ದಿಲ್ಲಿಯಲ್ಲಿ ಕಾರಿಗೆ ಡಂಪರ್ ಢಿಕ್ಕಿಯಾಗಿ ಐವರ ಸಾವು; ನಾಲ್ವರು ಗಂಭೀರ
Team Udayavani, Jul 26, 2017, 10:55 AM IST
ಹೊಸದಿಲ್ಲಿ : ಪೂರ್ವ ದಿಲ್ಲಿಯ ಕಲ್ಯಾಣಪುರಿಯಲ್ಲಿ ಇಂದು ನಸುಕಿನ 3 ಗಂಟೆಯ ವೇಳೆಗೆ ಕಾರಿಗೆ ಡಂಪರ್ ಢಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಮಡಿದು ಇತರ ನಾಲ್ವರು ಗಂಭೀರವಾಗಿ ಗಾಯಗೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
9 ಮಂದಿ ಎಸ್ಯುವಿ ವಾಹನದಲ್ಲಿ ವಿಮಾನ ನಿಲ್ದಾಣದಿಂದ ಮೀರತ್ ಗೆ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿತು. ಗಾಯಗೊಂಡ 9 ಮಂದಿಯ ಪೈಕಿ ಐದು ಮಂದಿ ಆಸ್ಪತ್ರೆಗೆ ತರುತ್ತಿದ್ದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು.
ಡಂಪರ್ ಚಾಲಕನಿಗೆ ತನ್ನ ವಾಹನದ ಮೇಲೆ ನಿಯಂತ್ರಣ ತಪ್ಪಿದಾಗ ವಾಹನವು ರಸ್ತೆ ಬದಿಯ ಬೇಲಿಯನ್ನು ಭೇದಿಸಿ ಆಚೆ ಕಡೆ ಇದ್ದ ಎಸ್ಯುವಿ ವಾಹನಕ್ಕೆ ಢಿಕ್ಕಿ ಹೊಡೆಯಿತು ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಹರಿಯಾಣ ನೋಂದಾವಣೆ ಸಂಖ್ಯೆ ಹೊಂದಿರುವ ಡಂಪರ್ನ ಚಾಲಕನು ಅಪಘಾತ ಉಂಟಾಗುತ್ತಲೇ ವಾಹನ ಬಿಟ್ಟು ಪರಾರಿಯಾಗಿದ್ದಾನೆ. ಡಂಪರ್ ಚಾಲಕನು ಒಂದೋ ನಿರ್ಲಕ್ಷ್ಯ ಹಾಗೂ ಅತೀ ವೇಗದಿಂದ ವಾಹನ ಚಲಾಯಿಸಿ ನಿಯಂತ್ರಣ ಕಳೆದುಕೊಂಡಿರಬೇಕು ಇಲ್ಲವೇ ಆತ ನಿದ್ದೆಗಣ್ಣಿನಲ್ಲಿ ಇದ್ದಿರಬೇಕು ಎಂದು ಪೊಲೀಸರು ಶಂಕಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ
Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್