ಎಲ್ಲಾ ಅಕ್ರಮ ಬಯಲಿಗೆ ತರುತ್ತೇನೆ: ಬಿಜೆಪಿ ತೊರೆದ ಏಕ್ ನಾಥ್ ಖಡ್ಸೆ ಎನ್ ಸಿಪಿ ಸೇರ್ಪಡೆ
ನಾನು ಬಿಜೆಪಿ ಪಕ್ಷ ಕಟ್ಟಲು ಸಾಕಷ್ಟು ಶ್ರಮಿಸಿದ್ದೇನೆ. ನಾನು ಯಾವತ್ತೂ ಪಕ್ಷಕ್ಕೆ ದ್ರೋಹ ಎಸಗಿಲ್ಲ.
Team Udayavani, Oct 23, 2020, 6:45 PM IST
ಮುಂಬೈ:ಮಹಾರಾಷ್ಟ್ರ ಮಾಜಿ ಸಚಿವ, ಬಿಜೆಪಿ ಮಾಜಿ ಮುಖಂಡ ಏಕ್ ನಾಥ್ ಖಡ್ಸೆ ಶುಕ್ರವಾರ (ಅಕ್ಟೋಬರ್ 23, 2020) ಎನ್ ಸಿಪಿ ವರಿಷ್ಠ ಶರದ್ ಪವಾರ್ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಬಿಜೆಪಿಗೆ ಗುಡ್ ಬೈ ಹೇಳಿದ್ದ ಖಡ್ಸೆ ಎನ್ ಸಿಪಿಗೆ ಸೇರ್ಪಡೆಯಾಗಿದ್ದು, ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ವಿರುದ್ಧ ವಾಗ್ದಾಳಿ ನಡೆಸಿದ್ದರು.
ಎನ್ ಸಿಪಿ ಸೇರ್ಪಡೆ ನಂತರ ಸುದ್ದಿಗಾರರ ಜತೆ ಮಾತನಾಡಿದ ಖಡ್ಸೆ, ನಾನು ಬಿಜೆಪಿ ಪಕ್ಷ ಕಟ್ಟಲು ಸಾಕಷ್ಟು ಶ್ರಮಿಸಿದ್ದೇನೆ. ನಾನು ಯಾವತ್ತೂ ಪಕ್ಷಕ್ಕೆ ದ್ರೋಹ ಎಸಗಿಲ್ಲ. ಕೆಲವು ಮಹಿಳೆಯರು ನನ್ನ ವಿರುದ್ಧ ಆರೋಪ ಹೊರಿಸಿದ್ದರು. ಒಂದು ವೇಳೆ ನಾನು ಪಕ್ಷ ಬದಲಾಯಿಸಿದರೆ ನನ್ನ ಮನೆ ಮೇಲೆ ಇ.ಡಿ.ದಾಳಿ ನಡೆಸುವುದಾಗಿ ಹೇಳಿದ್ದರು. ಒಂದು ವೇಳೆ ನೀವು ಇ.ಡಿ ದಾಳಿ ನಡೆಸಿದರೆ, ನಾನು ಸಿ.ಡಿ. ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ.
ನಾನು 40 ವರ್ಷಗಳ ಕಾಲ ಬಿಜೆಪಿ ಪಕ್ಷದಲ್ಲಿದ್ದೆ. ಆದರೆ ನನಗೆ ಸಿಕ್ಕಿದ್ದು ಎಸಿಬಿ ವಿಚಾರಣೆ ಮತ್ತು ಲೈಂಗಿಕ ಕಿರುಕುಳದ ಆರೋಪ. ದೆಹಲಿಯಲ್ಲಿರುವ ನನ್ನ ಹಿರಿಯ ಮಿತ್ರರು ಎನ್ ಸಿಪಿ ಸೇರ್ಪಡೆಯಾಗುವಂತೆ ಸಲಹೆ ನಿಡಿದ್ದರು. ಬಿಜೆಪಿ ಹಿರಿಯ ನಾಯಕರೇ ಸತ್ಯ ಹೇಳಲು ಬಯಸುತ್ತಿದ್ದಾರೆ. ಆದರೆ ಅವರಿಗೆ ಹೇಳಲು ಸಾಧ್ಯವಾಗುತ್ತಿಲ್ಲ ಎಂದು ಖಡ್ಸೆ ಹೇಳಿದರು.
ಇದನ್ನೂ ಓದಿ:ವಿವಾಹ ವಿಚ್ಛೇದನ: ಪ್ರತಿ ತಿಂಗಳು ಪತ್ನಿಯೇ ಪತಿಗೆ ಜೀವನಾಂಶ ಕೊಡಬೇಕು: ಕೋರ್ಟ್ ಆದೇಶ!
ನನ್ನ ವಿರುದ್ಧ ಭೂ ಹಗರಣದ ಆರೋಪ ಹೊರಿಸಲಾಗಿತ್ತು. ಆದರೆ ಕೆಲವು ಜನರು ಎಷ್ಟು ಜಾಗವನ್ನು ಅಕ್ರಮವಾಗಿ ಮಾಡಿಕೊಂಡಿದ್ದಾರೆ ಎಂಬುದನ್ನು ಕೆಲವೇ ದಿನಗಳಲ್ಲಿ ಬಹಿರಂಗಪಡಿಸುವುದಾಗಿ ಖಡ್ಸೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!
CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Patanjali Ads case:ಖುದ್ದು ಹಾಜರಾಗಿ- ಬಾಬಾ ರಾಮ್ ದೇವ್, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್
Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್ ಗೆ RLJP ಮುಖಂಡ ಪರಾಸ್ ರಾಜೀನಾಮೆ
MUST WATCH
ಹೊಸ ಸೇರ್ಪಡೆ
OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?
Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!
ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್ ರೋಲ್ ನಲ್ಲಿ ಫಾಫಾ
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ