ತಾಂತ್ರಿಕ ಸಮಸ್ಯೆಯಿಂದ ಕೊಚ್ಚಿ ಹೋದ ಪುಲಿಚಿಂತಲ ಅಣೆಕಟ್ಟಿನ 16ನೇ ಗೇಟ್..!
ಕೃಷ್ಣಾ ಜಿಲ್ಲೆಯ ನದಿ ತೀರದ ವಾಸಿಗಳಿಗೆ ಜಿಲ್ಲಾಡಳಿತದಿಂದ ಎಚ್ಚರಿಕೆ..!
Team Udayavani, Aug 5, 2021, 11:05 AM IST
ಆಂಧ್ರ ಪ್ರದೇಶ : ಪುಲಿಚಿಂತಲ ಅಣೆಕಟ್ಟಿನ ಗೇಟ್ ಕೊಚ್ಚಿ ಹೋದ ಹಿನ್ನೆಲೆಯಲ್ಲಿ ಆಂಧ್ರದ ಕೃಷ್ಣಾ ಜಿಲ್ಲೆಯಲ್ಲಿ ಪ್ರವಾಹ ಎಚ್ಚರಿಕೆ ನೀಡಲಾಗಿದೆ. ಕೆಲವು ತಾಂತ್ರಿಕ ಸಮಸ್ಯೆಯಿಂದ ಗೇಟ್ ಅಣೆಕಟ್ಟಿನ ಒಳಹರಿವಿಗೆ ಕೊಚ್ಚಿ ಹೋಗಿದ್ದು, ಈಗ ಪ್ರವಾಹದ ಭೀತಿ ಎದುರಾಗಿದೆ.
ಕೃಷ್ಣಾ ಜಿಲ್ಲೆಯ ತಗ್ಗು ಪ್ರದೇಶಗಳಲ್ಲಿ ಪ್ರವಾಹ ಸೃಷ್ಟಿಯಾಗುವಸಾಧ್ಯತೆಯ ಹಿನ್ನೆಲೆಯಲ್ಲಿ ನದಿ ತೀರವಾಸಿಗಳಿಗೆ ಎಚ್ಚರಿಕೆಯನ್ನು ನೀಡಲಾಗಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ : ಮೇಕೆದಾಟು ವಿಚಾರವಾಗಿ ಯಾರೇ ಪ್ರತಿಭಟನೆ ಮಾಡಿದರೂ ನಮಗೆ ಸಂಬಂಧವಿಲ್ಲ: ಬೊಮ್ಮಾಯಿ
ಈ ಬಗ್ಗೆ ಪ್ರತಿಕ್ರಿಯಿಸಿದ ಕೃಷ್ಣಾ ಜಿಲ್ಲಾಧಿಕಾರಿ, ಜೆ. ನಿವಾಸ್, ಅಣೆಕಟ್ಟಿನ ಹದಿನಾರನೇ ಗೇಟ್ ನಲ್ಲಿ ತಾಂತ್ರಿಕ ಸಮಸ್ಯೆಯ ಕಾರಣದಿಂದಾಗಿ ಗೇಟ್ ಕೊಚ್ಚಿ ಹೋಗಿದೆ. ತಡರಾತ್ರಿ 3.30 ರ ಹೊತ್ತಿಗೆ ಈ ಘಟನೆ ಸಂಭವಿಸಿದ್ದು, ಸ್ಟಾಪ್ ಲಾಕ್ ಗೇಟ್ ನಿಂದ ಮುಚ್ಚುವ ಕಾರ್ಯ ನಡೆಯುತ್ತಿದ್ದು, ಈ ಉದ್ದೇಶಕ್ಕಾಗಿ, ಅಣೆಕಟ್ಟಿನಿಂದ ನೀರನ್ನು ಬಿಡಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಎಂಟರಿಂದ 12 ಗಂಟೆಗಳಲ್ಲಿ ಸುಮಾರು ಐದು ಲಕ್ಷ ಕ್ಯೂಸೆಕ್ ನೀರು ಪ್ರಕಾಶಂ ಬ್ಯಾರೇಜ್ ತಲುಪಲಿದೆ. “ನದಿ ಪ್ರದೇಶದ ಬಳಿ ಜನರು ಜಾಗರೂಕರಾಗಿರಬೇಕು. ಅವರು ನದಿಗೆ ಹೋಗಬಾರದು. ಅವರು ತಮ್ಮ ಪ್ರಾಣಿಗಳು ಮತ್ತು ದೋಣಿಗಳ ಬಗ್ಗೆ ಎಚ್ಚರಿಕೆ ವಹಿಸಬೇಕು. ತಗ್ಗು ಪ್ರದೇಶಗಳಲ್ಲಿರುವ ಜನರು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರವಾಗುವಂತೆ ಸೂಚಿಸಲು ಎಲ್ಲಾ ತಹಸೀಲ್ದಾರ್ ಗಳು ಮತ್ತು ಕಂದಾಯ ಸಿಬ್ಬಂದಿಗಳಿಗೆ ಸೂಚಿಸಲಾಗಿದೆ” ಎಂದು ತಿಳಿಸಿದ್ದಾರೆ.
ಇಂದು (ಗುರುವಾರ, ಆಗಸ್ಟ್ 5) ಬೆಳಿಗ್ಗೆ ಪುಲಿಚಿಂತಲ ಅಣೆಕಟ್ಟೆಯಲ್ಲಿ ಹೊರಹರಿವು 2,00,804 ಕ್ಯೂಸೆಕ್ ಮತ್ತು ಒಳಹರಿವು 1,10,000 ಕ್ಯೂಸೆಕ್ ಗಳಷ್ಟಿದೆ. ಪ್ರಕಾಶಂ ಬ್ಯಾರೇಜ್ ನಲ್ಲಿ ಹೊರಹರಿವು 33,750 ಕ್ಯೂಸೆಕ್ ಇದ್ದರೆ ಒಳಹರಿವು 41,717 ಕ್ಯೂಸೆಕ್ ಇದೆ ಎಂದು ವರದಿಯಾಗಿದೆ.
ಇದನ್ನೂ ಓದಿ : ಸಂಪುಟದಲ್ಲಿ ಸಿಎಂ ಬೊಮ್ಮಾಯಿ ಬ್ಯಾಲೆನ್ಸ್: ಬಿಎಸ್ ವೈ- ಹೈಕಮಾಂಡ್ ಕೊಂಡಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ
MUST WATCH
ಹೊಸ ಸೇರ್ಪಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ
ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?