ಪಣಜಿ: ಜೂನ್ 1ರಿಂದ ಮೀನುಗಾರಿಕೆ ನಿಷೇಧ… ದಡ ಸೇರುತ್ತಿವೆ ಬೋಟುಗಳು


Team Udayavani, May 29, 2023, 7:35 PM IST

ಪಣಜಿ: ಜೂನ್ 1ರಿಂದ ಮೀನುಗಾರಿಕೆಗೆ ನಿಷೇಧ… ದಡ ಸೇರುತ್ತಿವೆ ಬೋಟುಗಳು

ಪಣಜಿ: ಜೂನ್ 1ರಿಂದ ಜುಲೈ 31 ರವರೆಗೆ ಗೋವಾದಲ್ಲಿ ಮೀನುಗಾರಿಕೆಗೆ ನಿಷೇಧ ಹೇರಲಾಗುವುದರಿಂದ ಮೀನುಗಾರರು ದಡಕ್ಕೆ ವಾಪಸ್ಸಾಗಿದ್ದು, ಬಲೆಗಳನ್ನು ಒಂದೆಡೆ ಸೇರಿಸುವಲ್ಲಿ ಮೀನುಗಾರರು ನಿರತರಾಗಿದ್ದಾರೆ. ಮೀನುಗಾರರು ಮತ್ತು ಟ್ರಾಲರ್ ಮಾಲೀಕರು ಬಲೆಗಳು ಮತ್ತು ಮೀನುಗಾರಿಕಾ ಸಾಧನಗಳನ್ನು ಮುಚ್ಚಲು ಪ್ರಾರಂಭಿಸಿದ್ದಾರೆ.

ಆಳ ಸಮುದ್ರಕ್ಕೆ ಮೀನು ಹಿಡಿಯಲು ಹೋಗುವ ದೊಡ್ಡ ಟ್ರಾಲರ್ ಗಳು ಮತ್ತು ದೋಣಿಗಳನ್ನು ಸರ್ಕಾರ ಪ್ರತಿ ವರ್ಷ ಜೂನ್ 1ರಿಂದ ಜುಲೈ 31 ರವರೆಗೆ ನಿಷೇಧಿಸುತ್ತದೆ. ಜೂನ್ 1ರಿಂದ ಜುಲೈ 31 ರವರೆಗಿನ ಎರಡು ತಿಂಗಳ ಅವಧಿಯಲ್ಲಿ ಸಮುದ್ರವು ಪ್ರಕ್ಷುಬ್ಧವಾಗಿರುತ್ತದೆ ಆದ್ದರಿಂದ, ಮತ್ತು ಈ ಸಮಯವು ಸಂತಾನೋತ್ಪತ್ತಿ ಸಮಯವಾಗಿರುವುದರಿಂದ ಇದನ್ನು ಗಣನೆಗೆ ತೆಗೆದುಕೊಂಡು, ಈ ಸಮಯದಲ್ಲಿ ಮೀನುಗಾರಿಕೆಗೆ ನಿಷೇಧವನ್ನು ಹೇರಲಾಗುತ್ತದೆ.

ಈ ಕುರಿತಂತೆ ಮಾಲಿಮ್ ಜೆಟ್ಟಿಯಲ್ಲಿ ಕೆಲವು ಮೀನುಗಾರರನ್ನು ಪ್ರಶ್ನಿಸಿದಾಗ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಮೀನುಗಾರಿಕೆ ಉತ್ತಮವಾಗಿದೆ ಎಂದು ಹೇಳಿದರು. ಎರಡು ತಿಂಗಳ ಕಾಲ ಮೀನುಗಾರಿಕೆ ಬಂದ್‍ನಲ್ಲಿ ಏನು ಮಾಡುತ್ತೀರಿ ಎಂದು ಮೀನುಗಾರರನ್ನು ಕೇಳಿದಾಗ, ಟ್ರಾಲರ್ ಮಾಲೀಕರು ಟ್ರಾಲರ್‍ಗಳು ಮತ್ತು ದೋಣಿಗಳ ದುರಸ್ತಿ ಮತ್ತು ನಿರ್ವಹಣೆಯನ್ನು ಮಾಡಲಾಗುತ್ತದೆ ಎಂದು ಹೇಳಿದರು. ಅಲ್ಲದೆ, ಟ್ರಾಲರ್‍ಗಳಲ್ಲಿ ಕೆಲಸ ಮಾಡುವ ಮೀನುಗಾರರು, ವಲಸೆ ಕಾರ್ಮಿಕರು ತಮ್ಮ ಮೂಲ ಸ್ಥಳಕ್ಕೆ (ಊರಿಗೆ) ಹಿಂದಿರುಗುತ್ತಾರೆ ಮತ್ತು ಎರಡು ತಿಂಗಳ ಕಾಲ ವಿಶ್ರಾಂತಿ ಪಡೆಯುತ್ತಾರೆ. ಎರಡು ತಿಂಗಳ ನಂತರ ಗೋವಾಕ್ಕೆ ವಾಪಸ್ಸಾಗುತ್ತಾರೆ ಎಂದರು.

ಮೀನುಗಾರಿಕಾ ನಿರ್ಬಂಧಿತ ಅವಧಿ 61 ದಿನಗಳು
61 ದಿನಗಳ ನಿಷೇಧದ ಅವಧಿಯಲ್ಲಿ, ಯಾಂತ್ರಿಕ ಸಾಧನಗಳನ್ನು ಹೊಂದಿದ ಹಡಗುಗಳಿಂದ ಮೀನುಗಾರಿಕೆ ಮತ್ತು ಟ್ರಾಲ್-ನೆಟ್ ಮತ್ತು ಪರ್ಸ್-ಸೀನ್ ಬಲೆಗಳಿಂದ ಮೀನುಗಾರಿಕೆಯನ್ನು ನಿಷೇಧಿಸಲಾಗುವುದು ಎಂದು ಮೀನುಗಾರಿಕೆ ಇಲಾಖೆ ತಿಳಿಸಿದೆ. ಈ ಕುರಿತಂತೆ ಮೀನುಗಾರಿಕಾ ಇಲಾಖೆಯ ನಿರ್ದೇಶಕಿ ಡಾ.ಶಾಮಿಲಾ ಮೊಂತೆರೊ ಆದೇಶ ಹೊರಡಿಸಿದ್ದಾರೆ.

ಈ ಕುರಿತಂತೆ ಬಾಣಾವಲಿ ಮೀನುಗಾರ ಪಿಲೆ ಫರ್ನಾಂಡಿಸ್ ಪ್ರತಿಕ್ರಿಯೆ ನೀಡಿ, ಮುಂಗಾರು ಸಮೀಪಿಸುತ್ತಿರುವುದರಿಂದ ರಾಜ್ಯ ಸರ್ಕಾರದ ನಿಯಮಾವಳಿಗಳ ಪ್ರಕಾರ ಸಮುದ್ರ ಮೀನುಗಾರಿಕೆಯನ್ನು 61 ದಿನಗಳ ಕಾಲ  ಮುಚ್ಚಲಾಗುತ್ತದೆ. ಇದು ಪ್ರತಿ ವರ್ಷವೂ ನಡೆಯುತ್ತದೆ, ಅದರಂತೆ, ನಾವು ಈ ನಿಯಮಗಳನ್ನು ಅನುಸರಿಸುತ್ತೇವೆ. ಏಕೆಂದರೆ ಈ ಸಂದರ್ಭದಲ್ಲಿ  ಸಮುದ್ರವು ಪ್ರಕ್ಷುಬ್ಧವಾಗಿರುತ್ತದೆ, ಆಳ ಸಮುದ್ರ ಮೀನುಗಾರಿಕೆ ಅಪಾಯಕಾರಿಯಾಗಿರುತ್ತದೆ ಎಂದರು.

ಇದನ್ನೂ ಓದಿ: UP ಇಬ್ಬರು ಸ್ಮಗ್ಲರ್ ಗಳ ಬಂಧನ; 2.5 ಕೋಟಿ ರೂ. ಡ್ರಗ್ಸ್ ವಶ

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.