ಮುಂಬಯಿ : ಬಹುಮಹಡಿ ಕಟ್ಟಡದಲ್ಲಿ ಭಾರಿ ಅಗ್ನಿ ಅವಘಡ ; 5 ಬಲಿ
Team Udayavani, Dec 28, 2018, 9:43 AM IST
ಮುಂಬಯಿ: ನಗರದ ಚೆಂಬೂರ್ನ ತಿಲಕ್ನಗರ್ ಗಣೇಶ್ ಗಾರ್ಡನ್ ಪ್ರದೇಶದಲ್ಲಿ ಗುರುವಾರ ರಾತ್ರಿ ಬಹುಮಹಡಿ ವಸತಿ ಕಟ್ಟಡವೊಂದರಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ಐವರು ದಾರುಣವಾಗಿ ಸಾವನ್ನಪ್ಪಿದ್ದಾರೆ.ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತ ದುರ್ದೈವಿಗಳ ಪೈಕಿ ನಾಲ್ವರು ಹಿರಿಯ ನಾಗರಿಕರಾಗಿದ್ದಾರೆ. ಒಂದೇ ಮನೆಯಲ್ಲಿ ಸಿಲುಕಿ ಸುಟ್ಟ ಗಾಯಗಳಿಗೊಳಗಾದ ಸುನೀತಾ ಜೋಷಿ (72), ಬಾಲಚಂದ್ರನ್ ಜೋಷಿ(72)ಸುಮನ್ ಶ್ರೀನಿವಾಸನ್ ಜೋಷಿ (83), ಸರಳಾ ಸುರೇಶ್ಗಂಗರ್(52) ಮತ್ತು ಲಕ್ಷ್ಮಿ ಬೆನ್ ಪ್ರೇಮ್ ಜಿ ಗಂಗರ್(83) ಎಂದು ತಿಳಿದು ಬಂದಿದೆ.
ಗಂಭೀರವಾಗಿ ಸುಟ್ಟ ಗಾಯಗಳಿಗೊಳಗಾಗಿದ್ದ ಐವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
16 ಅಂತಸ್ಥಿನ ಕಟ್ಟಡದ 11 ನೇ ಅಂತಸ್ಥಿನಲ್ಲಿ ಕಾಣಿಸಿಕೊಂಡ ಬೆಂಕಿ ಕ್ಷಣಾರ್ಧದಲ್ಲಿ ವ್ಯಾಪಿಸಿತ್ತು. ವಿಷಯ ತಿಳಿದು 15 ಕ್ಕೂ ಹೆಚ್ಚು ಅಗ್ನಿಶಾಮಕದಳದ ವಾಹನಗಳೊಂದಿಗೆ ಸಿಬಂದಿಗಳು ಆಗಮಿಸಿ ರಕ್ಷಣಾ ಕಾರ್ಯ ನಡೆಸಿ ಬೆಂಕಿಯನ್ನು ತಹಬದಿಗೆ ತಂದರು.
ಬೆಂಕಿ ಕಾಣಿಸಿಕೊಳ್ಳುವ ಮುನ್ನ ಸ್ಫೋಟದ ಸದ್ದು ಕೇಳಿ ಬಂದಿದ್ದು ಗ್ಯಾಸ್ ಸಿಲಿಂಡರ್ ಸಿಡಿದು ಅವಘಡ ಸಂಭವಿಸಿದೆ ಎಂದು ಅಗ್ನಿ ಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ.
ರಕ್ಷಣಾ ಕಾರ್ಯದ ವೇಳೆ ಓರ್ವ ಅಗ್ನಿ ಶಾಮಕ ದಳದ ಸಿಬಂದಿಯೂ ಗಾಯಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!