ಮೂಸೆವಾಲಾ ಹತ್ಯೆ ಸಂಚುಕೋರನಿಗೆ ನಕಲಿ ಪಾಸ್ಪೋರ್ಟ್; ಐವರ ಬಂಧನ
Team Udayavani, Jul 13, 2022, 7:28 PM IST
ನವದೆಹಲಿ : ನಕಲಿ ಪಾಸ್ಪೋರ್ಟ್ ಪಡೆಯಲು ಲಾರೆನ್ಸ್ ಬಿಷ್ಣೋಯ್ ನ ಸೋದರಳಿಯನಿಗೆ ಸಹಾಯ ಮಾಡಿದ ಆರೋಪದ ಮೇಲೆ ಮಹಿಳೆ ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಆರೋಪಿಗಳು ಸಚಿನ್ ಥಾಪನ್ ಮತ್ತು ಇತರ ದರೋಡೆಕೋರರಿಗೆ ನಕಲಿ ಪಾಸ್ಪೋರ್ಟ್ಗಳನ್ನು ಪಡೆಯಲು ಸಹಾಯ ಮಾಡಿದ್ದರು. ಪಂಜಾಬಿ ಗಾಯಕ ಸಿದ್ದು ಮೂಸೆವಾಲಾ ಹತ್ಯೆಯ ಸಂಚಿನಲ್ಲಿ ಬಿಷ್ಣೋಯ್ ಸೋದರಳಿಯ ಥಾಪನ್ ಭಾಗಿಯಾಗಿದ್ದಾನೆ ಎಂದು ಆರೋಪಿಸಲಾಗಿದ್ದು, ಆತ ಬಳಿಕ ದೇಶ ಬಿಟ್ಟು ಪರಾರಿಯಾಗಿದ್ದ.
ಅನ್ಮೋಲ್ ಬಿಷ್ಣೋಯ್ ಮತ್ತು ಸಚಿನ್ ಥಾಪನ್, ಮೂಸೆವಾಲಾ ಕೊಲೆಗೆ ಸಂಚು ರೂಪಿಸಿದ್ದರು. ಅವರು ಶೂಟರ್ಗಳನ್ನು ನೇಮಿಸಿಕೊಂಡು ಅವರಿಗೆ ಉಪಕರಣಗಳನ್ನು ಒದಗಿಸಿದ್ದರು, ನಂತರ ನಕಲಿ ಪಾಸ್ಪೋರ್ಟ್ಗಳನ್ನು ಬಳಸಿಕೊಂಡು ದೇಶದಿಂದ ಪಲಾಯನ ಮಾಡಿದರು ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳನ್ನು ರಾಹುಲ್ ಸರ್ಕಾರ್ (27), ಅರ್ಜಿತ್ ಕುಮಾರ್ (55), ನವನೀತ್ ಪ್ರಜಾಪತಿ (33), ಸೋಮನಾಥ್ ಪ್ರಜಾಪತಿ (33) ಮತ್ತು 27 ವರ್ಷದ ಮಹಿಳೆ ಎಂದು ಗುರುತಿಸಲಾಗಿದೆ.
ಜುಲೈ 4 ರಂದು, ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಸದಸ್ಯರೊಂದಿಗೆ ಸಂಪರ್ಕದಲ್ಲಿದ್ದ ಸರ್ಕಾರ್ ಚಲನವಲನದ ಬಗ್ಗೆ ಪೊಲೀಸರಿಗೆ ಸುಳಿವು ಸಿಕ್ಕಿತ್ತು. ಆತನನ್ನು ಹಿಡಿಯಲು ಸಾಕೇತ್ ಮೆಟ್ರೋ ಸ್ಟೇಷನ್ ಫುಟ್ ಓವರ್ ಬ್ರಿಡ್ಜ್ ಬಳಿ ಬಲೆ ಬೀಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್