ಎಚ್ಚರ ತಪ್ಪಿದರೆ ಅಪಾಯ; ಲಸಿಕೆ ವಿತರಣೆ ತ್ವರಿತಗತಿಗೆ ರಾಜ್ಯಗಳಿಗೆ ಕೇಂದ್ರ ಸಲಹೆ
Team Udayavani, Oct 10, 2021, 5:50 AM IST
ನವದೆಹಲಿ: ಹಬ್ಬಗಳನ್ನು ಆಚರಿಸುವಾಗ ಸರ್ಕಾರದ ಮಾರ್ಗಸೂಚಿಗಳನ್ನು ನಿರ್ಲಕ್ಷಿಸಿದರೆ, ಕೋವಿಡ್ ನಿಯಂತ್ರಣವು ಹಳಿ ತಪ್ಪುವ ಅಪಾಯವಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನಸುಖ್ ಮಾಂಡವೀಯ ಹೇಳಿದ್ದಾರೆ.
ಕೋವಿಡ್ ನಿಯಮಾವಳಿಗಳನ್ನು ಶಿಸ್ತುಬದ್ಧವಾಗಿ ಪಾಲಿಸುವುದು ಮತ್ತು ಲಸಿಕೆ ವಿತರಣೆಗೆ ವೇಗ ನೀಡುವುದು ಸೋಂಕು ನಿಯಂತ್ರಣಕ್ಕಿರುವ ಮಾರ್ಗಗಳು. ಹಬ್ಬಗಳ ಸಮಯದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ, ಮುಂದೆ ಅಪಾಯ ಎದುರಿಸಬೇಕಾಗುತ್ತದೆ ಎಂದೂ ಅವರು ಎಚ್ಚರಿಸಿದ್ದಾರೆ.
ಕರ್ನಾಟಕ ಸೇರಿದಂತೆ 19 ರಾಜ್ಯಗಳ ಪ್ರಧಾನ ಕಾರ್ಯದರ್ಶಿಗಳು ಹಾಗೂ ರಾಷ್ಟ್ರೀಯ ಆರೋಗ್ಯ ಮಿಷನ್ನ ನಿರ್ದೇಶಕರೊಂದಿಗೆ ಶನಿವಾರ ನಡೆದ ಕೋವಿಡ್ ಲಸಿಕೆಯ ಪ್ರಗತಿ ಪರಿಶೀಲನೆ ವೇಳೆ ಸಚಿವ ಮಾಂಡವಿಯ ಈ ಮಾತುಗಳನ್ನಾಡಿದ್ದಾರೆ.
ಜತೆಗೆ, ಭಾರತದಲ್ಲಿ ಈಗಾಗಲೇ 94 ಕೋಟಿ ಡೋಸ್ ಲಸಿಕೆ ವಿತರಣೆ ಪೂರ್ಣಗೊಂಡಿದೆ. ಈ 19 ರಾಜ್ಯಗಳು ಲಸಿಕೆ ವಿತರಣೆ ಪ್ರಕ್ರಿಯೆಗೆ ವೇಗ ನೀಡಿದರೆ, ದೇಶವು ಶೀಘ್ರದಲ್ಲೇ 100 ಕೋಟಿ ಡೋಸ್ ಲಸಿಕೆ ವಿತರಣೆ ಪೂರ್ಣಗೊಳಿಸಲಿದೆ ಎಂದೂ ಅವರು ಹೇಳಿದ್ದಾರೆ.
206 ದಿನಗಳಲ್ಲೇ ಕನಿಷ್ಠ ಕೇಸು:
ದೇಶಾದ್ಯಂತ ಶುಕ್ರವಾರದಿಂದ ಶನಿವಾರಕ್ಕೆ 24 ಗಂಟೆಗಳಲ್ಲಿ 19,740 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 248 ಮಂದಿ ಸಾವಿಗೀಡಾಗಿದ್ದಾರೆ. ಕಳೆದ 206 ದಿನಗಳಲ್ಲೇ ದಾಖಲಾದ ಕನಿಷ್ಠ ಪ್ರಕರಣ ಇದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ