ಡಿಗ್ಗಿ ಸೋತಿದ್ದಕ್ಕೆ ಅಗ್ನಿಪ್ರವೇಶ
Team Udayavani, Jun 16, 2019, 7:41 AM IST
ಭೋಪಾಲ್: ‘ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಗೆಲ್ಲದಿದ್ದರೆ, ನಾನು ಜೀವಂತ ಸಮಾಧಿಯಾಗಿ ಬಿಡುತ್ತೇನೆ’ ಎಂದು ಘೋಷಿಸಿದ್ದ ಭೋಪಾಲ್ನ ವೈರಾಗ್ಯಾನಂದ ಸ್ವಾಮೀಜಿ, ರವಿವಾರ (ಜೂ. 16) ದೇಹತ್ಯಾಗಕ್ಕೆ ಮುಂದಾಗಿದ್ದಾರೆ. ಸಾಮಾ ಜಿಕ ಜಾಲ ತಾಣಗಳಲ್ಲಿ ಟ್ರೋಲ್ಗೊಳಗಾದ ಬೆನ್ನಲ್ಲೇ ಅವರು ಈ ನಿರ್ಧಾರ ಕೈಗೊಂಡಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ, ಭೋಪಾಲ್ನಿಂದ ಕಾಂಗ್ರೆಸ್ ಪರವಾಗಿ ಸ್ಪರ್ಧಿಸಿದ್ದ ದಿಗ್ವಿಜಯ್ ಸಿಂಗ್, ಬಿಜೆಪಿಯ ಪ್ರಜ್ಞಾ ಸಿಂಗ್ ಠಾಕೂರ್ ವಿರುದ್ಧ ಸೋತಿದ್ದರು. ಆ ಫಲಿತಾಂಶ ಬಂದು ತಿಂಗಳು ಕಳೆಯುತ್ತಾ ಬಂದಿದ್ದರೂ, ಸ್ವಾಮೀಜಿಯವರು ಇನ್ನೂ ಸಮಾಧಿಯಾಗಿಲ್ಲವೇಕೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹಲವಾರು ಮಂದಿ ಸ್ವಾಮೀಜಿಯವರನ್ನು ಅಪಹಾಸ್ಯ ಮಾಡಿದ್ದರು. ಹೀಗಾಗಿ, ಜಿಲ್ಲಾಧಿಕಾರಿಗೆ ಪತ್ರ ಬರೆದಿರುವ ಸ್ವಾಮೀಜಿ, ಜೂ.16ರ ಮಧ್ಯಾಹ್ನ 2:11ಕ್ಕೆ ಸರಿಯಾಗಿ ಅಗ್ನಿಪ್ರವೇಶ ಮಾಡುವ ಮೂಲಕ ದೇಹತ್ಯಾಗ ಮಾಡಲಿದ್ದು, ಅದಕ್ಕೆ ಅವಕಾಶ ನೀಡಬೇಕು” ಎಂದು ಕೋರಿದ್ದಾರೆ. ಜಿಲ್ಲಾಧಿಕಾರಿಯವರು ಆ ಪತ್ರವನ್ನು ಮಧ್ಯಪ್ರದೇಶ ರಾಜ್ಯದ ಪೊಲೀಸ್ ಮಹಾ ನಿರ್ದೇಶಕರಿಗೆ ರವಾನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು