ಪಟಾಕಿ ಅನಾಹುತ: ದೇಶಾದ್ಯಂತ 14 ಬಲಿ
Team Udayavani, Oct 28, 2019, 10:34 PM IST
ನವದೆಹಲಿ: ದೀಪಾವಳಿ ಹಬ್ಬ ಆಚರಣೆ ಸಂದರ್ಭದಲ್ಲಿ ಪಟಾಕಿ ಸಿಡಿಸುವಾಗ ಅನಾಹುತಗಳು ಸಂಭವಿಸಿ ದೇಶಾದ್ಯಂತ 9 ಮಂದಿ ಬಲಿಯಾಗಿದ್ದಾರೆ.
ನೂರಾರು ಮಂದಿ ಕಣ್ಣಿಗೆ ಹಾನಿ, ಸುಟ್ಟ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪಟಾಕಿ ಹಚ್ಚುವಾಗ, ಮನೆಗಳು, ಅಂಗಡಿಗಳಿಗೆ ಬೆಂಕಿ ಹತ್ತಿಕೊಂಡು ಪ್ರತ್ಯೇಕ ಘಟನೆಗಳಲ್ಲಿ ಒಟ್ಟಾರೆ 7 ಮಂದಿ ಮೃತಪಟ್ಟಿದ್ದಾರೆ. ಆದರೆ, ದೆಹಲಿಯಲ್ಲಿ 2017ರಲ್ಲಿ ಸುಡುಮದ್ದುಗಳ ಮಾರಾಟಕ್ಕೆ ಸುಪ್ರೀಂ ಕೋರ್ಟ್ ನಿರ್ಬಂಧ ಹೇರಿರುವ ಹಿನ್ನೆಲೆಯಲ್ಲಿ ಹಿಂದಿನ ವರ್ಷಗಳಿಗೆ ಹೋಲಿಸಿದರೆ ಹಾನಿಯ ಪ್ರಮಾಣ ಈ ಬಾರಿ ಕಡಿಮೆಯಾಗಿದೆ.
ಇನ್ನು ಒಡಿಶಾದಲ್ಲಿ ಪಟಾಕಿ ಸಂಬಂಧಿ ಘಟನೆಗಳಿಗೆ 5 ಮಂದಿ ಬಲಿಯಾಗಿದ್ದರೆ, ಪಶ್ಚಿಮ ಬಂಗಾಳದಲ್ಲಿ 2 ವರ್ಷದ ಬಾಲಕ ಸೇರಿದಂತೆ ಇಬ್ಬರು ಸಾವಿಗೀಡಾಗಿದ್ದಾರೆ. ರಾಜಸ್ಥಾನದ ಜೈಪುರದಲ್ಲಿ ಸುಟ್ಟಗಾಯಗಳು, ಕಣ್ಣಿಗೆ ಹಾನಿಯಾಗಿ 498 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚೆನ್ನೈನಲ್ಲಿ 31 ರೋಗಿಗಳು, ಹೈದರಾಬಾದ್ನಲ್ಲಿ 77 ಮಂದಿಗೆ ಚಿಕಿತ್ಸೆ ನೀಡಲಾಗಿದೆ.
ದೆಹಲಿಯೊಂದರಲ್ಲೇ 200 ಅಗ್ನಿ ಅನಾಹುತದ ಪ್ರಕರಣಗಳು ದಾಖಲಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು