ಕಾರ್ಮಿಕ ಗೃಹ ಗಮನ ಶುರು ; ದೇಶದ ಅತಿದೊಡ್ಡ ರಕ್ಷಣಾ ಕಾರ್ಯಾಚರಣೆಯ ಹೆಗ್ಗಳಿಕೆ

ಸಾಮಾಜಿಕ ಅಂತರಕ್ಕೆ ಆದ್ಯತೆ

Team Udayavani, May 2, 2020, 7:06 AM IST

ಕಾರ್ಮಿಕ ಗೃಹ ಗಮನ ಶುರು ; ದೇಶದ ಅತಿದೊಡ್ಡ ರಕ್ಷಣಾ ಕಾರ್ಯಾಚರಣೆಯ ಹೆಗ್ಗಳಿಕೆ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ: ಲಾಕ್‌ಡೌನ್‌ನಿಂದಾಗಿ ಅಲ್ಲಲ್ಲೇ ಸಿಕ್ಕಿಹಾಕಿಕೊಂಡಿರುವ ವಲಸೆ ಕಾರ್ಮಿಕರು, ವಿದ್ಯಾರ್ಥಿಗಳಿಗೆ, ಯಾತ್ರಿಕರಿಗೆ ವಿಶೇಷ ರೈಲು ಸಂಚಾರ ಶುರುವಾಗಿದೆ.

ಅದಕ್ಕೆ ಪೂರಕವಾಗಿ ಶುಕ್ರವಾರ ತೆಲಂಗಾಣದ ರಾಜಧಾನಿ ಹೈದರಾಬಾದ್‌ನಿಂದ ಜಾರ್ಖಂಡ್‌ನ‌ ಹಥಿಯಾಕ್ಕೆ 1,200 ಮಂದಿ ಕಾರ್ಮಿಕರನ್ನು ಸುರಕ್ಷಿತವಾಗಿ ತಲುಪಿಸಿದೆ.

ಅಂತಾರಾಜ್ಯ ಸಂಚಾರಕ್ಕೆ ಅವಕಾಶ ಕಲ್ಪಿಸಿ ಕೇಂದ್ರ ಸರಕಾರ ಆದೇಶ ಹೊರಡಿಸಿದ ಬೆನ್ನಲ್ಲೇ ಎಲ್ಲ ರಾಜ್ಯಗಳೂ ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿವೆ.

ಬೇರೆ ಬೇರೆ ರಾಜ್ಯಗಳಲ್ಲಿರುವ ಸುಮಾರು ಒಂದು ಕೋಟಿ ಕಾರ್ಮಿಕರನ್ನು ತಮ್ಮ ತಮ್ಮ ಊರುಗಳಿಗೆ ಕಳುಹಿಸಿಕೊಡುವುದೆಂದರೆ, ಅದು ದೇಶದ ಇತಿಹಾಸದಲ್ಲೇ ಅತಿದೊಡ್ಡ ಕಾರ್ಯಾಚರಣೆಯಾಗಲಿದೆ.

ಬಹುತೇಕ ರಾಜ್ಯಗಳು ವಿವಿಧ ಭಾಗಗಳಲ್ಲಿ ಸಿಲುಕಿರುವ ತಮ್ಮ ತಮ್ಮ ರಾಜ್ಯದ ನಾಗರಿಕರನ್ನು ವಾಪಸ್‌ ತವರಿಗೆ ಕರೆತರಲು ಪ್ರಕ್ರಿಯೆಗಳನ್ನು ಆರಂಭಿಸಿವೆ.

ಒಂದು ಬೋಗಿಯಲ್ಲಿ 54 ಮಂದಿ: ರೈಲ್ವೆ ಸಚಿವಾಲಯದ ನಿರ್ದೇಶನದ ಮೇರೆಗೆ 24 ಬೋಗಿಗಳ ರೈಲು ಶುಕ್ರವಾರ ಬೆಳಗ್ಗೆ 4.50ಕ್ಕೆ ತೆಲಂಗಾಣದಿಂದ ಹೊರಟಿತ್ತು. ಪ್ರಯಾಣಿಕರ ಸ್ಕ್ರೀನಿಂಗ್‌, ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ ಮತ್ತಿತರ ಎಲ್ಲ ನಿಯಮಗಳನ್ನೂ ಅನುಸರಿಸಲಾಗಿದೆ.

ರೈಲು ಮಧ್ಯೆ ಎಲ್ಲೂ ನಿಲ್ಲದ ಕಾರಣ, ಆಹಾರವನ್ನೂ ಕೂಡ ಪೂರೈಸಲಾಗುತ್ತದೆ ಎಂದು ರೈಲ್ವೆ ಇಲಾಖೆ ಹೇಳಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಸಲುವಾಗಿ ಒಂದು ಬೋಗಿಯಲ್ಲಿ 72ರ ಬದಲಾಗಿ ಕೇವಲ 54 ಮಂದಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.

ಇದೇ ವೇಳೆ, 1,200 ಮಂದಿಯನ್ನು ಹೊತ್ತ ಮತ್ತೂಂದು ವಿಶೇಷ ರೈಲು ಕೇರಳದ ಕೊಚ್ಚಿಯಿಂದ ಒಡಿಶಾದ ಭುವನೇಶ್ವರಕ್ಕೆ ಹೊರಡಲಿದೆ. ಅದೇ ರೀತಿ, ರಾಜಸ್ಥಾನದ ಕೋಟಾದಿಂದ ವಿದ್ಯಾರ್ಥಿಗಳನ್ನು ಹೊತ್ತ 2 ರೈಲುಗಳು ಝಾರ್ಖಂಡ್‌ಗೆ ತೆರಳಲಿದೆ.

ವಿಶೇಷ ಹಡಗು
ಅಂಡಮಾನ್‌-ನಿಕೋಬಾರ್‌ ದ್ವೀಪದ ಆಡಳಿತವು ವಲಸೆ ಕಾರ್ಮಿಕರು, ವಿದ್ಯಾರ್ಥಿಗಳ ಸ್ಥಳಾಂತರಕ್ಕೆ ಪೋರ್ಟ್‌ಬ್ಲೇರ್‌ನಿಂದ ಚೆನ್ನೈಗೆ ವಿಶೇಷ ನೌಕೆಯನ್ನು ವ್ಯವಸ್ಥೆ ಮಾಡಲು ಯೋಜಿಸಿದೆ.

ಸವಾಲುಗಳೇನು?

– ದೇಶಾದ್ಯಂತ ಚದುರಿಹೋಗಿರುವ ಒಂದು ಕೋಟಿಯಷ್ಟು ಕಾರ್ಮಿಕರ ಸಂಚಾರಕ್ಕೆ ವ್ಯವಸ್ಥೆ.

– ಕರೆತರುವಾಗ ಎಲ್ಲರೂ ಸಾಮಾಜಿಕ ಅಂತರ ಕಾಪಾಡಿಕೊಳ್ಳುವಂತೆ ನೋಡಿಕೊಳ್ಳುವುದು.

– ಎಲ್ಲರನ್ನೂ ಸ್ಕ್ರೀನಿಂಗ್‌ ಹಾಗೂ ಕ್ವಾರಂಟೈನ್‌ಗೆ ಒಳಪಡಿಸುವುದು, ಆಸ್ಪತ್ರೆಗಳ ವ್ಯವಸ್ಥೆ ಕಲ್ಪಿಸುವುದು.

– ಮಹಾರಾಷ್ಟ್ರ, ದೆಹಲಿಯಂಥ ಹಾಟ್‌ಸ್ಪಾಟ್‌ಗಳಿಂದ ಬರುವ ಕಾರ್ಮಿಕರಿಂದ ಕೋವಿಡ್ ಆತಂಕ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.