ಮುಂಬಯಿ ರಾಸಾಯನಿಕ ಕಾರ್ಖಾನೆಯಲ್ಲಿ ಬೆಂಕಿ; ಜೀವಹಾನಿ ಇಲ್ಲ
Team Udayavani, Feb 23, 2018, 11:46 AM IST
ಮುಂಬಯಿ : ಮುಂಬಯಿ ಹೊರವಲಯದ ಜೋಗೇಶ್ವರಿಯಲ್ಲಿನ ರಾಸಾಯನಿಕ ಕಾರ್ಖಾನೆಯೊಂದರ ಆವರಣದಲ್ಲಿ ಗುರುವಾರ ತಡರಾತ್ರಿ ಭಾರೀ ದೊಡ್ಡ ಬೆಂಕಿ ಅನಾಹುತ ಸಂಭವಿಸಿತಾದರೂ ಯಾವುದೇ ಜೀವ ಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ.
ರಾತ್ರಿ ಸುಮಾರು 9.20ರ ಹೊತ್ತಿಗೆ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿತು; ಅನಂತರ ಅದು ದೊಡ್ಡದಾಯಿತು ಎಂದು ಬಿಎಂಸಿ ಪ್ರಕೋಪ ನಿಯಂತ್ರಣ ಕೊಠಡಿಯ ಅಧಿಕಾರಿ ತಿಳಿಸಿದ್ದಾರೆ.
ಬೆಂಕಿಯನ್ನು ನಂದಿಸಲು ತತ್ಕ್ಷಣವೇ ನಾಲ್ಕು ಅಗ್ನಿಶಾಮಕಗಳನ್ನು ಕಾರ್ಯಾಚರಣೆಗೆ ಇಳಿಸಲಾಯಿತು. ಬೆಂಕಿ ಅನಾಹುತಕ್ಕೆ ಕಾರಣವೇನು ಎಂಬುದು ಈಗಿನ್ನೂ ಗೊತ್ತಾಗಿಲ್ಲ. ಕಳೆದ ಎರಡು ತಿಂಗಳ ಬಳಿಕ ಘಟಿಸಿರುವ ಮೊದಲ ಭೀಕರ ಅಗ್ನಿ ಅನಾಹುತ ಇದಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು