ಬಹುಕೋಟಿ ಮೇವು ಹಗರಣ: ಬಿಹಾರ ಮಾಜಿ ಸಿಎಂ ಲಾಲುಪ್ರಸಾದ್ ಗೆ ಹೈಕೋರ್ಟ್ ಜಾಮೀನು
ಖಜಾನೆಯಿಂದ 3.13 ಕೋಟಿ ಹಣವನ್ನು ವಿತ್ ಡ್ರಾ ಮಾಡಿದ ಪ್ರಕರಣದಲ್ಲಿ ಕೋರ್ಟ್ ಏಳು ವರ್ಷಗಳ ಜೈಲುಶಿಕ್ಷೆ ವಿಧಿಸಿತ್ತು.
Team Udayavani, Apr 17, 2021, 12:53 PM IST
ನವದೆಹಲಿ: ಬಹುಕೋಟಿ ಮೇವು ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲುಶಿಕ್ಷೆ ಅನುಭವಿಸುತ್ತಿದ್ದ ರಾಷ್ಟ್ರೀಯ ಜನತಾ ದಳ(ಆರ್ ಜೆಡಿ)ದ ಮುಖ್ಯಸ್ಥ ಲಾಲುಪ್ರಸಾದ್ ಯಾದವ್ ಗೆ ಜಾರ್ಖಂಡ್ ಹೈಕೋರ್ಟ್ ಶನಿವಾರ(ಏ.17) ಜಾಮೀನು ನೀಡಿದೆ.
ಇದನ್ನೂ ಓದಿ:ದಾರಿ ತಪ್ಪಿ ದೆಹಲಿ ತಲುಪಿದ ವೃದ್ಧೆ;ಕರಳು ಬಳ್ಳಿಗೆ ಸೇರಿಸಿದ ಯೋಧ
ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲುಪ್ರಸಾದ್ ಯಾದವ್ ಡುಮ್ಕಾ ಖಜಾನೆ ಪ್ರಕರಣಕ್ಕೆ(ಮೇವು ಹಗರಣ) ಸಂಬಂಧಿಸಿದಂತೆ ಜೈಲುಶಿಕ್ಷೆ ಅನುಭವಿಸುತ್ತಿದ್ದರು. ಜಾರ್ಖಂಡ್(ಹಿಂದಿನ ಬಿಹಾರ) ನಗರದಲ್ಲಿನ ಖಜಾನೆಯಿಂದ 3.13 ಕೋಟಿ ರೂಪಾಯಿ ತೆಗೆದ ಪ್ರಕರಣದಲ್ಲಿ ಲಾಲು ಪ್ರಸಾದ್ ದೋಷಿಯಾಗಿದ್ದರು.
2021ರ ಫೆಬ್ರುವರಿ 19ರಂದು ಲಾಲುಪ್ರಸಾದ್ ಯಾದವ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿತ್ತು. ಕಾನೂನು ಬಾಹಿರವಾಗಿ ಡುಮ್ಕಾ ಖಜಾನೆಯಿಂದ 3.13 ಕೋಟಿ ಹಣವನ್ನು ವಿತ್ ಡ್ರಾ ಮಾಡಿದ ಪ್ರಕರಣದಲ್ಲಿ ಕೋರ್ಟ್ ಏಳು ವರ್ಷಗಳ ಜೈಲುಶಿಕ್ಷೆ ವಿಧಿಸಿತ್ತು.
ಲಾಲುಪ್ರಸಾದ್ ಯಾದವ್ ಈಗ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈಗಾಗಲೇ ಮೇವು ಹಗರಣಕ್ಕೆ ಸಂಬಂಧಿಸಿದ ನಾಲ್ಕು ಪ್ರಕರಣಗಳಲ್ಲಿ ಮೂರು ಪ್ರಕರಣದಲ್ಲಿ ಜಾಮೀನು ಪಡೆದಿದ್ದರು. ಡುಮ್ಕಾ ಪ್ರಕರಣದಲ್ಲಿ ಜಾಮೀನು ಪಡೆದಿರುವ ಲಾಲುಪ್ರಸಾದ್ ಯಾದವ್ ಆಸ್ಪತ್ರೆಯಿಂದ ಡಿಸ್ ಚಾರ್ಜ್ ಆದ ಮೇಲೆ ಮನೆಗೆ ತೆರಳಬಹುದಾಗಿದೆ ಎಂದು ವರದಿ ತಿಳಿಸಿದೆ.
ಕಳೆದ ಅಕ್ಟೋಬರ್ ನಲ್ಲಿ ಮೇವು ಹಗರಣಕ್ಕೆ ಸಂಬಂಧಿಸಿದ ಚೈಬಾಸಾ ಖಜಾನೆ ಪ್ರಕರಣದಲ್ಲಿ ಲಾಲುಪ್ರಸಾದ್ ಯಾದವ್ ಜಾಮೀನು ದೊರಕಿತ್ತು. 2017ರಿಂದ ಜೈಲುಶಿಕ್ಷೆ ಒಳಗಾಗಿದ್ದ ಲಾಲುಪ್ರಸಾದ್ ಯಾದವ್ ಅನಾರೋಗ್ಯದಿಂದ ಜಾರ್ಖಂಡ್ ನ ರಾಜೇಂದ್ರ ಇನ್ಸ್ ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆರೋಗ್ಯ ಸ್ಥಿತಿ ಗಂಭೀರವಾದ ಪರಿಣಾಮ ಜನವರಿಯಲ್ಲಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ