ಲೋಕಲ್‌ ರೈಲುಗಳಲ್ಲಿ ಫ್ಲೆಕ್ಸಿ ಫೇರ್‌? : ಲೋಕಲ್‌ ರೈಲುಗಳಲ್ಲಿ ಫ್ಲೆಕ್ಸಿ ಫೇರ್‌?


Team Udayavani, Aug 2, 2019, 10:54 PM IST

Mumbai-Local-Train-726

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಮುಂಬಯಿ: ಉಪನಗರ ಲೋಕಲ್‌ ರೈಲುಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರ ಜೇಬುಗಳು ಮುಂಬರುವ ದಿನಗಳಲ್ಲಿ ಹೆಚ್ಚು ಭಾರವಾಗಲಿವೆ. ಎಂ.ಆರ್‌.ವಿ.ಸಿ.ಯ ಯೋಜನೆಯ ಪ್ರಕಾರ ಎಲ್ಲವೂ ಉತ್ತಮವಾಗಿ ನಡೆದರೆ, ಜನಸಂದಣಿಯ ಸಮಯದಲ್ಲಿ ಲೋಕಲ್‌ ರೈಲುಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ವಿಮಾನ ಮತ್ತು ಆ್ಯಪ್‌ ಆಧಾರಿತ ಟ್ಯಾಕ್ಸಿಗಳ ಮಾದರಿಯಂತೆ ಫ್ಲೆಕ್ಸಿ ಶುಲ್ಕದ ಹೊರೆ ಬೀಳುವ ಸಾಧ್ಯತೆಯಿದೆ.

ಮುಂಬಯಿ ರೈಲ್‌ ವಿಕಾಸ್‌ ಕಾರ್ಪೊರೇಶನ್‌ (ಎಂ.ಆರ್‌.ವಿ.ಸಿ.) ರೈಲ್ವೇ ಮಂಡಳಿಗೆ ಕಳುಹಿಸಿರುವ ವನ್‌ ನೇಶನ್‌ ವನ್‌ ಕಾರ್ಡ್‌ (ಏಕೀಕೃತ ಟಿಕೆಟಿಂಗ್‌ ವ್ಯವಸ್ಥೆ) ಯೋಜನೆಯ ಕರಡು ಪ್ರತಿಯಲ್ಲಿ ಈ ಸಲಹೆಯನ್ನು ಸೂಚಿಸಲಾಗಿದೆ. ಒಂದೊಮ್ಮೆ ರೈಲ್ವೇ ಸಚಿವಾಲಯವು ಇದಕ್ಕೆ ತನ್ನ ಅನುಮೋದನೆಯನ್ನು ನೀಡಿದರೆ, ಜನಸಂದಣಿಯ ಸಮಯದಲ್ಲಿ ದುಬಾರಿ ಶುಲ್ಕದ ಟಿಕೆಟ್‌ನಿಂದ ಪ್ರಯಾಣಿಕರ ಜೇಬಿಗೆ ಕತ್ತರಿ ಬೀಳಲಿದೆ. ಪೀಕ್‌ ಅವಧಿಯಲ್ಲಿ ಪ್ರಯಾಣಿಕರ ದಟ್ಟಣೆಯನ್ನು ಕಡಿಮೆ ಮಾಡುವುದು ಇದರ ಹಿಂದಿನ ಉದ್ದೇಶವಾಗಿದೆ ಎಂದು ತಿಳಿಸಿದೆ.

ಮಾಹಿತಿಯ ಪ್ರಕಾರ, ಆಡಳಿತವು ಲೋಕಲ್‌ ರೈಲು, ಮೆಟ್ರೋ, ಮೋನೋ ಮುಂತಾದ ಸಾರ್ವಜನಿಕ ಸಾರಿಗೆ ಸೇವೆಗಳನ್ನು ಬಳಸುವ ಪ್ರಯಾಣಿಕರಿಗೆ ಒಂದೇ ಟಿಕೆಟ್‌ ವ್ಯವಸ್ಥೆಯನ್ನು ಜಾರಿಗೆ ತರುವ ಯೋಚನೆಯಲ್ಲಿದೆ. ಉಪನಗರ ರೈಲ್ವೇ ಪ್ರಯಾಣಿಕರ ಅನುಕೂಲಕ್ಕಾಗಿ ಈ ಕೆಲಸವನ್ನು ಎಂಆರ್‌ವಿಸಿ ಪರಿಶೀಲಿಸುತ್ತಿದೆ. ಈ ಯೋಜನೆಯ ಕರಡನ್ನು ಇತ್ತೀಚೆಗೆ ರೈಲ್ವೇ ಮಂಡಳಿಗೆ ಕಳುಹಿಸಲಾಗಿದೆ ಎಂದಿದೆ.

ಕಾಗದ ಬಳಕೆಗೆ ಕಡಿತ
ಪ್ರಸ್ತುತ ಮುಂಬಯಿ ಉಪನಗರ ರೈಲ್ವೇ ಮಾರ್ಗದ ಮೂಲಕ ಪ್ರತಿದಿನ 80 ಲಕ್ಷ ಜನರು ಪ್ರಯಾಣಿಸುತ್ತಿದ್ದಾರೆ. ಈ ಪ್ರಯಾಣಿಕರಲ್ಲಿ 20ರಿಂದ 22 ಲಕ್ಷ ಜನರು ಏಕಮುಖಿ ಪ್ರಯಾಣ ಮಾಡುತ್ತಾರೆ. ಏಕೀಕೃತ ಟಿಕೆಟ್‌ ವ್ಯವಸ್ಥೆಯನ್ನು ಜಾರಿಗೊಳಿಸಿದ ಅನಂತರ ಲಭ್ಯವಾಗಲಿರುವ ಸ್ಮಾರ್ಟ್‌ ಕಾರ್ಡ್‌ ಅನ್ನು ಇಂತಹ ಪ್ರಯಾಣಿಕರು ಕೂಡ ಬಳಸುತ್ತಾರೆ ಎಂದು ನಂಬಲಾಗಿದೆ. ಈ ವ್ಯವಸ್ಥೆಯು ಟಿಕೆಟಿಂಗ್‌ಗಾಗಿ ಮಾಡಲಾಗುವ ಕಾಗದದ ವೆಚ್ಚವನ್ನು ಕೂಡ ಕಡಿಮೆ ಮಾಡುತ್ತದೆ.

ನಷ್ಟಕ್ಕೆ ಪರಿಹಾರ
ಮಧ್ಯ ಮತ್ತು ಪಶ್ಚಿಮ ರೈಲ್ವೇಯಲ್ಲಿ ಏಕೀಕೃತ ಟಿಕೆಟಿಂಗ್‌ ವ್ಯವಸ್ಥೆಯನ್ನು ಯಶಸ್ವಿಯಾಗಿ ಜಾರಿಗೊಳಿಸಿದ ಅನಂತರ ಪ್ರಯಾಣಿಕರ ದಟ್ಟಣೆಯ ಸಮಯದಲ್ಲಿ ಫ್ಲೆಕ್ಸಿ ಫೇರ್‌ ವ್ಯವಸ್ಥೆಯ ಅನುಷ್ಠಾನವನ್ನು ಪರಿಗಣಿಸಲಾಗುವುದು ಎಂದು ಎಂಆರ್‌ವಿಸಿ ಅಧಿಕಾರಿಗಳು ತಿಳಿಸಿದ್ದಾರೆ. ರೈಲ್ವೇ ದರ ಸೂತ್ರದ ಆಧಾರದ ಮೇಲೆ ಇದನ್ನು ನಿರ್ಧರಿಸಲಾಗುವುದು.

ಮುಂಬಯಿಯ ಉಪನಗರ ರೈಲ್ವೇ ಮಾರ್ಗದಲ್ಲಿ ವಾರ್ಷಿಕವಾಗಿ 1,700 ಕೋಟಿ ರೂ.ಗಳ ನಷ್ಟ ಉಂಟಾಗುತ್ತಿತ್ತು. ಕಳೆದ ಕೆಲವು ವರ್ಷಗಳಲ್ಲಿ ಈ ನಷ್ಟವು ಸಾವಿರಾರು ಕೋಟಿ ರೂಪಾಯಿಗಳಾಗಿವೆ. ರೈಲ್ವೇಗೆ ಆಗುವ ನಷ್ಟವನ್ನು ಕಡಿಮೆ ಮಾಡುವ ಸಲುವಾಗಿ ರೈಲ್ವೇ ಆಡಳಿತವು ಇಂತಹ ಯೋಜನೆಗಳನ್ನು ಜಾರಿಗೆ ತರುವ ಸಿದ್ಧತೆಯಲ್ಲಿ ನಿರತವಾಗಿದೆ.

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.