ಎನ್ ಸಿಪಿ ತೊರೆದ ತಾರಿಖ್ ಅನ್ವರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ
Team Udayavani, Oct 27, 2018, 11:47 AM IST
ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆ ಸನ್ನಿಹಿತವಾಗುತ್ತಿರುವ ಬೆನ್ನಲ್ಲೇ ರಾಜಕೀಯ ಬೆಳವಣಿಗೆ ಗರಿಗೆದರತೊಡಗಿದ್ದು, ಎನ್ ಸಿಪಿ(ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ) ಮಾಜಿ ಮುಖಂಡ ತಾರಿಖ್ ಅನ್ವರ್ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಸಮ್ಮುಖದಲ್ಲಿ ಶನಿವಾರ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಎನ್ ಸಿಪಿ ಸ್ಥಾಪಕರಲ್ಲಿ ಒಬ್ಬರಾಗಿದ್ದ ಅನ್ವರ್ ಮತ್ತು ಪಕ್ಷದ ಮುಖ್ಯಸ್ಥ ಶರದ್ ಪವಾರ್ ಜೊತೆಗಿನ ಭಿನ್ನಾಭಿಪ್ರಾಯದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 28ರಂದು ಪಕ್ಷವನ್ನು ತೊರೆದಿದ್ದರು. ರಫೇಲ್ ಡೀಲ್ ಗೆ ಸಂಬಂಧಿಸಿದಂತೆ ಪವಾರ್ ಪ್ರಧಾನಿ ಮೋದಿ ಅವರನ್ನು ಬೆಂಬಲಿಸಿ ಮಾತನಾಡಿದ್ದು, ಇದನ್ನು ಅನ್ವರ್ ವಿರೋಧಿಸಿದ್ದರು.
Congress President @RahulGandhi welcomes Shri @itariqanwar into the Congress family. pic.twitter.com/N54VkAQpJJ
— Congress (@INCIndia) October 27, 2018
ತದನಂತರ ನೀವು(ಅನ್ವರ್) ರಾಜಕೀಯ ಜೀವನ ಎಲ್ಲಿಂದ ಆರಂಭಿಸಿದ್ದರೋ ಅದೇ ಪಕ್ಷಕ್ಕೆ ಪುನಃ ಸೇರ್ಪಡೆಯಾಗುವುದಾದರೆ ಸ್ವಾಗತಿಸುವುದಾಗಿ ಕಾಂಗ್ರೆಸ್ ಪಕ್ಷ ಪ್ರತಿಕ್ರಿಯೆ ನೀಡಿತ್ತು. 1980ರಲ್ಲಿ ಅನ್ವರ್ ಬಿಹಾರ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿದ್ದರು. ಅಲ್ಲದೇ ಕಾಟಿಹಾರ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಜಯಗಳಿಸಿ ಸಂಸದರಾಗಿದ್ದರು. 1999ರಲ್ಲಿ ಪವಾರ್ ಹಾಗೂ ಮೇಘಾಲಯದ ದಿ.ಪಿಎ ಸಂಗ್ಮಾ ಜೊತೆಗೂಡಿ ಎನ್ ಸಿಪಿ ಸ್ಥಾಪನೆಯಾಗುವಲ್ಲಿ ಕೈಜೋಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ