ಎಲ್ಲಾ ಅಕ್ರಮ ಬಯಲಿಗೆ ತರುತ್ತೇನೆ: ಬಿಜೆಪಿ ತೊರೆದ ಏಕ್ ನಾಥ್ ಖಡ್ಸೆ ಎನ್ ಸಿಪಿ ಸೇರ್ಪಡೆ
ನಾನು ಬಿಜೆಪಿ ಪಕ್ಷ ಕಟ್ಟಲು ಸಾಕಷ್ಟು ಶ್ರಮಿಸಿದ್ದೇನೆ. ನಾನು ಯಾವತ್ತೂ ಪಕ್ಷಕ್ಕೆ ದ್ರೋಹ ಎಸಗಿಲ್ಲ.
Team Udayavani, Oct 23, 2020, 6:45 PM IST
ಮುಂಬೈ:ಮಹಾರಾಷ್ಟ್ರ ಮಾಜಿ ಸಚಿವ, ಬಿಜೆಪಿ ಮಾಜಿ ಮುಖಂಡ ಏಕ್ ನಾಥ್ ಖಡ್ಸೆ ಶುಕ್ರವಾರ (ಅಕ್ಟೋಬರ್ 23, 2020) ಎನ್ ಸಿಪಿ ವರಿಷ್ಠ ಶರದ್ ಪವಾರ್ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಬಿಜೆಪಿಗೆ ಗುಡ್ ಬೈ ಹೇಳಿದ್ದ ಖಡ್ಸೆ ಎನ್ ಸಿಪಿಗೆ ಸೇರ್ಪಡೆಯಾಗಿದ್ದು, ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ವಿರುದ್ಧ ವಾಗ್ದಾಳಿ ನಡೆಸಿದ್ದರು.
ಎನ್ ಸಿಪಿ ಸೇರ್ಪಡೆ ನಂತರ ಸುದ್ದಿಗಾರರ ಜತೆ ಮಾತನಾಡಿದ ಖಡ್ಸೆ, ನಾನು ಬಿಜೆಪಿ ಪಕ್ಷ ಕಟ್ಟಲು ಸಾಕಷ್ಟು ಶ್ರಮಿಸಿದ್ದೇನೆ. ನಾನು ಯಾವತ್ತೂ ಪಕ್ಷಕ್ಕೆ ದ್ರೋಹ ಎಸಗಿಲ್ಲ. ಕೆಲವು ಮಹಿಳೆಯರು ನನ್ನ ವಿರುದ್ಧ ಆರೋಪ ಹೊರಿಸಿದ್ದರು. ಒಂದು ವೇಳೆ ನಾನು ಪಕ್ಷ ಬದಲಾಯಿಸಿದರೆ ನನ್ನ ಮನೆ ಮೇಲೆ ಇ.ಡಿ.ದಾಳಿ ನಡೆಸುವುದಾಗಿ ಹೇಳಿದ್ದರು. ಒಂದು ವೇಳೆ ನೀವು ಇ.ಡಿ ದಾಳಿ ನಡೆಸಿದರೆ, ನಾನು ಸಿ.ಡಿ. ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ.
ನಾನು 40 ವರ್ಷಗಳ ಕಾಲ ಬಿಜೆಪಿ ಪಕ್ಷದಲ್ಲಿದ್ದೆ. ಆದರೆ ನನಗೆ ಸಿಕ್ಕಿದ್ದು ಎಸಿಬಿ ವಿಚಾರಣೆ ಮತ್ತು ಲೈಂಗಿಕ ಕಿರುಕುಳದ ಆರೋಪ. ದೆಹಲಿಯಲ್ಲಿರುವ ನನ್ನ ಹಿರಿಯ ಮಿತ್ರರು ಎನ್ ಸಿಪಿ ಸೇರ್ಪಡೆಯಾಗುವಂತೆ ಸಲಹೆ ನಿಡಿದ್ದರು. ಬಿಜೆಪಿ ಹಿರಿಯ ನಾಯಕರೇ ಸತ್ಯ ಹೇಳಲು ಬಯಸುತ್ತಿದ್ದಾರೆ. ಆದರೆ ಅವರಿಗೆ ಹೇಳಲು ಸಾಧ್ಯವಾಗುತ್ತಿಲ್ಲ ಎಂದು ಖಡ್ಸೆ ಹೇಳಿದರು.
ಇದನ್ನೂ ಓದಿ:ವಿವಾಹ ವಿಚ್ಛೇದನ: ಪ್ರತಿ ತಿಂಗಳು ಪತ್ನಿಯೇ ಪತಿಗೆ ಜೀವನಾಂಶ ಕೊಡಬೇಕು: ಕೋರ್ಟ್ ಆದೇಶ!
ನನ್ನ ವಿರುದ್ಧ ಭೂ ಹಗರಣದ ಆರೋಪ ಹೊರಿಸಲಾಗಿತ್ತು. ಆದರೆ ಕೆಲವು ಜನರು ಎಷ್ಟು ಜಾಗವನ್ನು ಅಕ್ರಮವಾಗಿ ಮಾಡಿಕೊಂಡಿದ್ದಾರೆ ಎಂಬುದನ್ನು ಕೆಲವೇ ದಿನಗಳಲ್ಲಿ ಬಹಿರಂಗಪಡಿಸುವುದಾಗಿ ಖಡ್ಸೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
MUST WATCH
ಹೊಸ ಸೇರ್ಪಡೆ
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ