ಗೆಲುವಿಗೆ ಕಾರಣವಾದ ಐದು ಅಂಶಗಳು

ಭರತಖಂಡ ಗೆದ್ದ ನರೇಂದ್ರ

Team Udayavani, May 24, 2019, 6:07 AM IST

geluvu

ಚುನಾವಣಪೂರ್ವ ಸಮೀಕ್ಷೆಗಳು ಹಾಗೂ ಚುನಾವಣೆ ಬಳಿಕದ ಸಮೀಕ್ಷೆಗಳು ಪ್ರಚುರಪಡಿಸಿದಂತೆ ಬಿಜೆಪಿ ನೇತೃತ್ವದ ಎನ್‌ಡಿಎ ಎರಡನೇ ಬಾರಿಗೆ ದೇಶದ ಚುಕ್ಕಾಣಿ ಹಿಡಿದಿದೆ. ಈ ಮೂಲಕ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ 1ರ ಅಭಿವೃದ್ಧಿ ಹಾಗೂ ಜನಪ್ರಿಯ ಕಾರ್ಯಕ್ರಮಗಳಿಗೆ ಪ್ರಜೆಗಳು ಜೈ ಎಂದಿದ್ದಾರೆ. ಹಾಗಾದರೆ ಮೋದಿ ಮುಂದಿನ 5 ವರ್ಷಗಳ ಅವಧಿಗೆ ದೇಶದ ಚುಕ್ಕಾಣಿ ಹಿಡಿಯಲು ಕಾರಣವಾದ ಅಂಶಗಳೇನು…

ನಿಷ್ಕಳಂಕ ಆಡಳಿತ
ಭ್ರಷ್ಟಾಚಾರ ರಹಿತ ಆಡಳಿತ ಬಿಜೆಪಿ ಸರಕಾರದಲ್ಲಿ ಕಂಡು ಬಂದಿತ್ತು. ಯಾವುದೇ ಗಂಭೀರ ಸ್ವರೂಪದ ಆರೋಪಗಳು ಕೇಳಿಬರದಂತೆ ಸರಕಾರ ನಡೆದಿತ್ತು. ತನ್ನ ಸಂಸದರು ಮತ್ತು ಸಚಿವರನ್ನು ಇಂತಹ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ ಪಕ್ಷ ಎಚ್ಚರಿಕೆ ವಹಿಸಿತ್ತು. ಇದು ಪರೋಕ್ಷವಾಗಿ ದೇಶದಲ್ಲಿ ಮೋದಿ ಹಾಗೂ ಸರಕಾರದ ಕುರಿತು ಒಳ್ಳೆಯ ಅಭಿಪ್ರಾಯ ಮೂಡಿ ಬರಲು ನೆರವಾಗಿತ್ತು.

 ರಾಜತಾಂತ್ರಿಕ ಬೆಳವಣಿಗೆ
ಸಂಬಂಧ ವೃದ್ಧಿಗಾಗಿ ಮೋದಿ ನಡೆಸಿದ ವಿದೇಶ ಪ್ರವಾಸ ಪ್ಲಸ್‌ ಆಯಿತು. ಜಗತ್ತಿನ ಬಲಿಷ್ಠ ರಾಷ್ಟ್ರಗಳ ಜತೆಗೆ ಸ್ನೇಹ ವೃದ್ಧಿಗೆ ಸರಕಾರ ಗಮನ ಹರಿಸಿತ್ತು. ಪುಲ್ವಾಮಾ ಮತ್ತು ಬಾಲಾಕೋಟ್‌ ಘಟನೆ ಬಳಿಕ ಪಾಕಿಸ್ಥಾನದ ಜತೆಗೆ ಯುದೊœàನ್ಮಾದ ಏರ್ಪಟ್ಟಾಗ ಚೀನ ಹೊರತು ಪಡಿಸಿ ಇತರ ರಾಷ್ಟ್ರಗಳು ಭಾರತದ ಬೆಂಬಲಕ್ಕೆ ನಿಂತವು. ಜೈಶ್‌ ಉಗ್ರ ಮಸೂದ್‌ ಅಜರ್‌ನನ್ನು ಜಾಗತಿಕ ಉಗ್ರನ ಪಟ್ಟಿಗೆ ಸೇರಿಸುವ ಭಾರತದ ಆಗ್ರಹಕ್ಕೆ ರಾಷ್ಟ್ರಗಳ ಬೆಂಬಲ ವ್ಯಕ್ತವಾಗಿತ್ತು.

ಸಾಮಾಜಿಕ ಮಾಧ್ಯಮ
ಬಿಜೆಪಿ ತನ್ನ ಐಟಿ ಸೆಲ್‌ಗ‌ಳನ್ನು ಸರಿಯಾದ ರೀತಿಯಲ್ಲಿ ಬಳಸಿಕೊಂಡಿದೆ. ಪಕ್ಷ ಅಧಿಕಾರಕ್ಕೆ ಬಂದಾಗಿನ ದಿನಗಳಿಂದ ಸರಕಾರದ ಹಲವು ಕಾರ್ಯಕ್ರಮಗಳಿಗೆ ಪ್ರಚಾರ ನೀಡಿದೆ. ವಿಪಕ್ಷಗಳ ಆರೋಪಗಳಿಗೆ ಸಾಮಾಜಿಕ ಜಾಲತಾಣದಲ್ಲೇ ಉತ್ತರ ನೀಡುತ್ತಿತ್ತು. ಬಿಜೆಪಿ ಐಟಿ ಸೆಲ್‌ಗ‌ಳಿಗೆ ಪ್ರತಿ ಯಾಗಿ ವಿಪಕ್ಷಗಳ ಐಟಿ ಸೆಲ್‌ಗ‌ಳು ಪೈಪೋಟಿ ನೀಡುವಂತಿರಲಿಲ್ಲ. ಇದು ಯುವ ಜನರನ್ನು ಸೆಳೆಯಿತು.

ಯುವ ಮತದಾರರತ್ತ ಪ್ರಭಾವ
ಬಿಜೆಪಿ ಯುವ ಮತದಾರರ ಮೇಲೆ ಹೆಚ್ಚು ನಿರೀಕ್ಷೆಯನ್ನು ಇಟ್ಟುಕೊಂಡಿತ್ತು. ಮೋದಿ ಅವರ ಹಿಂದೂ ಟ್ರಂಪ್‌ ಕಾರ್ಡ್‌ ಮತ್ತು ಕೆಲವು ಘೋಷಣೆಗಳು ಯುವಕರನ್ನು ಹೆಚ್ಚು ಆಪ್ತರನ್ನಾಗಿಸಿತು. ಫೇಸ್‌ಬುಕ್‌, ಟ್ವೀಟರ್‌ನಲ್ಲಿ ಮೋದಿ ಬೆಂಬಲಿಸುವ ಯುವಕರ ಸಂಖ್ಯೆ ಹೆಚ್ಚಾಯಿತು. ಇತ್ತೀಚಿನ ವರ್ಷಗಳಲ್ಲಿ ಯುವ ಮತದಾರರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಅಂಶ ಬಿಜೆಪಿಯ ಪರವಾಗಿ ಕೆಲಸ ಮಾಡಿತು.

ಸದಾ ಕ್ರಿಯಾಶೀಲತೆ
ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಪ್ರತಿ ನಿತ್ಯವೂ ಸುದ್ದಿಯಲ್ಲಿರುತ್ತಿದ್ದರು. ಒಂದಲ್ಲ ಒಂದು ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದರು. ಪ್ರಧಾನಿಯಾದ ಬಳಿಕ ನಡೆದ ಕೆಲವು ಘಟನೆಗಳಿಗೆ ಸ್ಪಂದಿಸಿದ ರೀತಿ ದೇಶದ ಜನರ ಮೆಚ್ಚುಗೆಗೆ ಪಾತ್ರವಾಯಿತು. ಪ್ರತಿದಿನ ಒಂದಲ್ಲ ಒಂದು ಕಾರ್ಯದ ನಿಮಿತ್ತ ಸದಾ ಸುದ್ದಿಯ ಮುಖ್ಯ ಭೂಮಿಕೆಯಲ್ಲಿರುವಂತೆ ನೋಡಿಕೊಳ್ಳುತ್ತಿದ್ದರು. ಇದರಿಂದ ಜನರಿಗೂ ಮೋದಿ ಕೆಲಸ ಮಾಡುತ್ತಿದ್ದಾರೆ ಎಂದು ಅನಿಸುತ್ತಿತ್ತು. ಮೋದಿ ಅವರಿಂದ ದೇಶದಲ್ಲಿ ಅಭಿವೃದ್ಧಿ ಕಾರ್ಯ ನಡೆಯಬಹುದು ಎಂಬ ನಂಬಿಕೆ ಅವರಲ್ಲಿ ಮನೆ ಮಾಡಿ ಕಮಲದತ್ತ ಮತ ಚಲಾಯಿಸಲ್ಪಟ್ಟಿತು.

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2011

ಬೆಂಗಳೂರಿನಲ್ಲೊಂದು ಟೈ ರೋಮಾಂಚನ

rajani-kanth

ಮೋದಿಯೂ ವರ್ಚಸ್ವಿ ನಾಯಕ

smruthi-irani

ಬರಿಗಾಲಲ್ಲೇ ವಿನಾಯಕ ದೇಗುಲಕ್ಕೆ ತೆರಳಿದ್ದ ಸ್ಮತಿ!

Asshivrda

ಮಾಜಿ ರಾಷ್ಟ್ರಪತಿ ಪ್ರಣಬ್ ರ ಆಶೀರ್ವಾದ ಪಡೆದ ಪ್ರಧಾನಿ ನರೇಂದ್ರ ಮೋದಿ

Lalu-head-scratch-700

ರಾಜೀನಾಮೆ ನೀಡುವ ರಾಹುಲ್‌ ನಿರ್ಧಾರ ಆತ್ಮಾಹುತಿಯದ್ದು : ಲಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.