ಕಾಂಗ್ರೆಸ್ ಹಿರಿಯ ಮುಖಂಡ, ಅಸ್ಸಾಂ ಮಾಜಿ ಮುಖ್ಯಮಂತ್ರಿ ಗೊಗೊಯಿ ವಿಧಿವಶ
ಕಾರ್ಯಕ್ರಮವನ್ನು ಅರ್ಧದಲ್ಲಿಯೇ ರದ್ದುಗೊಳಿಸಿ ಗುವಾಹಟಿಗೆ ವಾಪಸ್ ಆಗಿರುವುದಾಗಿ ಸರ್ಬಾನಂದಾ ಟ್ವೀಟ್ ಮೂಲಕ ಮಾಹಿತಿ ನೀಡಿದ್ದರು.
Team Udayavani, Nov 23, 2020, 6:19 PM IST
ನವದೆಹಲಿ: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್ ಗೊಗೊಯಿ(86ವರ್ಷ) ಸೋಮವಾರ(ನವೆಂಬರ್ 23, 2020) ಸಂಜೆ ವಿಧಿವಶರಾಗಿರುವುದಾಗಿ ಆರೋಗ್ಯ ಸಚಿವ ಹಿಮಂತಾ ಬಿಸ್ವಾ ತಿಳಿಸಿದ್ದಾರೆ.
ತರುಣ್ ಗೊಗೊಯಿ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಅಸ್ಸಾಂನಲ್ಲಿ ಸತತ ಮೂರು ಬಾರಿ ದಾಖಲೆಯ ಜಯ ಸಾಧಿಸಿತ್ತು. ಇದರೊಂದಿಗೆ ಗೊಗೊಯಿ ಅವರು 15 ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ್ದರು. ಅಸ್ಸಾಂನಲ್ಲಿ ದೀರ್ಘಾವಧಿ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ್ದ ಕೀರ್ತಿ ಗೊಗೊಯಿ ಅವರದ್ದಾಗಿದೆ.
ತರುಣ್ ಗೊಗೊಯಿ ಅವರು ಆರು ಬಾರಿ ಲೋಕಸಭಾ ಸಂಸದರಾಗಿ ಆಯ್ಕೆಯಾಗಿದ್ದರು. 1971ರಿಂದ 1985ರವರೆಗೆ ಜೋರ್ಹಾಟ್ ಕ್ಷೇತ್ರದಿಂದ ಆಯ್ಕೆಯಾಗಿದ್ದರು. ನಂತರ 1991ರಿಂದ 1998-2002ರವರೆಗೆ ಕಾಲಿಯಾಬೋರ್ ಕ್ಷೇತ್ರದಿಂದ ಆಯ್ಕೆಯಾಗಿದ್ದರು. 1976ರಲ್ಲಿ ಎಐಸಿಸಿಯ ಜಂಟಿ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದರು. ನಂತರ ಎಐಸಿಸಿಯ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಪ್ರಧಾನಿ ರಾಜೀವ್ ಗಾಂಧಿ ಸಂಪುಟದಲ್ಲಿ ಸಚಿವರಾಗಿದ್ದರು. ಪಿವಿ ನರಸಿಂಹ ರಾವ್ ಪ್ರಧಾನಿಯಾಗಿದ್ದಾಗ ಗೊಗೊಯಿ ಆಹಾರ ಮತ್ತು ಆಹಾರ ಸಂಸ್ಕರಣಾ ರಾಜ್ಯ ಖಾತೆ ಸಚಿವರಾಗಿದ್ದರು.
ಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್ ಗೊಗೊಯಿ ಅವರ ಆರೋಗ್ಯ ಸ್ಥಿತಿ ತುಂಬಾ ಗಂಭೀರವಾಗಿರುವುದಾಗಿ ಮುಖ್ಯಮಂತ್ರಿ ಸರ್ಬಾನಂದಾ ಸೊನೊವಾಲ್ ಸೋಮವಾರ(ನವೆಂಬರ್ 23, 2020)ಬೆಳಗ್ಗೆ ತಿಳಿಸಿದ್ದರು.
ಕಾಂಗ್ರೆಸ್ ಮುಖಂಡ ಗೊಗೊಯಿ ಅವರ ಆರೋಗ್ಯ ತೀವ್ರವಾಗಿ ಹದಗೆಟ್ಟ ವಿಷಯ ತಿಳಿಯುತ್ತಿದ್ದಂತೆಯೇ ಗೊಗೊಯಿ ಅವರಿಗೆ ಗೌರವ ನೀಡುವ ನಿಟ್ಟಿನಲ್ಲಿ ದಿಬ್ರುಗಢ್ ನಲ್ಲಿನ ಕಾರ್ಯಕ್ರಮವನ್ನು ಅರ್ಧದಲ್ಲಿಯೇ ರದ್ದುಗೊಳಿಸಿ ಗುವಾಹಟಿಗೆ ವಾಪಸ್ ಆಗಿರುವುದಾಗಿ ಸರ್ಬಾನಂದಾ ಟ್ವೀಟ್ ಮೂಲಕ ಮಾಹಿತಿ ನೀಡಿದ್ದರು.
ತರುಣ್ ಗೊಗೊಯಿ ನನಗೆ ಯಾವತ್ತೂ ತಂದೆಯ ಸಮಾನ. ಅವರ ಆರೋಗ್ಯ ಚೇತರಿಗಾಗಿ ಪ್ರಾರ್ಥಿಸುವ ಲಕ್ಷಾಂತರ ಜನರ ಜತೆ ನಾನೂ ಕೂಡಾ ಭಾಗಿಯಾಗುತ್ತಿದ್ದೇನೆ ಎಂದು ಈ ಸಂದರ್ಭದಲ್ಲಿ ಹೇಳಿದ್ದರು.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಯೋಧ್ಯೆಯಲ್ಲಿ ನಿರ್ಮಾಣಗೊಳ್ಳಲಿರುವ ಮಸೀದಿಗೆ ಸ್ವಾತಂತ್ರ್ಯ ಸೇನಾನಿ “ಅಹ್ಮದುಲ್ಲಾ ಶಾ’ ಹೆಸರು
ರೈತರು ಕೃಷಿ ಕಾನೂನುಗಳನ್ನು ಮುರಿಯುತ್ತಾರೆ : ಶರದ್ ಪವಾರ್
ಲಸಿಕೆ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದ್ರೆ ಕಠಿಣಕ್ರಮ ಕೈಗೊಳ್ಳಲು ರಾಜ್ಯಕ್ಕೆ ಕೇಂದ್ರ ಸೂಚನೆ
ಉತ್ತರ ಭಾರತದಲ್ಲಿ ಮುಂದುವರಿದ ಹಿಮಪಾತ; ಕೆಲವೆಡೆ ಆರೆಂಜ್ ಅಲರ್ಟ್
ಪಂಜಾಬ್ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ “AAP” ಅಖಾಡಕ್ಕೆ; 160 ಅಭ್ಯರ್ಥಿ ಹೆಸರು ಘೋಷಣೆ
MUST WATCH
ಉಡುಪಿ ಕೃಷ್ಣ ಮಠಕ್ಕೆ ಬಾಳೆ ಎಲೆಯನ್ನು ನೀಡುವ ಯುವಕ
ತೊಗರಿ ರಾಶಿಗೆ ಬೆಂಕಿ ಹಚ್ಚಿ, ಪಂಪ್ ಸೆಟ್ ವಿದ್ಯುತ್ ಸಂಪರ್ಕ ಕಡಿತ ಮಾಡಿದ ದುಷ್ಕರ್ಮಿಗಳು!
ಸಮುದ್ರದಲ್ಲಿ ಪದ್ಮಾಸನ ಭಂಗಿ: ಕಾಲಿಗೆ ಸರಪಳಿ ಬಿಗಿದು ಈಜಿ ದಾಖಲೆ ಬರೆದ ಗಂಗಾಧರ್ ಜಿ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಚಾಲಕನ ಅವಾಂತರ: ನೂರಾರು ಮಂದಿಯ ಪ್ರಾಣ ಉಳಿಸಿದ ಕಾಪು ಎಸ್ಐ
ಅಹಿತಕರ ಬೆಳವಣಿಗೆಗಳು ಕಂಡುಬಂದರೆ ವಾಟ್ಸಾಪ್ ಮೂಲಕ ಮಾಹಿತಿ ಹಂಚಿಕೊಳ್ಳಿ; Compol ಶಶಿಕುಮಾರ್
ಹೊಸ ಸೇರ್ಪಡೆ
ಪದ್ಮ ಪ್ರಶಸ್ತಿ ಪ್ರಕಟ : ಬಿ.ಎಂ.ಹೆಗ್ಡೆ, ಎಸ್.ಪಿಬಿಗೆ ಪದ್ಮವಿಭೂಷಣ, ಕಂಬಾರರಿಗೆ ಪದ್ಮಭೂಷಣ
ಯಾವ ಖಾತೆ ಕೊಟ್ಟರೂ ಸಮರ್ಥವಾಗಿ ನಿಭಾಯಿಸಿ, ಯಶಸ್ಸು ಸಾಧಿಸಬೇಕು: ಡಿಸಿಎಂ ಅಶ್ವಥ್ನಾರಾಯಣ
ಹುಣಸೋಡು ಸ್ಫೋಟ ಪ್ರಕರಣ :ಕ್ರಷರ್ ಮಾಲೀಕ ಸೇರಿ ನಾಲ್ವರನ್ನು ಬಂಧಿಸಿದ ಪೊಲೀಸರು
ಮೇಲುಕೋಟೆ ವಜ್ರಾಂಗಿ ಆಭರಣ ಅವ್ಯವಹಾರ ಪ್ರಕರಣ: ಅರ್ಚಕ ನರಸರಾಜಭಟ್ ನೇಮಕಕ್ಕೆ ಹೈಕೋರ್ಟ್ ತಡೆ
145 ದಿನಗಳ ಬಳಿಕ ಪರಪ್ಪನ ಅಗ್ರಹಾರ ಜೈಲಿನಿಂದ ನಟಿ ರಾಗಿಣಿ ಬಿಡುಗಡೆ