ಹುತಾತ್ಮ ಪೊಲೀಸರ ಮರೆತ ಹಿಂದಿನ ಸರಕಾರಗಳು: ಪಿಎಂ
Team Udayavani, Oct 22, 2018, 12:56 PM IST
ಹೊಸದಿಲ್ಲಿ: “ರಾಷ್ಟ್ರಕ್ಕಾಗಿ ಮಡಿದ ಪೊಲೀಸರನ್ನು ಗೌರವಿಸುವ ಕಾರ್ಯ ನೆರವೇರಲು ಸ್ವಾತಂತ್ರಾನಂತರದ 70 ವರ್ಷಗಳು ಬೇಕಾದವು. ಹಿಂದಿನ ಸರಕಾರ ಗಳೇಕೆ ಈ ಬಗ್ಗೆ ನಿರ್ಲಕ್ಷ್ಯ ಧೋರಣೆ ತಾಳಿದ್ದವು ಎನ್ನುವುದೇ ಪ್ರಶ್ನಾರ್ಥಕ’ ಎಂದು ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ಪರೋಕ್ಷವಾಗಿ ಚಾಟಿ ಬೀಸಿದ್ದಾರೆ.
ಹೊಸದಿಲ್ಲಿಯಲ್ಲಿ ರವಿವಾರ ನೂತನವಾಗಿ ನಿರ್ಮಿಸಲಾದ “ರಾಷ್ಟ್ರೀಯ ಪೊಲೀಸ್ ಸ್ಮಾರಕ’ವನ್ನು ಲೋಕಾರ್ಪಣೆ ನೆರವೇರಿಸಿ ಮಾತನಾಡಿದ ಪ್ರಧಾನಿ ಮೋದಿ, “ರಾಷ್ಟ್ರೀಯ ಪೊಲೀಸ್ ಹುತಾತ್ಮ ದಿನ’ವನ್ನು ರಾಷ್ಟ್ರಕ್ಕೆ ಸಮರ್ಪಿಸುವುದಾಗಿ ಹೇಳಿದರು. ರಾಷ್ಟ್ರದ ಪೊಲೀಸ್ ಸಿಬ್ಬಂದಿ, ಪ್ಯಾರಾ ಮಿಲಿಟರಿ ಪಡೆ. ವಿಪತ್ತು ನಿರ್ವಹಣಾ ಪಡೆಗಳಲ್ಲಿ ಸೇವೆ ಸಲ್ಲಿಸಿದವರ ಬಗ್ಗೆ ಭಾವಪೂರ್ಣವಾದ ಮಾತುಗಳನ್ನಾಡಿದರು.
ದೇವರ ಆಯ್ಕೆ: 2014ರಲ್ಲಿ ನಾವು ಅಧಿಕಾರಕ್ಕೆ ಬಂದ ಬಳಿಕ ಇದಕ್ಕೆ ಅನುದಾನ ನೀಡಿದೆವು. ಪರಿಣಾಮ ಇಂದು ಇದಕ್ಕೆ ಸಾಕ್ಷಿಯಾಗುತ್ತಿದ್ದೇವೆ. ಬಹುಶಃ ಆ ದೇವರು ಇಂಥದ್ದೊಂದು ಸ್ಮಾರಕ ನಿರ್ಮಾಣ ಸೇವೆಗೆ ನನ್ನನ್ನು ಆಯ್ಕೆ ಮಾಡಿಕೊಂಡಿದ್ದರು’ ಅನಿಸುತ್ತದೆ ಎಂದು ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ