ಈ ವರ್ಷವೇ ಗಗನಯಾನ ಮೊದಲ ಪರೀಕ್ಷೆ; ಸಚಿವ ಜಿತೇಂದ್ರ ಸಿಂಗ್
Team Udayavani, Sep 14, 2022, 7:45 AM IST
ನವದೆಹಲಿ: ಭಾರತದ ಮೊದಲ ಮಾನವಸಹಿತ ಬಾಹ್ಯಾಕಾಶ ಯೋಜನೆ “ಗಗನಯಾನ’ 2024ರಲ್ಲಿ ನಡೆಯಲಿದೆ.
ಅದಕ್ಕೂ ಮೊದಲು, ಅದರ ಮೊದಲ ಪರೀಕ್ಷಾರ್ಥ ಉಡಾವಣೆ ಈ ವರ್ಷವೇ ನಡೆಯಲಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ತಿಳಿಸಿದ್ದಾರೆ.
ಮೊದಲ ಪರೀಕ್ಷೆಯ ನಂತರ ಮುಂದಿನ ವರ್ಷ ಎರಡನೇ ಪರೀಕ್ಷೆ ನಡೆಯಲಿದ್ದು, ಅದರಲ್ಲಿ ಮನುಷ್ಯನಿಗೆ ಹೋಲುವ ರೋಬೋಟ್ ಆದ “ವ್ಯೋಮ ಮಿತ್ರ’ನನ್ನು ಬಾಹ್ಯಾಕಾಶಕ್ಕೆ ಕಳುಹಿಸಲಾಗುವುದು ಎಂದು ತಿಳಿಸಲಾಗಿದೆ.
ಸ್ವಾತಂತ್ರ್ಯದ ಅಮೃತ ಮಹೋತ್ಸವ ಪ್ರಯುಕ್ತ 2022ರಲ್ಲಿಯೇ ಗಗನಯಾನ ಸಂಪೂರ್ಣವಾಗಬೇಕಿತ್ತು. ಆದರೆ ಕೊರೊನಾ ಸಮಸ್ಯೆಯಿಂದಾಗಿ ಯೋಜನೆ ಎರಡು ವರ್ಷಗಳ ಕಾಲ ಮುಂದೂಡಿಕೆಯಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ
Manipal ಹಾಸ್ಪಿಟಲ್ಸ್ ಪಾಲಾದ ಮೆಡಿಕಾ ಸಿನರ್ಜಿ