ಮೊದಲ ಹಂತಕ್ಕೆ ಹಿಂಸೆಯ ಛಾಯೆ

ಗಲಾಟೆ, ಇವಿಎಂ ಲೋಪ, ನಕ್ಸಲ್‌ ದಾಳಿಗೆ ಸಾಕ್ಷಿಯಾದ ಮತದಾನ

Team Udayavani, Apr 12, 2019, 6:00 AM IST

h-38

ನಾಗಪುರ: ವಿಶ್ವದ ಅತೀ ಕುಬ್ಜ ಮಹಿಳೆ ಎಂಬ ದಾಖಲೆ ಹೊಂದಿರುವ ಜ್ಯೋತಿ ಎ. (25) ಮತ ಚಲಾಯಿಸಿದ ಕ್ಷಣ.

ಹೊಸದಿಲ್ಲಿ: ಹಿಂಸಾಚಾರ, ಸಾವು-ನೋವು, ಇವಿಎಂ ಲೋಪ, ಮತದಾರರ ಆಕ್ರೋಶ, ನಕ್ಸಲ್‌ ದಾಳಿಯಂಥ ಘಟನೆಗಳಿಗೆ ಸಾಕ್ಷಿ ಯಾಗುವ ಮೂಲಕ ಪ್ರಸಕ್ತ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ತೆರೆಬಿದ್ದಿದೆ.

ಕಾಶ್ಮೀರದಿಂದ ಅಂಡಮಾನ್‌- ನಿಕೋಬಾರ್‌ ದ್ವೀಪದವರೆಗೆ ದೇಶದ 18 ರಾಜ್ಯಗಳು, ಎರಡು ಕೇಂದ್ರಾಡ ಳಿತ ಪ್ರದೇಶಗಳ 91 ಲೋಕಸಭಾ ಕ್ಷೇತ್ರಗಳಿಗೆ ಹಾಗೂ ಆಂಧ್ರಪ್ರದೇಶ, ಸಿಕ್ಕಿಂ, ಅರುಣಾಚಲಪ್ರದೇಶ ಮತ್ತು ಒಡಿಶಾ ವಿಧಾನಸಭೆಗಳಿಗೆ ಗುರು ವಾರ ಮತದಾನ ನೆರವೇರಿತು. ಆದರೆ ಹಲವು ರಾಜ್ಯಗಳಲ್ಲಿ ನಡೆ ದಂತಹ ಅಹಿತಕರ ಘಟನೆಗಳು ಪ್ರಜಾ ತಂತ್ರ ಹಬ್ಬದ ಸಂಭ್ರಮದಲ್ಲಿ ಕಪ್ಪುಚುಕ್ಕೆ ಮೂಡಿಸಿದವು.

ಆಂಧ್ರಪ್ರದೇಶದಲ್ಲಿ ಟಿಡಿಪಿ- ವೈಎಸ್ಸಾರ್‌ ಕಾಂಗ್ರೆಸ್‌ ಕಾರ್ಯ ಕರ್ತರ ನಡುವಿನ ಘರ್ಷಣೆಯಲ್ಲಿ ಮೂವರು ಸಾವಿಗೀಡಾಗಿದ್ದಾರೆ.
ಮಹಾರಾಷ್ಟ್ರ, ಛತ್ತೀಸ್‌ಗಢ ಮತ್ತು ಅಸ್ಸಾಂನಲ್ಲಿ ನಕ್ಸಲರು ಸ್ಫೋಟಕ ಸ್ಫೋಟಿಸಿ ಮತದಾರರಲ್ಲಿ ಭೀತಿ ಹುಟ್ಟಿಸಿದರು. ಜಮ್ಮು- ಕಾಶ್ಮೀರ, ಅರುಣಾಚಲ ಪ್ರದೇಶ ಗಳಲ್ಲೂ ಗಲಾಟೆ ನಡೆದು ಕೆಲವರು ಗಾಯಗೊಂಡಿದ್ದಾರೆ.

ಇದೇ ವೇಳೆ, ಹಲವು ರಾಜ್ಯಗಳಲ್ಲಿ ವಿದ್ಯುನ್ಮಾನ ಮತಯಂತ್ರಗಳು ಕೈಕೊಟ್ಟ, ಯಂತ್ರ ಗಳಲ್ಲಿ ದೋಷ ಕಾಣಿಸಿ ಕೊಂಡ ಹಾಗೂ ಮತ ದಾರರ ಪಟ್ಟಿ ಯಲ್ಲಿ ಹೆಸರೇ ಇಲ್ಲದೆ ನಾಗರಿಕರು ಕಿಡಿ ಕಿಡಿಯಾದಂಥ ಘಟನೆಗಳೂ ನಡೆದಿವೆ. ಆಂಧ್ರ ದಲ್ಲಿ ಅಭ್ಯರ್ಥಿಯೇ ಇವಿಎಂ ಎತ್ತಿ ಬಿಸಾಕಿ, ಪೊಲೀಸರ ಅತಿಥಿಯಾಗಿದ್ದಾರೆ. ಉತ್ತರಪ್ರದೇಶದ ಕೈರಾನಾದಲ್ಲಿ ಗುರುತಿನ ಚೀಟಿಯನ್ನೇ ತರದ ಕೆಲವರು, ಬಲವಂತವಾಗಿ ಹಕ್ಕು ಚಲಾಯಿಸಲು ಮತಗಟ್ಟೆಯೊಳಗೆ ನುಗ್ಗಿದ್ದು, ಅವರನ್ನು ಬಿಎಸ್‌ಎಫ್ ಯೋಧರು ಗಾಳಿಯಲ್ಲಿ ಗುಂಡು ಹಾರಿಸಿ ಚದುರಿಸಿದ್ದಾರೆ.

ಮಹಾರಾಷ್ಟ್ರದಲ್ಲಿ 39 ದೂರುಗಳು
ಮಹಾರಾಷ್ಟ್ರದ 6 ಲೋಕಸಭಾ ಕ್ಷೇತ್ರಗಳ ಕೆಲವು ಮತಗಟ್ಟೆಗಳ ವಿದ್ಯುನ್ಮಾನ ಮತಯಂತ್ರಗಳಲ್ಲಿ ದೋಷ ಕಂಡುಬಂದಿದ್ದು, ಚುನಾವಣ ಆಯೋಗಕ್ಕೆ ಕಾಂಗ್ರೆಸ್‌ 39 ದೂರು ನೀಡಿವೆ. ನಾಗಪುರ, ಚಂದ್ರಾಪುರ, ವಾರ್ಧಾ, ರಾಮ್‌ಟೆಕ್‌ ಸಹಿತ ಹಲವು ಪ್ರದೇಶಗಳ ಮತಗಟ್ಟೆಗಳಿಂದ ಇಂಥ ದೂರು ಗಳು ಬಂದಿವೆ. ಇದು ನ್ಯಾಯಸಮ್ಮತ ಮತ್ತು ಮುಕ್ತ ಚುನಾ ವಣೆ ಯಲ್ಲಿ ನಡೆದ ಹಸ್ತಕ್ಷೇಪ ಎಂದು ಕಾಂಗ್ರೆಸ್‌ ಆರೋಪಿಸಿದೆ.

ಅನಂತಪುರದಲ್ಲಿ ಹಿಂಸಾಚಾರ; ಮೂವರ ಸಾವು
ಆಂಧ್ರಪ್ರದೇಶದಲ್ಲಿ ನಡೆದ ಘರ್ಷಣೆ ಹಿಂಸೆಗೆ ತಿರುಗಿದ್ದು, ಮೂವರ ಸಾವಿನಲ್ಲಿ ಅಂತ್ಯವಾಗಿದೆ. ಇಲ್ಲಿನ ಅನಂತಪುರ ಜಿಲ್ಲೆಯ ತಡಿಪತ್ರಿ ಅಸೆಂಬ್ಲಿ ಕ್ಷೇತ್ರ ವ್ಯಾಪ್ತಿಯ ವೀರಪುರ ಗ್ರಾಮದಲ್ಲಿ ಆಡಳಿತಾರೂಢ ತೆಲುಗು ದೇಶಂ ಪಾರ್ಟಿ(ಟಿಡಿಪಿ) ಮತ್ತು ವಿಪಕ್ಷ ವೈಎಸ್ಸಾರ್‌ ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಕ್ಷುಲ್ಲಕ ವಿಚಾರಕ್ಕೆ ನಡೆದ ಜಗಳವು ಹಿಂಸಾಚಾರಕ್ಕೆ ತಿರುಗಿದ ಪರಿಣಾಮ, ವೈಎಸ್ಸಾರ್‌ ಕಾಂಗ್ರೆಸ್‌ ನಾಯಕ ಪುಲ್ಲ ರೆಡ್ಡಿ ಮತ್ತು ಟಿಡಿಪಿ ನಾಯಕ ಸಿದ್ದ ಭಾಸ್ಕರ್‌ ರೆಡ್ಡಿ ಮೃತಪಟ್ಟಿದ್ದಾರೆ. ಘಟನೆ ಖಂಡಿಸಿರುವ ಸಿಎಂ ಚಂದ್ರಬಾಬು ನಾಯ್ಡು, ಚುನಾವಣೆಯಲ್ಲಿ ಗೆಲುವು ಸಾಧಿಸಲು ವೈಎಸ್ಸಾರ್‌ ಕಾಂಗ್ರೆಸ್‌ ಹಿಂಸೆಯಲ್ಲಿ ತೊಡಗಿದೆ ಎಂದು ಆರೋಪಿಸಿದ್ದಾರೆ. ಇದಕ್ಕೆ ತಿರುಗೇಟು ನೀಡಿರುವ ವೈಎಸ್ಸಾರ್‌ಸಿ ನಾಯಕರು, ಟಿಡಿಪಿ ಬೆಂಬಲಿಗರು ಚುನಾವಣ ಅಕ್ರಮದಲ್ಲಿ ತೊಡಗಿದ್ದರು ಎಂದಿದ್ದಾರೆ. ಏಲೂರು ನಗರದಲ್ಲೂ ಗಲಾಟೆ ನಡೆದಿದ್ದು, ಟಿಡಿಪಿ ನಡೆಸಿದ ಹಲ್ಲೆಯಿಂದ ವೈಎಸ್ಸಾರ್‌ಸಿ ಕಾರ್ಯಕರ್ತರೊಬ್ಬರು ಸಾವಿಗೀಡಾಗಿದ್ದಾರೆ.

ಟಾಪ್ ನ್ಯೂಸ್

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

1-asasa

Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.