ಬಲವಂತದ ಮತಾಂತರ ಜಾಮೀನು ರಹಿತ ಅಪರಾಧ
Team Udayavani, Mar 14, 2018, 2:38 PM IST
ಡೆಹ್ರಾಡೂನ್: ಉತ್ತರಾಖಂಡ ಸಂಪುಟವು “ಧರ್ಮ ಸ್ವತಂತ್ರ ಅಭಿಯಾನ’ ಎಂಬ ಕರಡು ವಿಧೇಯಕಕ್ಕೆ ಒಪ್ಪಿಗೆ ನೀಡಿದ್ದು, ಅದರಂತೆ ಇನ್ನು ಮುಂದೆ ಒತ್ತಾಯಪೂರ್ವಕ ಮತ್ತು ಅಕ್ರಮ ಮತಾಂತರ ಮಾಡುವುದು ಜಾಮೀನುರಹಿತ ಅಪರಾಧವಾಗಲಿದೆ.
ಬಲವಂತವಾಗಿ, ಲಂಚ ನೀಡಿ ಅಥವಾ ಆಮಿಷವೊಡ್ಡಿ ಮತಾಂತರ ಮಾಡುವಂಥ ಘಟನೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ವಿಧೇಯಕದ ಅನ್ವಯ, ಯಾರಾದರೂ ಇಂಥ ತಪ್ಪು ಮಾಡಿರುವುದು ಸಾಬೀತಾದರೆ ಅಂಥವರಿಗೆ ಒಂದರಿಂದ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಅದರಲ್ಲೂ, ಮತಾಂತರಗೊಂಡ ಸಂತ್ರಸ್ತರು ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ವರ್ಗದವರಾಗಿದ್ದರೆ, ತಪ್ಪಿತಸ್ಥರಿಗೆ ಕನಿಷ್ಠ 2 ವರ್ಷ ಜೈಲು ಖಚಿತ. ಇದೇ ವೇಳೆ, ವ್ಯಕ್ತಿ ಸ್ವಇಚ್ಛೆಯಿಂದ ಮತಾಂತರವಾಗುವುದಿದ್ದರೆ, ಒಂದು ತಿಂಗಳ ಮೊದಲೇ ಜಿಲ್ಲಾಧಿಕಾರಿಗೆ ಅಫಿಡವಿಟ್ ಸಲ್ಲಿಸಬೇಕು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ