ಪ್ರತಿಭಟನೆ: ಆರು ವರ್ಷದ ಹಿಂದೆ ಮೃತಪಟ್ಟ ವ್ಯಕ್ತಿಯ ಹೆಸರಲ್ಲಿ ದೂರು; ಪೊಲೀಸರ ಎಡವಟ್ಟು
Team Udayavani, Jan 3, 2020, 9:14 AM IST
ಲಕ್ನೋ: ಉತ್ತರ ಪ್ರದೇಶದ ಫಿರೋಜಾಬಾದ್ ಪೊಲೀಸರಿಗೆ ಅತಿದೊಡ್ಡ ಮುಖಭಂಗವಾಗಿದೆ. ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆಯ ಬಳಿಕ ಕಾನೂನು ಸುವ್ಯವಸ್ಥೆ ಹಾಗೂ ಶಾಂತಿಗೆ ಭಂಗ ತರುವವರ ಪಟ್ಟಿಯೊಂದನ್ನು ಪೊಲೀಸರು ಸಿದ್ಧಪಡಿಸಿದ್ದಾರೆ. ಆ ಪಟ್ಟಿಯಲ್ಲಿ 200 ಮಂದಿಯ ಹೆಸರಿದೆ.
ಅಚ್ಚರಿಯೆಂದರೆ, 6 ವರ್ಷಗಳ ಹಿಂದೆಯೇ ಮೃತಪಟ್ಟಿರುವ ವ್ಯಕ್ತಿ, ಅನಾರೋಗ್ಯ ಪೀಡಿತರಾಗಿ ಹಾಸಿಗೆ ಹಿಡಿದಿರುವ 93ರ ವೃದ್ಧ, 90 ವರ್ಷ ವಯಸ್ಸಿನ ಮತ್ತೋಬ್ಬ ಹಿರಿಯ ವ್ಯಕ್ತಿಯ ಹೆಸರುಗಳೂ ಈ ಪಟ್ಟಿಯಲ್ಲಿವೆ. ಇವರ ಮನೆಗಳಿಗೆ ನೋಟಿಸ್ ಹೋಗಿದ್ದು, 10 ಲಕ್ಷ ರೂ. ಬಾಂಡ್ಗೆ ಸಹಿ ಮಾಡುವಂತೆ, ಮ್ಯಾಜಿಸ್ಟ್ರೇಟ್ ಮುಂದೆ ಹಾಜರಾಗುವಂತೆ ಸೂಚಿಸಲಾಗಿದೆ.
58 ಮಂದಿಗೆ ಜಾಮೀನು: ಸಿಎಎ ವಿರುದ್ಧ ಪ್ರತಿಭಟಿಸಿ ಬಂಧನಕ್ಕೊಳಗಾಗಿದ್ದ 58 ಮಂದಿಗೆ ಉತ್ತರ ಪ್ರದೇಶದ ಕೋರ್ಟ್ ಜಾಮೀನು ನೀಡಿದ್ದು, ಗುರುವಾರ ಅವರು ಬಿಡುಗಡೆಗೊಂಡಿದ್ದಾರೆ. ಈ ಪೈಕಿ ಎನ್ಜಿಒವೊಂದನ್ನು ನಡೆಸುತ್ತಿರುವ ಏಕ್ತಾ ಮತ್ತು ರವಿಶೇಖರ್ ದಂಪತಿಯೂ ಸೇರಿದ್ದು, ಇವರು ತಮ್ಮ 14 ತಿಂಗಳ ಕೂಸನ್ನು ಮತ್ತೆ ಸೇರಿದ್ದಾರೆ. ಹೆತ್ತವರ ಬಂಧನದಿಂದಾಗಿ ಕೂಸು ಏಕಾಂಗಿಯಗಿದ್ದರ ಕುರಿತು ಭಾರೀ ಸುದ್ದಿಯಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ