ನೆರವಿಗೆ ಬಾರದ ಜನ! ಸರಕು ಸಾಗಣೆ ಟ್ರಕ್, ಕಾರು ಡಿಕ್ಕಿ: ಕಾರಿನಲ್ಲಿದ್ದ ಐವರು ಸಜೀವ ದಹನ
ವಿರುದ್ಧ ದಿಕ್ಕಿನಿಂದ ವೇಗವಾಗಿ ಆಗಮಿಸಿದ್ದ ಸರಕು ಸಾಗಣೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಕಾರಿಗೆ ಬೆಂಕಿ ಹೊತ್ತಿಕೊಂಡಿತ್ತು
Team Udayavani, Dec 22, 2020, 10:17 AM IST
Representative Image
ಲಕ್ನೋ:ಸರಕು ಸಾಗಣೆಯ ಭಾರೀ ಗಾತ್ರದ ಟ್ರಕ್ ವೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಜೀವಂತವಾಗಿ ದಹನವಾದ ದಾರುಣ ಘಟನೆ ಮಂಗಳವಾರ(ಡಿಸೆಂಬರ್ 22, 2020) ಆಗ್ರಾದ ಯುಮುನಾ ಎಕ್ಸ್ ಪ್ರೆಸ್ ವೇನಲ್ಲಿ ಸಂಭವಿಸಿದೆ.
ಕಾರಿನೊಳಗಿದ್ದ ಪ್ರಯಾಣಿಕರು ರಕ್ಷಣೆಗಾಗಿ ಕೂಗಾಡುತ್ತಿದ್ದರೂ ಯಾರೊಬ್ಬರೂ ಈ ಸಂದರ್ಭದಲ್ಲಿ ನೆರವಿಗೆ ಧಾವಿಸಲಿಲ್ಲ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ. ಸುಮಾರು ಒಂದು ಗಂಟೆ ನಂತರ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿದ್ದು, ಅಷ್ಟರಲ್ಲಿ ಐವರು ಸಜೀವವಾಗಿ ದಹನವಾಗಿರುವುದಾಗಿ ವರದಿ ತಿಳಿಸಿದೆ.
ವಿರುದ್ಧ ದಿಕ್ಕಿನಿಂದ ವೇಗವಾಗಿ ಆಗಮಿಸಿದ್ದ ಸರಕು ಸಾಗಣೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಕಾರಿಗೆ ಬೆಂಕಿ ಹೊತ್ತಿಕೊಂಡಿತ್ತು. ಪ್ರತ್ಯಕ್ಷದರ್ಶಿಗಳ ಪ್ರಕಾರ, ಟ್ರಕ್ ನಾಗಲ್ಯಾಂಡ್ ನಂಬರ್ ಹೊಂದಿದ್ದು, ಇದು ವಿರುದ್ಧ ದಿಕ್ಕಿನಿಂದ ಬಂದಿದ್ದರಿಂದ ಅಪಘಾತ ಸಂಭವಿಸಿರುವುದಾಗಿ ತಿಳಿಸಿದ್ದಾರೆ.
ಇದನ್ನೂ ಓದಿ:ಮುಂದಿನ ಪಂದ್ಯ ಗೆಲ್ಲಲು ಹೀಗೆ ಮಾಡು! ಅಜಿಂಕ್ಯ ರಹಾನೆಗೆ ಜಾಫರ್ ರಹಸ್ಯ ಸಂದೇಶ!
ಕಾರಿನಲ್ಲಿದ್ದ ಪ್ರಯಾಣಿಕರು ಲಕ್ನೋದಿಂದ ದೆಹಲಿಗೆ ತೆರಳುತ್ತಿದ್ದರು. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ತನಿಖೆ ನಡೆಸುತ್ತಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ
Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್ಐ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
MUST WATCH
ಹೊಸ ಸೇರ್ಪಡೆ
Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ
Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ
Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್ಐ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!