ನಿಂತಿದ್ದ ಲಾರಿಗೆ ಕಾರು ಢಿಕ್ಕಿ:ಐವರು ಬಲಿ, ಮೂವರು ಗಂಭೀರ
Team Udayavani, Jun 7, 2019, 12:04 PM IST
ಚಿತ್ತೂರು: ಆಂಧ್ರ ಪ್ರದೇಶದ ರೇಣುಗುಂಟ ಮಂಡಲದಹೆದ್ದಾರಿತಯಲ್ಲಿ ನಿಂತಿದ್ದ ಲಾರಿಗೆ ಕಾರು ಢಿಕ್ಕಿಯಾಗಿ ಐವರು ದಾರುಣವಾಗಿ ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡಿರುವಭೀಕರಅವಘಡ ಶುಕ್ರವಾರಸಂಭವಿಸಿದೆ.
ನಸುಕಿನ ಜಾವ 5 ಗಂಟೆಯ ವೇಳೆಗೆ ಅವಘಡ ಸಂಭವಿಸಿದ್ದು, ವೇಗವಾಗಿದ್ದ ಕಾರು ಲಾರಿಗೆ ಹಿಂಬದಿಯಿಂದ ಢಿಕ್ಕಿಯಾಗಿ ನಜ್ಜುಗುಜ್ಜಾಗಿದೆ.
ಅಪಘಾತದ ತೀವ್ರತೆಗೆ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಂಭೀರವಾಗಿ ಗಾಯಗೊಂಡಿರುವ ಮೂವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.