ವಾರಂಗಲ್ ಆಸ್ಪತ್ರೆಯಲ್ಲಿ ಬೆಂಕಿ ಅನಾಹುತ: ಓರ್ವ ರೋಗಿಯ ಸಾವು
Team Udayavani, Oct 17, 2017, 10:46 AM IST
ಹೈದರಾಬಾದ್ : ತೆಲಂಗಾಣದ ವಾರಂಗಲ್ ನಗರದಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಬೆಂಕಿ ಅನಾಹುತ ಸಂಭವಿಸಿದ ಕಾರಣ 45ರ ಹರೆಯದ ರೋಗಿಯೊಬ್ಬರು ಉಸಿರುಗಟ್ಟಿ ಮೃತಪಟ್ಟಿರುವುದು ವರದಿಯಾಗಿದೆ.
ಬೆಂಕಿ ಅನಾಹುತ ಸಂಭವಿಸಿದೊಡನೆಯೇ ಸುಮಾರು 190 ರೋಗಿಗಳು ಸೇರಿದಂತೆ ಒಟ್ಟು 400 ಮಂದಿಯನ್ನು ಆಸ್ಪತ್ರೆಯಿಂದ ಸ್ಥಳಾಂತರಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
ನಾಲ್ಕು ಮಹಡಿಗಳ ಆಸ್ಪತ್ರೆಯಲ್ಲಿ ಶಾರ್ಟ್ ಸರ್ಕ್ನೂಟ್ ಉಂಟಾದ ಕಾರಣ ಆಮ್ಲಜನಕ ಸಿಲಿಂಡರ್ ಸ್ಫೋಟಗೊಂಡು ಬೆಂಕಿ ಅನಾಹುತಕ್ಕೆ ಕಾರಣವಾಯಿತು. ಆಸ್ಪತ್ರೆ ಕಟ್ಟಡದ ಒಂದು ಭಾಗದಲ್ಲಿ ಸಣ್ಣ ಮಟ್ಟದಲ್ಲಿ ಕಾಣಿಸಿಕೊಂಡ ಬೆಂಕಿಯನ್ನು ಕೂಡಲೇ ನಂದಿಸಲಾಯಿತು. ಆದರೂ ಒಬ್ಬ ರೋಗಿ ಬೆಂಕಿಯಿಂದಾದ ದಟ್ಟನೆಯ ಹೊಗೆಯಿಂದ ಉಸಿರುಗಟ್ಟಿ ಮೃತಪಟ್ಟರು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಆಸ್ಪತ್ರೆಯಿಂದ ತೆರವುಗೊಳಿಸಲಾದ 190 ರೋಗಿಗಳನ್ನು ವಾರಂಗಲ್ ನಗರದ ವಿವಿಧ ಆಸ್ಪತ್ರೆಗಳಿಗೆ ಸೇರಿಸಲಾಯಿತು. ಈ ರೋಗಿಗಳ ಪೈಕಿ ಒಬ್ಟಾತನ ಸ್ಥಿತಿ ಗಂಭೀರವಿದೆ ಎಂದು ಮೂಲಗಳು ತಿಳಿಸಿವೆ.
ಉಪ ಮುಖ್ಯಮಂತ್ರಿ ಕೆ ಶ್ರೀಹರಿ ಅವರು ಆಸ್ಪತ್ರೆಗೆ ಭೇಟಿ ನೀಡಿ ರಕ್ಷಣಾ ಕಾರ್ಯಾಚರಣೆಯ ಅವಲೋಕನ ನಡೆಸಿ ಘಟನೆಯ ತನಿಖೆಗೆ ಆದೇಶಿಸಿದರು.
ಬೆಂಕಿ ಅನಾಹುತಕ್ಕೆ ನಿಖರ ಕಾರಣವೇನೆಂದು ತಿಳಿಯಲು ಪೊಲೀಸ್, ಅಗ್ನಿ ಶಾಮಕ ಹಾಗೂ ವಿದ್ಯುತ್ ಇಲಾಖೆಯ ಉನ್ನತ ಅಧಿಕಾರಿಗಳನ್ನು ಒಳಗೊಂಡ ತಂಡವನ್ನು ತಾನು ರಚಿಸಿರುವುದಾಗಿ ವಾರಂಗಲ್ ಪೊಲೀಸ್ ಕಮಿಷನರ್ ಜಿ ಸುಧೀರ್ ಬಾಬು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ
ಬಿಲ್ ಗೇಟ್ಸ್ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ
Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು
Banda; ಗ್ಯಾಂಗ್ಸ್ಟರ್ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ
Mukhtar Ansari: ಕುಖ್ಯಾತ ಗ್ಯಾಂಗ್ಸ್ಟರ್, 5 ಬಾರಿ ಶಾಸಕ ಅನ್ಸಾರಿ ಸಾವು
MUST WATCH
ಹೊಸ ಸೇರ್ಪಡೆ
Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ
Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ
Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ
Sandalwood: ಸ್ಟಾರ್ ಸಿನ್ಮಾಗಳ ರಿಲೀಸ್ ಟೆನ್ಶನ್: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ
Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ