
ಗೋವಾ ಸಮುದ್ರ ತೀರದಲ್ಲಿ ಮದುವೆಯಾಗುವ ಕನಸು ಕಾಣುತ್ತಿದ್ದವರಿಗೆ ಇನ್ನು ಹೆಚ್ಚು ಖರ್ಚು
Team Udayavani, Mar 26, 2023, 4:22 PM IST

ಪಣಜಿ: ಮದುವೆಯನ್ನು ಅನೇಕ ಜೋಡಿಗಳು ಹೆಚ್ಚಿನ ವೆಚ್ಚದಲ್ಲಿ ಆಚರಿಸುತ್ತಾರೆ. ಅನೇಕ ಜನರು ಹಣಕ್ಕಿಂತ ಹೆಚ್ಚಾಗಿ ತಮ್ಮ ಮದುವೆಯನ್ನು ಸ್ಮರಣೀಯವಾಗಿಸಲು ಪ್ರಯತ್ನಿಸುತ್ತಾರೆ. ಅದಕ್ಕಾಗಿಯೇ ಅನೇಕ ಜನರು ಗೋವಾದ ಸಮುದ್ರತೀರದಲ್ಲಿ ಮದುವೆಯಾಗಲು ಆಯ್ಕೆ ಮಾಡುತ್ತಾರೆ. ಆದರೆ ಇದೀಗ ಗೋವಾದ ಸಮುದ್ರ ತೀರದಲ್ಲಿ ಮದುವೆಯಾಗುವ ಕನಸು ಕಾಣುತ್ತಿದ್ದವರಿಗೆ ಹೆಚ್ಚಿನ ಹಣ ಖರ್ಚು ಮಾಡುವ ಅನಿವಾರ್ಯತೆ ಎದುರಾಗಿದೆ.
ಈಗ ಗೋವಾದ ಕಡಲತೀರದಲ್ಲಿ ಮದುವೆಯಾಗುವವರು ಹೆಚ್ಚಿನ ಹಣವನ್ನು ಖರ್ಚು ಮಾಡಬೇಕಾಗುತ್ತದೆ. ಗೋವಾ ಕರಾವಳಿ ವಲಯ ನಿರ್ವಹಣಾ ಪ್ರಾಧಿಕಾರ (ಸಿಜೆಡ್ಎಂಎ) ಈ ನಿರ್ಧಾರ ಕೈಗೊಂಡಿದೆ. ಹಠಾತ್ ಮದುವೆ ಸಮಾರಂಭ ಕುರಿತಂತೆ ಈ ನಿರ್ಧಾರವನ್ನು ತೆಗೆದುಕೊಂಡ ನಂತರ, ವಧು ವರರು ಮದುವೆಗಾಗಿ ಈ ಆಸೆಯನ್ನು ಪೂರೈಸಲು ಹೆಚ್ಚು ಹಣವನ್ನು ಖರ್ಚು ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ. ಸಿಜೆಡ್ಎಂಎ ಕಡಲ ತೀರದಲ್ಲಿ ತಾತ್ಕಾಲಿಕ ಮದುವೆ ಸೆಟ್ ನಿರ್ಮಿಸಲು ಮತ್ತು ಪರವಾನಗಿಗಳಿಗೆ ಶುಲ್ಕವನ್ನು ದ್ವಿಗುಣಗೊಳಿಸಿದೆ. ಕಡಲತೀರದ ಮದುವೆಗಳು, ಕಡಲತೀರದ ಇತರ ಕಾರ್ಯಕ್ರಮಗಳಿಗೆ ದಿನಕ್ಕೆ 50,000 ರೂ. ದಿಂದ ಶುಲ್ಕ ಈಗ ದಿನಕ್ಕೆ 1 ಲಕ್ಷ ರೂ. ಗೆ ಹೆಚ್ಚಳ ಮಾಡಲಾಗಿದೆ. ಇದರಿಂದಾಗಿ ಗೋವಾ ಬೀಚ್ಗಳಲ್ಲಿ ಮದುವೆಯಾಗುವ ಹಲವರ ಕನಸು ನನಸಾಗಲು ಹೆಚ್ಚಿನ ಹಣ ವ್ಯಯಿಸಬೇಕಾಗಲಿದೆ.
ಪ್ರಾಧಿಕಾರವು ಈಗ ಪ್ರತಿ ಚದರ ಮೀಟರ್ಗೆ 500 ರೂ.ಗಳಿಂದ ಪ್ರತಿ ಚದರ ಮೀಟರ್ಗೆ 1,000 ರೂ. ಗಳಿಗೆ ಹೆಚ್ಚಳ ಮಾಡಿದೆ. ದಡದಲ್ಲಿರುವ ಗುಡಿಸಲು ಮತ್ತು ಕಾಟೇಜ್ಗಳಿಗೆ ಮದುವೆ ನಡೆಸಲು ಪ್ರತಿ ಚದರ ಮೀಟರ್ಗೆ 100 ರೂ.ನಿಂದ 500 ರೂ. ಗೆ ಹೆಚ್ಚಳ ಮಾಡಲಾಗಿದೆ. ಬೀಚ್ಗಳಲ್ಲಿ ಶಿಕ್ಷಣ ಸಂಸ್ಥೆಗಳ ಕಾರ್ಯಕ್ರಮಗಳಿಗೆ ಕೇವಲ ಶೇ.75ರಷ್ಟು ರಿಯಾಯಿತಿ ನೀಡಲಾಗುವುದು. ಸರ್ಕಾರಿ ಮತ್ತು ಅನುದಾನರಹಿತ ಸಂಸ್ಥೆಗಳಿಗೆ ಶೇ 50 ರಷ್ಟು ರಿಯಾಯಿತಿ ನೀಡಲಾಗುವುದು. ಬೀಚ್ ಪರಿಸರದಲ್ಲಿ ಹೊಸ ಹೋಟೆಲ್ ನಿರ್ಮಾಣಕ್ಕೆ ಈಗ ಪ್ರತಿ ಚದರ ಮೀಟರ್ಗೆ 500 ರೂ. ಗಳಿಂದ 1,000 ರೂ.ಗೆ ಶುಲ್ಕ ಹೆಚ್ಚಳ ಮಾಡಲಾಗಿದೆ.
ಮರದ ಜೆಟ್ಟಿ ನಿರ್ಮಿಸಲು ಅಥವಾ ತೇಲುವ ಜೆಟ್ಟಿ ನಿರ್ಮಾಣಕ್ಕೆ 1 ಲಕ್ಷ ರೂ., ತಾತ್ಕಾಲಿಕ ಜೆಟ್ಟಿಗೆ 2 ಲಕ್ಷ ರೂ. ನಿವಾಸಿಗಳು ತಡೆಗೋಡೆಗೆ ರೂ 25,000 ಪಾವತಿಸಬೇಕಾಗುತ್ತದೆ ಮತ್ತು ವ್ಯಾಪಾರಗಳು ರೂ 50,000 ರೂ ಶುಲ್ಕ ಪಾವತಿಸಬೇಕಾಗುತ್ತದೆ ಎಂದು ಗೋವಾ ಕರಾವಳಿ ವಲಯ ನಿರ್ವಹಣಾ ಪ್ರಾಧಿಕಾರ ಸ್ಪಷ್ಟಪಡಿಸಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Express train ಬರುವ ವೇಳೆ ಟ್ರ್ಯಾಕ್ ಮೇಲೆ ಲಾರಿ ಟೈರ್ ಗಳು; ಆರೋಪಿಗಳಿಗೆ ಶೋಧ

NCB ಯಿಂದ ನಿಷೇಧಿತ ಮಾದಕವಸ್ತು ಸಹಿತ ಮಹಿಳೆಯ ಬಂಧನ

Odisha trains ಅವಘಡ: ಪ್ರಾಥಮಿಕ ತನಿಖೆಯಲ್ಲಿ ಕಂಡುಬಂದದ್ದೇನು?

Train Tragedy ಜವಾಬ್ದಾರರಿಗೆ ಕಠಿಣ ಶಿಕ್ಷೆಯಾಗುತ್ತದೆ: ಒಡಿಶಾದಲ್ಲಿ ಪ್ರಧಾನಿ ಮೋದಿ

India’s Train Tragedy: 1981-2023ರ ನಡುವೆ ಭಾರತದಲ್ಲಿ ನಡೆದ ಭೀಕರ ರೈಲು ದುರಂತಗಳಿವು…
MUST WATCH

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ
ಹೊಸ ಸೇರ್ಪಡೆ

ಲಂಚ ನೀಡಬೇಡಿ, ಮಧ್ಯವರ್ತಿಗಳ ಬಗ್ಗೆ ಎಚ್ಚರದಿಂದಿರಿ: ಶಾಸಕ ಹರೀಶ್ಗೌಡ

ಸಿಡಿಲಿಗೆ ಬಲಿಯಾಗಿದ್ದ ಹರೀಶ್ ಕುಟುಂಬಕ್ಕೆ 5 ಲಕ್ಷ ರೂ. ಚೆಕ್ ವಿತರಣೆ

Congress ದೌರ್ಜನ್ಯ ತಡೆಯಲು ಶೀಘ್ರದಲ್ಲೇ ಸಹಾಯವಾಣಿ: ತೇಜಸ್ವಿ ಸೂರ್ಯ

ಕಾರ್ಕಳ: ಮೀನಿನ ಗೊಬ್ಬರ ಸಾಗಿಸುತ್ತಿದ್ದ ಲಾರಿ ಮರಕ್ಕೆ ಢಿಕ್ಕಿ: ಗಾಯ

ರೈಲು ದುರಂತ: ಕೋಲ್ಕತಾದಲ್ಲಿ ಸಂಕಷ್ಟ; ಕ್ರೀಡಾಪಟುಗಳಿಗೆ ರಾಜ್ಯ ಸರಕಾರದ ನೆರವು