ಯುಪಿ,ಬಿಹಾರದಲ್ಲಿ ಬಿಗಡಾಯಿಸಿದ ನರೆ:ಸಾವಿನ ಸಂಖ್ಯೆ170 ಕ್ಕೆ
Team Udayavani, Aug 19, 2017, 10:46 AM IST
ಹೊಸದಿಲ್ಲಿ: ಉತ್ತರ ಪ್ರದೇಶ ಮತ್ತು ಬಿಹಾರದಲ್ಲಿ ಭೀಕರ ನೆರೆ ಪರಿಸ್ಥಿತಿ ಕಾಣಿಸಿಕೊಂಡಿದ್ದು , ಶನಿವಾರದ ವರೆಗೆ ಪ್ರವಾಹ ಸಂಬಂಧಿತ ಅವಘಡಗಳಿಗೆ 170 ಮಂದಿ ಬಲಿಯಾಗಿದ್ದಾರೆ.
ಬಿಹಾರದ 13ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಪ್ರವಾಹ ಕಾಣಿಸಿಕೊಂಡಿದ್ದು ಜನ ತತ್ತರಿಸಿಹೋಗಿದ್ದಾರೆ . ವಾಯು ಸೇನೆ ತುರ್ತು ರಕ್ಷಣಾ ಕಾರ್ಯಗಳನ್ನು ನಡೆಸುವಲ್ಲಿ ನಿರತವಾಗಿದೆ. ಸುಮಾರು 1ಕೋಟಿ 8 ಲಕ್ಷ ದಷ್ಟು ಜನರು ನೆರೆಯಿಂದಾಗಿ ಸಂತ್ರಸ್ತರಾಗಿದ್ದು, ಈಗಾಗಲೇ 4 ಲಕ್ಷ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ ಎಂದು ವರದಿಯಾಗಿದೆ.
ಬಿಹಾರದಲ್ಲಿ ಕಳೆದ 5 ದಿನಗಳಲ್ಲಿ 130 ಮಂದಿ ಬಲಿಯಾಗಿದ್ದು, ಅರಾರಿಯಾ ಜಿಲ್ಲೆಯೊಂದರಲ್ಲೇ 30 ಮಂದಿ ಸಾವನ್ನಪ್ಪಿದ್ದಾರೆ.
ಉತ್ತರ ಪ್ರದೇಶಲ್ಲೂ ಕೆಲ ಜಿಲ್ಲೆಗಳು ನೆರೆ ಪೀಡಿತವಾಗಿದ್ದು ಇದುವರೆಗೆ 40 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಬಹರೀಚ್ನಲ್ಲಿ ಸಾವಿರಾರು ಜನರು ಸಂತ್ರಸ್ತರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ
Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್ಐ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!