ಮುಳುಗಿದ ಅಸ್ಸಾಂ; 82 ಮಂದಿ ಸಾವು: ಮತ್ತಷ್ಟು ಎನ್ಡಿಆರ್ಎಫ್ ತಂಡಗಳ ರವಾನೆ
ಗುವಾಹಾಟಿಯಲ್ಲಿ ರೆಡ್ಅಲರ್ಟ್
Team Udayavani, Jun 21, 2022, 11:49 PM IST
ಗುವಾಹಾಟಿ: ಅಸ್ಸಾಂನಲ್ಲಿ ಮಳೆ, ಪ್ರವಾಹ ಪರಿಸ್ಥಿತಿ ಮುಂದುವರಿದಿದ್ದು, ಮಂಗಳವಾರ 11 ಮಂದಿ ಮೃತಪಟ್ಟು, 7 ಮಂದಿ ನಾಪತ್ತೆ ಯಾಗಿದ್ದಾರೆ. ಹೀಗಾಗಿ ಒಟ್ಟಾರೆ ಸಾವಿನ ಸಂಖ್ಯೆ 82ಕ್ಕೇರಿಕೆಯಾಗಿದೆ.
ಬ್ರಹ್ಮಪುತ್ರ, ಬರಾಕ್ ನದಿಗಳು ಹಾಗೂ ಇವುಗಳ ಉಪನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, 48 ಲಕ್ಷಕ್ಕೂ ಅಧಿಕ ಮಂದಿ ಸಂಕಷ್ಟಕ್ಕೀಡಾಗಿದ್ದಾರೆ. ರಕ್ಷಣ ಕಾರ್ಯಾಚರಣೆಗಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣ ಪಡೆ(ಎನ್ಡಿಆರ್ಎಫ್)ಯ ತಂಡವು ಭುವನೇಶ್ವರದಿಂದ ಮಂಗಳವಾರ ಕಛಾರ್ಗೆ ಧಾವಿಸಿದೆ.
ಕರೀಂಗಂಜ್ ಮತ್ತು ಕಛಾರ್ ಜಿಲ್ಲೆಗಳಲ್ಲಿ ಪರಿಸ್ಥಿತಿ ಗಂಭೀರವಾಗಿದೆ. ಈ ಹಿನ್ನೆಲೆಯಲ್ಲಿ ಅಸ್ಸಾಂ ಮುಖ್ಯಮಂತ್ರಿ ಹಿಮಾಂತ ಬಿಸ್ವಾ ಅವರೊಂದಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ. ಇದಾದ ಬಳಿಕ 105 ಸಿಬಂದಿಯುಳ್ಳ ಎನ್ಡಿಆರ್ಎಫ್ ತಂಡ ಸ್ಥಳಕ್ಕೆ ಧಾವಿಸಿದೆ. ಈ ಕುರಿತು ಮಾಹಿತಿ ನೀಡಿರುವ ಸಿಎಂ ಹಿಮಾಂತ, “ಸಚಿವ ಅಮಿತ್ ಶಾ ಅವರು ಸೂಕ್ತ ಸಮಯದಲ್ಲಿ ನೆರವಾಗಿದ್ದಾರೆ’ ಎಂದು ಹೇಳಿದ್ದಾರೆ.
ರಾಷ್ಟ್ರೀಯ ಉದ್ಯಾನವೂ ಜಲಾವೃತ: ಕಾಜಿರಂಗಾ ರಾಷ್ಟ್ರೀಯ ಉದ್ಯಾನದಲ್ಲಿರುವ 233 ಕ್ಯಾಂಪ್ಗ್ಳ ಪೈಕಿ 42 ಸಂಪೂರ್ಣವಾಗಿ ಜಲಾವೃತಗೊಂಡಿವೆ. 8 ಪ್ರಾಣಿಗಳು ಪ್ರವಾಹದಲ್ಲಿ ಮುಳುಗಿ ಮೃತಪಟ್ಟಿದ್ದರೆ, 12 ಪ್ರಾಣಿಗಳನ್ನು ರಕ್ಷಿಸಲಾಗಿದೆ. ಪೋಬಿತೋರಾ ರಾಷ್ಟ್ರೀಯ ಉದ್ಯಾನದಲ್ಲಿ 25ರ ಪೈಕಿ 14 ಕ್ಯಾಂಪ್ಗ್ಳು ಮುಳುಗಡೆಯಾಗಿವೆ. ಪ್ರಾಣಿಗಳ ಸಾವು-ನೋವು ಕುರಿತು ಮಾಹಿತಿ ಬಂದಿಲ್ಲ.
ಹೈ ಅಲರ್ಟ್: ಇನ್ನೂ ಕೆಲವು ದಿನಗಳ ಕಾಲ ಅಸ್ಸಾಂನಲ್ಲಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಗುವಾಹಾ ಟಿಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ