ ಸ್ಪೋಟ
Team Udayavani, Jul 14, 2020, 8:00 AM IST
ವಿಶಾಖಪಟ್ಟಣಂ: ಆಂಧ್ರಪ್ರದೇಶದ ವಿಶಾಖಪಟ್ಟಣಂ ಬಳಿಯ ಔಷಧಿ ತಯಾರಿಕ ಘಟಕವೊಂದರಲ್ಲಿ ಸೋಮವಾರ ಮಧ್ಯರಾತ್ರಿ 12 ಗಂಟೆಯ ವೇಳೆಗೆ ಭಾರೀ ಸ್ಫೋಟ ಸಂಭವಿಸಿದ್ದು ಕಾರ್ಮಿಕರೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿ ತಿಳಿಸಿದೆ.
ಪರವಾಡಾ ಪ್ರದೇಶದ ಜೆ. ಎಂ ಫಾರ್ಮಾಸಿಟಿಯಲ್ಲಿ ಈ ಸ್ಪೋಟ ಸಂಭವಿಸಿದ್ದು ಸ್ಥಳೀಯ ನಿವಾಸಿಗಳಲ್ಲಿ ಆತಂಕವನ್ನುಂಟುಮಾಡಿದೆ. ಫಾರ್ಮಾ ಸಿಟಿಯಲ್ಲಿ ಮೊದಲು ಸ್ಫೋಟ ಸಂಭವಿಸಿ, ಅದರ ನಂತರ ಭಾರೀ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸ್ಥಳಕ್ಕೆ ಸುಮಾರು 9 ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ.
ಸಾಗರ ತ್ಯಾಜ್ಯ ನಿರ್ವಹಣೆ ಮಾಡಲಾಗುವ ರಾಮ್ ಕಿ ದ್ರಾವಕಗಳ ಘಟಕದಲ್ಲಿ ಸ್ಪೋಟ ಸಮಭವಿಸಿದೆ ಎಂದು ಮೂಲಗಳು ತಿಳಿಸಿವೆ,
ಸುತ್ತಮುತ್ತಲಿನಲ್ಲಿ ಔಷಧಿ ಸಸ್ಯಗಳನ್ನು ಕೂಡ ನೆಡಲಾಗಿದ್ದು, ಹಲವಾರು ಕಾರ್ಖಾನೆಗಳು ಕೂಡ ಕಾರ್ಯನಿರ್ವಹಿಸುತ್ತಿದೆ. ಬೆಂಕಿ ಹರಡದಂತೆ ಅಗ್ನಿಶಾಮಕ ವಾಹನಗಳನ್ನು ನಿಯೋಜಿಲಾಗಿದೆ ಎಂದು ವಿಶಾಕಪಟ್ಟಣ ಜಿಲ್ಲಾಧಿಕಾರಿ ವಿ. ವಿನಯ್ ಚಂದ್ ತಿಳಿಸಿದ್ದಾರೆ.
ಘಟನೆಯಲ್ಲಿ ಒಬ್ಬ ಕಾರ್ಮಿಕನಿಗೆ ಗಂಭೀರ ಗಾಯಗಳಾಗಿದ್ದು, ಇತರ ಮೂವರು ಅದೃಷ್ಟವಶಾತ್ ಪಾರಾಗಿದ್ದಾರೆ. ಗಾಯಾಳುವನ್ನು ಚಿಕಿತ್ಸೆಗಾಗಿ ನಗರದ ಗಜುವಾಕಾದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಚಂದ್ ಹೇಳಿದ್ದಾರೆ.
ತಿಂಗಳ ಹಿಂದಷ್ಟೆ ಎಲ್ ಜಿ ಪಾಲಿಮರ್ಸ್ ಕೈಗಾರಿಕೆಯಲ್ಲಿ ವಿಷಾನಿಲ ಸೋರಿಕೆಯಾಗಿ ಹಲವರು ಮೃತಪಟ್ಟ ಘಟನೆ ಹಸಿರಾಗಿರುವಾಗಲೇ ಈ ಘಟನೆ ನಡೆದಿರುವುದು ಆತಂಕ ಸೃಷ್ಟಿಸಿದೆ. ಇದರೊಂದಿಗೆ ಮತ್ತೊಂದು ಔಷಧಿ ತಯಾರಕ ಘಟಕವೊಂದರಲ್ಲಿ ವಿಷಾನಿಲ ಸೋರಿಕೆಯಾಗಿ ಇಬ್ಬರು ಕಾರ್ಮಿಕರು ಸಾವಿಗೀಡಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
MUST WATCH
ಹೊಸ ಸೇರ್ಪಡೆ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ