ಮಾಜಿ ಶಾಸಕರ ಮೊಮ್ಮಗನನ್ನು ಥಳಿಸಿ ಹತ್ಯೆಗೈದ ಗುಂಪು
Team Udayavani, Jan 9, 2023, 9:15 AM IST
ಲಕ್ನೋ: ಮಾಜಿ ಶಾಸಕರೊಬ್ಬರ ಮೊಮ್ಮಗನನ್ನು ಆಕ್ರೋಶಿತ ಗುಂಪೊಂದು ಥಳಿಸಿ ಹತ್ಯೆಗೈದ ಘಟನೆ ಉತ್ತರ ಪ್ರದೇಶದ ಕೋಪಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಮಹೂರ್ ಗ್ರಾಮದಲ್ಲಿ ನಡೆದಿದೆ.
ಹಿಮಾಂಶು ಸಿಂಗ್ (35) ಮೃತ ವ್ಯಕ್ತಿ. ಶನಿವಾರ ರಾತ್ರಿ ಈ ಘಟನೆ ನಡೆದಿದೆ. ಹಿಮಾಂಶು ಸಿಂಗ್ 1980 ರಲ್ಲಿ ಘೋಸಿ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾದ ದಿವಂಗತ ಕೇದಾರ್ ಸಿಂಗ್ ಅವರ ಮೊಮ್ಮಗ ಎಂದು ಪೊಲೀಸರು ಹೇಳಿದ್ದಾರೆ.
ಹಿಮಾಂಶು ಸಿಂಗ್ ಶನಿವಾರ ರಾತ್ರಿ ಕೋಪಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯ ಲೈರೊ ಡೊನ್ವಾರ್ ಗ್ರಾಮದಲ್ಲಿ ಪಂಚಾಯಿತಿಗೆ ಹೋಗಿದ್ದರು. ಅಲ್ಲಿ ಕೆಲ ಜನರೊಂದಿಗೆ ವಾಗ್ವಾದ ನಡೆದಿದೆ. ಇದೇ ವಾಗ್ವಾದ ಹೆಚ್ಚಾಗಿ, ಆಕ್ರೋಶಿತ ಗುಂಪಿನ ಏಳೆಂಟು ಜನ ಹಿಮಾಂಶು ಅವರ ಮೇಲೆ ಹಲ್ಲೆ ಮಾಡಿ, ಕೋಲಿನಿಂದ ಥಳಿಸಿದ್ದಾರೆ. ಅರೆ ಪ್ರಜ್ಞಾಸ್ಥಿತಿಯಲ್ಲಿ ಬಿದ್ದ ಹಿಮಾಂಶು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ ಆದರೆ ಅಲ್ಲಿ ಅವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಪ್ರಕರಣದ ತನಿಖೆ ನಡೆಸಲಾಗುತ್ತಿದ್ದು, ಸಂಬಂಧಿತ ಸೆಕ್ಷನ್ಗಳ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ