ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಬಿಜೆಪಿಗೆ; ದಿಲ್ಲಿಯಿಂದ ಸ್ಪರ್ಧೆ
Team Udayavani, Mar 22, 2019, 7:09 AM IST
ಹೊಸದಿಲ್ಲಿ : ಮಾಜಿ ಅಂತಾರಾಷ್ಟ್ರೀಯ ಕ್ರಿಕೆಟಿಗ ಗೌತಮ್ ಗಂಭೀರ್ ಇಂದು ಶುಕ್ರವಾರ ಬಿಜೆಪಿ ಸೇರಿದ್ದಾರೆ. ಅಂತೆಯೇ ಅವರು ರಾಷ್ಟ್ರ ರಾಜಧಾನಿಯ ಯಾವುದಾದರೂ ಒಂದು ಸ್ಥಾನದಿಂದ ಬಿಜೆಪಿ ಟಿಕೆಟ್ನಲ್ಲಿ ಲೋಕಸಭೆಗೆ ಸ್ಫರ್ಧಿಸುವ ನಿರೀಕ್ಷೆ ಇದೆ.
ಕೇಂದ್ರ ಸಚಿವರಾದ ಅರುಣ್ ಜೇತ್ಲಿ ಮತ್ತು ರವಿ ಶಂಕರ್ ಪ್ರಸಾದ್ ಅವರ ಸಮ್ಮುಖದಲ್ಲಿ ಗೌತಮ್ ಗಂಭೀರ್ ಅಧಿಕೃತವಾಗಿ ಭಾರತೀಯ ಜನತಾ ಪಕ್ಷವನ್ನು ಸೇರಿದರು.
ಒಬ್ಬ ಉತ್ತಮ ಆರಂಭಕಾರ ನಾಗಿ ಮಿಂಚಿದ್ದ ಗೌತಮ್ ಗಂಭೀರ್ 2011ರ ವಿಶ್ವ ಕಪ್ ಮತ್ತು 2007 ಟಿ-20 ವಿಶ್ವ ಕಪ್ ಗೆದ್ದ ಭಾರತ ತಂಡದ ಓರ್ವ ಪ್ರಮುಖ ಆಟಗಾರನಾಗಿದ್ದು ತಂಡದ ಗೆಲುವಿನಲ್ಲಿ ಮಹತ್ತರ ಪಾತ್ರ ವಹಿಸಿದ್ದರು.ಈಚೆಗಷ್ಟೇ ಗಂಭೀರ್ ಪದ್ಮಶ್ರೀ ಪ್ರಶಸ್ತಿಯಿಂದ ಪುರಸ್ಕತರಾಗಿದ್ದರು.
ಬಿಜೆಪಿಯ ಮೀನಾಕ್ಷಿ ಲೇಖೀ ಅವರು ಪ್ರಕೃತ ಪ್ರತಿನಿಧಿಸುತ್ತಿರುವ ನ್ಯೂಡೆಲ್ಲಿ ಕ್ಷೇತ್ರದಿಂದಲೇ ಗಂಭೀರ್ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!