ಕರುನಾಡಿಗೆ ಮೋದಿ ಮೆಚ್ಚುಗೆ: ಮನ್‌ ಕಿ ಬಾತ್‌ನಲ್ಲಿ ರಾಜ್ಯದ ಐದು ಅಂಶ ಉಲ್ಲೇಖ


Team Udayavani, Jan 30, 2023, 7:15 AM IST

ಕರುನಾಡಿಗೆ ಮೋದಿ ಮೆಚ್ಚುಗೆ: ಮನ್‌ ಕಿ ಬಾತ್‌ನಲ್ಲಿ ರಾಜ್ಯದ ಐದು ಅಂಶ ಉಲ್ಲೇಖ

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರ ಈ ವರ್ಷದ ಮೊದಲ ಮನ್‌ ಕಿ ಬಾತ್‌ನಲ್ಲಿ ಕರ್ನಾಟಕದ ಸಾಧ ಕರು ಮುಕ್ತಕಂಠದ ಶ್ಲಾಘನೆಗೆ ಒಳಗಾದರು.

ಅನುಭವ ಮಂಟಪ, ಬೆಂಗಳೂರಿನ ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್ ಸೈನ್ಸ್‌, ಪದ್ಮಶ್ರೀ ಗೌರವಕ್ಕೆ ಪಾತ್ರರಾದ ಚಿಕ್ಕಬಳ್ಳಾಪುರದ ತಮಟೆ ಕಲಾವಿದ ಮುನಿವೆಂಕಟಪ್ಪ, ಬೀದರ್‌ನ ಹುಲೂÕರು ಮಹಿಳಾ ಸಿರಿಧಾನ್ಯ ಉತ್ಪಾದಕ ಕಂಪೆನಿ, ಕಲಬುರಗಿಯಲ್ಲಿರುವ ಆಳಂದ ಭೂತಾಯಿ ಮಿಲೆಟ್ಸ್‌ ಫಾರ್ಮರ್ಸ್‌ ಪ್ರೊಡ್ನೂಸರ್ಸ್‌ ಕಂಪೆನಿಯ ಬಗ್ಗೆ ಪ್ರಧಾನಿ ಪ್ರಶಂಸೆಯ ಮಾತುಗಳನ್ನಾಡಿದ್ದಾರೆ.

2023ನೇ ಸಾಲಿನ ಪದ್ಮ ಪ್ರಶಸ್ತಿ ಪುರಸ್ಕೃತರಲ್ಲಿ ಹೆಚ್ಚಿನವರು ಬುಡಕಟ್ಟು ಸಮುದಾಯಗಳಿಗೆ ಸೇರಿದವರು ಅಥವಾ ಅವರ ಜತೆಗೆ ಒಡನಾಟ ಹೊಂದಿರುವವರು. ಜತೆಗೆ ದೇಶವೇ ಮೊದಲು ಎಂಬ ಧ್ಯೇಯವನ್ನು ಪಾಲಿಸಿಕೊಂಡು ಬರುತ್ತಿರುವವರಾಗಿದ್ದಾರೆ. ಅವರು ಯಾವುದೇ ಗೌರವವನ್ನು ಬಯಸದೆ ಕೆಲಸ ಮಾಡುತ್ತಿದ್ದಾರೆ. ಅಂಥವರಲ್ಲಿ ಚಿಕ್ಕಬಳ್ಳಾಪುರದ ತಮಟೆ ಕಲಾವಿದ ಮುನಿ ವೆಂಕಟಪ್ಪ ಒಬ್ಬರು. ಅವರರಂತೆ ತೆರೆಮರೆಯಲ್ಲಿ ಸಾಧನೆ ಮಾಡಿದವರಿಗೆ ಅರ್ಹವಾಗಿಯೇ ಪದ್ಮ ಗೌರವ ಘೋಷಿಸಲಾಗಿದೆ. ಇಂತಹ ಸಾಧಕರ ಜೀವನ- ಸಾಧನೆಯನ್ನು ದೇಶವಾಸಿಗಳು ಓದಿ ತಿಳಿದುಕೊಳ್ಳಬೇಕು. ಬುಡಕಟ್ಟು ಜನರ ಜೀವನವು ನಗರವಾಸಿಗಳ ಜೀವನಕ್ಕಿಂತ ಭಿನ್ನವಾಗಿದೆ. ಅವರು ಸವಾಲುಗಳನ್ನು ಹೊಂದಿದ್ದರೂ ತಮ್ಮ ಸಂಪ್ರದಾಯಗಳನ್ನು ಉಳಿಸಿಕೊಂಡಿವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಜಗತ್ತಿನಲ್ಲಿಯೇ ಅತ್ಯುತ್ತಮ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹೊಂದಿರುವ ದೇಶ ನಮ್ಮದು ಎಂದು ಹೇಳಿದ ಪ್ರಧಾನಿ, ಇದಕ್ಕೆ ಕರ್ನಾಟಕದ ಅನುಭಟ ಮಂಟಪ ಪ್ರೇರಣೆಯಾಗಿದೆ ಎಂದರು.

ಐಐಎಸ್‌ಸಿಗೆ ಮೆಚ್ಚುಗೆ
ಬೆಂಗಳೂರಿನ ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್ ಸೈನ್ಸ್‌ ಬಗ್ಗೆ ಪ್ರಧಾನಿ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. 2022ರಲ್ಲಿ ಅತೀ ಹೆಚ್ಚು, 145 ಪೇಟೆಂಟ್‌ಗಳನ್ನು ತನ್ನದಾಗಿಸಿಕೊಂಡ ಹೆಗ್ಗಳಿಕೆ ಐಐಎಸ್‌ಸಿಯದು. ಇದು ಪ್ರತೀ ಐದು ದಿನಗಳಿಗೆ ಎರಡು ಪೇಟೆಂಟ್‌ ಹೊಂದುವುದಕ್ಕೆ ಸಮಾನ. ಈ ಸಾಧನೆ ದೇಶವಾಸಿಗಳಿಗೆ ಹೆಮ್ಮೆಯ ವಿಚಾರ ಎಂದು ಮೋದಿ ಹೇಳಿದರು.

ಬೀದರ್‌ ಬಗ್ಗೆ ಪ್ರಸ್ತಾವ
ಸಿರಿಧಾನ್ಯಗಳ ಕ್ಷೇತ್ರದಲ್ಲಿ ಬೀದರ್‌ ಜಿಲ್ಲೆಯ ಹುಲೂÕರ್‌ ಮಿಲೆಟ್ಸ್‌ ಪ್ರೊಡ್ನೂಸರ್‌ ಕಂಪೆನಿ ಮಾಡಿರುವ ಸಾಧನೆಯ ಬಗ್ಗೆ ಮೋದಿ ಪ್ರಸ್ತಾವಿಸಿದ್ದಾರೆ. ಈ ಸಂಸ್ಥೆಯ ಮೂಲಕ ಹಲವಾರು ಮಂದಿ ಮಹಿಳೆಯರು ಸಿರಿಧಾನ್ಯವನ್ನು ಬೆಳೆಯುತ್ತಿದ್ದಾರೆ. ಅದರ ಮೂಲಕ ಸಿರಿಧಾನ್ಯಗಳ ಹಿಟ್ಟನ್ನೂ ತಯಾರಿಸುತ್ತಿದ್ದಾರೆ. ಈ ಸಂಸ್ಥೆಯ ಮೂಲಕ ಅವರು ತಮ್ಮ ಜೀವನವನ್ನು ಕಂಡುಕೊಂಡಿದ್ದಾರೆ ಎಂದರು.

ಕಲಬುರಗಿಯಲ್ಲಿಯೇ ಇರುವ ಅಳಂದ ಭೂತಾಯಿ ಮಿಲೆಟ್ಸ್‌ ಫಾರ್ಮರ್ಸ್‌ ಪ್ರೊಡ್ನೂಸರ್ಸ್‌ ಕಂಪೆನಿ ಕಳೆದ ವರ್ಷ ಭಾರತದ ಸಿರಿಧಾನ್ಯಗಳ ಸಂಶೋಧನ ಮಂಡಳಿಯ ವ್ಯಾಪ್ತಿಯಲ್ಲಿ ಕೆಲಸ ಮಾಡಲು ಆರಂಭಿಸಿದೆ ಎಂದು ಪ್ರಧಾನಿ ಹೇಳಿದ್ದಾರೆ.

ಟಾಪ್ ನ್ಯೂಸ್

ರಾಜಧಾನಿಯಲ್ಲಿ ಮೇಳೈಸಿದ ಸ್ಟಾರ್‌ ನ್ಪೋಟ್ಸ್‌ನ “ಟ್ರೋಫಿ ಟೂರ್‌’

ರಾಜಧಾನಿಯಲ್ಲಿ ಮೇಳೈಸಿದ ಸ್ಟಾರ್‌ ಸ್ಪೋರ್ಟ್ಸ್ ನ “ಟ್ರೋಫಿ ಟೂರ್‌’

HDK

50 ಕೊಡ್ತಿರಿ ಅಂತ ಗೊತ್ತಿದೆ,ಬೇಕಿರೋದು 123 ಸ್ಥಾನ : ಹೆಚ್.ಡಿ.ಕುಮಾರಸ್ವಾಮಿ

14-wwqwe

ಮಧ್ಯಪ್ರದೇಶದಲ್ಲಿ 230 ರಲ್ಲಿ ಬಿಜೆಪಿ 200ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ: ನಡ್ಡಾ

1-ww-ewewe

ಮೋದಿ ಸರಕಾರ 9 ವರ್ಷಗಳಲ್ಲಿ ಏನು ಕಡಿದು ಗುಡ್ಡೆ ಹಾಕಿದೆ: ನಲಪಾಡ್ ಪ್ರಶ್ನೆ

1-scadsadsad

ಅಂದು ಮೋದಿ ಉಪನಾಮ ಟೀಕೆ…; ಇಂದು ಖುಷ್ಬು ಟ್ವೀಟ್ ವೈರಲ್

ಸಲ್ಮಾನ್ ಖಾನ್ ಬೆದರಿಕೆ ಪ್ರಕರಣ: ಆರೋಪಿ ಮುಂಬೈ ಪೊಲೀಸರ ವಶಕ್ಕೆ

ಬಾಲಿವುಡ್ ನಟ ಸಲ್ಮಾನ್ ಖಾನ್​ಗೆ ಬೆದರಿಕೆ ಪ್ರಕರಣ: ಆರೋಪಿ ಮುಂಬೈ ಪೊಲೀಸರ ವಶಕ್ಕೆ

Forest Department Case Against UP Man Who Rescued, Cared For Sarus Crane

ಕೊಕ್ಕರೆಯನ್ನು ರಕ್ಷಿಸಿ ಸಾಕಿದ್ದ ಆರಿಫ್ ಖಾನ್ ಗೆ ಅರಣ್ಯ ಇಲಾಖೆ ನೋಟಿಸ್



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-wwqwe

ಮಧ್ಯಪ್ರದೇಶದಲ್ಲಿ 230 ರಲ್ಲಿ ಬಿಜೆಪಿ 200ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ: ನಡ್ಡಾ

1-scadsadsad

ಅಂದು ಮೋದಿ ಉಪನಾಮ ಟೀಕೆ…; ಇಂದು ಖುಷ್ಬು ಟ್ವೀಟ್ ವೈರಲ್

ಸಲ್ಮಾನ್ ಖಾನ್ ಬೆದರಿಕೆ ಪ್ರಕರಣ: ಆರೋಪಿ ಮುಂಬೈ ಪೊಲೀಸರ ವಶಕ್ಕೆ

ಬಾಲಿವುಡ್ ನಟ ಸಲ್ಮಾನ್ ಖಾನ್​ಗೆ ಬೆದರಿಕೆ ಪ್ರಕರಣ: ಆರೋಪಿ ಮುಂಬೈ ಪೊಲೀಸರ ವಶಕ್ಕೆ

Forest Department Case Against UP Man Who Rescued, Cared For Sarus Crane

ಕೊಕ್ಕರೆಯನ್ನು ರಕ್ಷಿಸಿ ಸಾಕಿದ್ದ ಆರಿಫ್ ಖಾನ್ ಗೆ ಅರಣ್ಯ ಇಲಾಖೆ ನೋಟಿಸ್

ರಾಹುಲ್ ವಿಚಾರದಲ್ಲಿ ಕಾಂಗ್ರೆಸ್ ಸತ್ಯಾಗ್ರಹ ನಡೆಸುವುದು ವಿಪರ್ಯಾಸವೇ ಸರಿ: ಯುಪಿ ಸಿಎಂ ಯೋಗಿ

ರಾಹುಲ್ ವಿಚಾರದಲ್ಲಿ ಕಾಂಗ್ರೆಸ್ ಸತ್ಯಾಗ್ರಹ ನಡೆಸುವುದು ವಿಪರ್ಯಾಸವೇ ಸರಿ: ಯುಪಿ ಸಿಎಂ ಯೋಗಿ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

ರಾಜಧಾನಿಯಲ್ಲಿ ಮೇಳೈಸಿದ ಸ್ಟಾರ್‌ ನ್ಪೋಟ್ಸ್‌ನ “ಟ್ರೋಫಿ ಟೂರ್‌’

ರಾಜಧಾನಿಯಲ್ಲಿ ಮೇಳೈಸಿದ ಸ್ಟಾರ್‌ ಸ್ಪೋರ್ಟ್ಸ್ ನ “ಟ್ರೋಫಿ ಟೂರ್‌’

HDK

50 ಕೊಡ್ತಿರಿ ಅಂತ ಗೊತ್ತಿದೆ,ಬೇಕಿರೋದು 123 ಸ್ಥಾನ : ಹೆಚ್.ಡಿ.ಕುಮಾರಸ್ವಾಮಿ

14-wwqwe

ಮಧ್ಯಪ್ರದೇಶದಲ್ಲಿ 230 ರಲ್ಲಿ ಬಿಜೆಪಿ 200ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ: ನಡ್ಡಾ

1-ww-ewewe

ಮೋದಿ ಸರಕಾರ 9 ವರ್ಷಗಳಲ್ಲಿ ಏನು ಕಡಿದು ಗುಡ್ಡೆ ಹಾಕಿದೆ: ನಲಪಾಡ್ ಪ್ರಶ್ನೆ

1-scadsadsad

ಅಂದು ಮೋದಿ ಉಪನಾಮ ಟೀಕೆ…; ಇಂದು ಖುಷ್ಬು ಟ್ವೀಟ್ ವೈರಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.