ದಾಭೋಲ್ಕರ್ ಹಂತಕರಿಗೆ ಕರ್ನಾಟಕದಲ್ಲಿ ತರಬೇತಿ
Team Udayavani, Aug 20, 2018, 6:00 AM IST
ಪುಣೆ: ವಿಚಾರವಾದಿ ನರೇಂದ್ರ ದಾಭೋಲ್ಕರ್ ಹಂತಕರು ಕರ್ನಾಟಕ ಮತ್ತು ಮಹಾರಾಷ್ಟ್ರದ ವಿವಿಧ ಪ್ರದೇಶಗಳಲ್ಲಿ ಶೂಟಿಂಗ್ ತರಬೇತಿ ಪಡೆದಿದ್ದರು ಎಂದು ಪುಣೆಯ ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ ನೀಡಿದೆ. ಶನಿವಾರ ಬಂಧಿತನಾದ ಪ್ರಮುಖ ಆರೋಪಿ ಸಚಿನ್ ಪ್ರಕಾಶ್ರಾವ್ ಅಂಡುರೆ ಯನ್ನು ಕೋರ್ಟ್ಗೆ ಹಾಜರುಪಡಿಸಿದ ಸಿಬಿಐ, 14 ದಿನಗಳ ಕಾಲ ವಶಕ್ಕೆ ಕೋರಿ ಕೋರ್ಟ್ಗೆ ಮನವಿ ಸಲ್ಲಿಸಿತು. ದಾಭೋಲ್ಕರ್ ಹತ್ಯೆಗೂ ಮುನ್ನ ಅಂಡುರೆ ಕರ್ನಾಟಕ ಮತ್ತು ಮಹಾರಾಷ್ಟ್ರದ ವಿವಿಧ ಕಡೆಗಳಲ್ಲಿ ತರಬೇತಿ ಪಡೆದಿರುವುದು ವಿಚಾರಣೆಯಿಂದ ತಿಳಿದು ಬಂದಿದೆ ಎಂದು ಸಿಬಿಐ ತಿಳಿಸಿತು. ಈ ಹಿನ್ನೆಲೆಯಲ್ಲಿ ಕೋರ್ಟ್, ಆ.26ರವರೆಗೆ ಅಂಡುರೆ ಯನ್ನು ಸಿಬಿಐ ವಶಕ್ಕೊಪ್ಪಿಸಿತು.
ಇದೇ ವೇಳೆ, ಅಂಡುರೆ ಬಂಧನದ ಬೆನ್ನಲ್ಲೇ ಸಿಬಿಐ ಶಿವಸೇನೆಯ ಮಾಜಿ ಕಾರ್ಪೊರೇಟರ್ ಶ್ರೀಕಾಂತ್ ಪಂಗಾರ್ಕರ್ರನ್ನು ವಶಕ್ಕೆ ಪಡೆದಿದೆ. ಕೊಲೆ ವೇಳೆ ಶ್ರೀಕಾಂತ್ ಕೂಡ ನನ್ನ ಜತೆಗಿದ್ದು ಬೈಕ್ ಚಲಾಯಿಸುತ್ತಿದ್ದರು ಎಂದು ಅಂಡುರೆ ಬಾಯಿಬಿಟ್ಟಿದ್ದ .
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
MUST WATCH
ಹೊಸ ಸೇರ್ಪಡೆ
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.