ಪಾಲಘರ್ನಲ್ಲಿ ಮರಕ್ಕೆ ಕಾರು ಢಿಕ್ಕಿ: ಐವರ ದಾರುಣ ಸಾವು
Team Udayavani, Feb 7, 2018, 10:56 AM IST
ಮುಂಬಯಿ : ಇಂದು ನಸುಕಿನ ವೇಳೆ ನೆರೆಯ ಪಾಲಘರ್ ಜಿಲ್ಲೆಯಲ್ಲಿ ಅತ್ಯಂತ ವೇಗವಾಗಿ ಧಾವಿಸುತ್ತಿದ್ದ ಕಾರೊಂದು ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಮೃತಪಟ್ಟ ದಾರುಣ ಘಟನೆ ವರದಿಯಾಗಿದೆ.
ಕಾರು ವದ್ರಾಯಿ ಗ್ರಾಮದಿಂದ ಪಾಲಘರ್ ಪಟ್ಟಣಕ್ಕೆ ತೆರಳುತ್ತಿತ್ತು. ಪಾಟಿಲ್ವಾಡಿ ಸಮೀಪ ನಸುಕಿನ 3 ಗಂಟೆಯ ಹೊತ್ತಿಗೆ ಕಾರಿನ ಚಾಲಕನಿಗೆ ನಿಯಂತ್ರಣ ತಪ್ಪಿದ ಕಾರಣ ಅದು ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆಯಿತು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ನತದೃಷ್ಟ ಕಾರಿನಲ್ಲಿದ್ದ ಎಲ್ಲರೂ 25ರಿಂದ 30ರ ಹರೆಯದವರಾಗಿದ್ದು ಅಪಘಾತ ಸಂಭವಿಸಿದ ವೇಳೆ ರಸ್ತೆಯಲ್ಲಿ ವಾಹನ ಸಂಚಾರ ಬಹುತೇಕ ಕ್ಷೀಣವಾಗಿದ್ದುದರಿಂದ ಸ್ಥಳೀಯರಿಂದಾಗಲೀ ಅಥವಾ ಯಾರಿಂದಲಾದರೂ ಆಗಲೀ ನೆರವು ಸಿಗದೇ ಹೋಯಿತು ಎಂದು ಪೊಲೀಸರು ಹೇಳಿದರು.
ಅಪಘಾತ ಸಂಭವಿಸಿದ ಸ್ವಲ್ಪ ಹೊತ್ತಿನ ಬಳಿಕ ಈ ಮಾರ್ಗವಾಗಿ ಸಾಗಿ ಕಾರೊಂದರ ಚಾಲಕನು ಪೊಲೀಸರಿಗೆ ಮಾಹಿತಿ ನೀಡಿದ. ನತದೃಷ್ಟ ಕಾರಿನ ಐವರೂ ಮೃತ ಪ್ರಯಾಣಿಕರ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಪಾಲಘರ್ ಸರಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ.
ಶತಪತಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದ್ದು ತನಿಖೆ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
MUST WATCH
ಹೊಸ ಸೇರ್ಪಡೆ
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್