ವಿಮಾನದಲ್ಲಿ ಬರಲಿದೆ ಲಸಿಕೆ: ಸ್ವೀಕಾರಕ್ಕೆ ಸಿದ್ಧರಾಗಿ ಎಂದು ರಾಜ್ಯಗಳಿಗೆ ಸೂಚನೆ
Team Udayavani, Jan 7, 2021, 10:22 PM IST
ಹೊಸದಿಲ್ಲಿ: ಕೋವಿಡ್ ಲಸಿಕೆ ವಿತರಣೆಗೆ ದಿನಗಣನೆ ಆರಂಭವಾಗಿದ್ದು, “ಮೊದಲ ಹಂತದ ಲಸಿಕೆಗಳ ಸ್ವೀಕಾರಕ್ಕೆ ಸಿದ್ಧರಾಗಿ’ ಎಂಬ ಸಂದೇಶವನ್ನು ಎಲ್ಲ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರಕಾರ ಗುರುವಾರ ರವಾನಿಸಿದೆ.
ಇದಕ್ಕೆ ಪೂರಕವಾಗಿ ದೇಶದ ಮೂಲೆ ಮೂಲೆಗಳಿಗೂ ಲಸಿಕೆಗಳನ್ನು ತಲುಪಿಸಲು ಎಲ್ಲ ಸಿದ್ಧತೆಗಳು ನಡೆಯುತ್ತಿದ್ದು, ಇದಕ್ಕಾಗಿ ವಾಯುಪಡೆಯ ಸರಕು ಸಾಗಣೆ ವಿಮಾನಗಳನ್ನು ಸರಕಾರ ಬಳಸಿಕೊಳ್ಳಲಿದೆ.
ಆರಂಭದಲ್ಲಿ ಕರ್ನಾಟಕ ಸಹಿತ 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಈಗಾಗಲೇ ಗುರುತಿಸಲಾಗಿರುವ ಕೇಂದ್ರಗಳಿಗೆ ಲಸಿಕೆ ಸರಬರಾಜು ಮಾಡಲಾಗುತ್ತದೆ. ಉಳಿದ 18 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರಕಾರಿ ಔಷಧ ಡಿಪೋಗಳಿಗೆ ಲಸಿಕೆ ರವಾನಿಸಲಾಗುತ್ತದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಎಲ್ಲರೂ ಲಸಿಕೆಗಳನ್ನು ಸ್ವೀಕರಿಸಲು ಬೇಕಾದ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಿ ಎಂದೂ ಸೂಚಿಸಿದೆ.
ವಿಶೇಷ ಕಂಟೈನರ್ಗಳು
ಕೊವಿಶೀಲ್ಡ್ ಮತ್ತು ಕೊವ್ಯಾಕ್ಸಿನ್ನ ನಿರ್ಬಂಧಿತ ತುರ್ತು ಬಳಕೆಗೆ ಅನುಮತಿ ಸಿಕ್ಕಿರುವ ಕಾರಣ ಎರಡೂ ಕಂಪೆನಿಗಳು ಸೂಕ್ತ ತಾಪಮಾನದಲ್ಲಿ ಲಸಿಕೆಗಳ ಸಾಗಾಟಕ್ಕೆ ವಿಶೇಷ ಕಂಟೈನರ್ಗಳನ್ನು ಸಿದ್ಧಪಡಿಸಿವೆ. ಅರುಣಾಚಲ, ಲಡಾಖ್ನಂಥ ಪ್ರದೇಶಗಳಿಗೆ ಲಸಿಕೆ ತಲುಪಿಸಲು ವಾಯುಪಡೆ ತನ್ನ ವಿಶೇಷ ಸೇನಾ ವಾಯುನೆಲೆಗಳು ಮತ್ತು ಸುಧಾರಿತ ಲ್ಯಾಂಡಿಂಗ್ ಪ್ರದೇಶಗಳನ್ನು ಬಳಸಿಕೊಳ್ಳಲಿದೆ ಎನ್ನಲಾಗಿದೆ. ಅಗತ್ಯಬಿದ್ದರೆ ಹೆಲಿಕಾಪ್ಟರ್ಗಳನ್ನೂ ಉಪಯೋಗಿಸಲು ನಿರ್ಧರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ