ಸಕಲ ಸರ್ಕಾರಿ, ಸೇನಾ ಗೌರವದೊಂದಿಗೆ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅಂತ್ಯಕ್ರಿಯೆ
ಇಂದು ಬೆಳಗ್ಗೆ ಪ್ರಣಬ್ ಪಾರ್ಥಿವ ಶರೀರರವನ್ನು ದಿಲ್ಲಿಯ 10ನೇ ರಾಜಾಜಿ ಮಾರ್ಗದಲ್ಲಿರುವ ನಿವಾಸದಲ್ಲಿ ಇರಿಸಲಾಗಿತ್ತು.
Team Udayavani, Sep 1, 2020, 3:35 PM IST
ನವದೆಹಲಿ: ದೇಶಕಂಡ ಮುತ್ಸದ್ಧಿ ರಾಜಕಾರಣಿ, ಮಾಜಿ ರಾಷ್ಟ್ರಪತಿ, ಭಾರತ ರತ್ನ ಪ್ರಶಸ್ತಿ ಪುರಸ್ಕೃತ ಪ್ರಣಬ್ ಮುಖರ್ಜಿ (84) ಅವರ ಪಾರ್ಥಿವ ಶರೀರದ ಅಂತ್ಯ ಸಂಸ್ಕಾರ ಸಕಲ ಸರ್ಕಾರಿ ಹಾಗೂ ಸೇನಾ ಗೌರವಗಳೊಂದಿಗೆ ಮಂಗಳವಾರ(ಸೆಪ್ಟೆಂಬರ್ 01, 2020) ಲೋಧಿ ಚಿತಾಗಾರದಲ್ಲಿ ನಡೆಯಿತು.
ಪ್ರಣಬ್ ಪುತ್ರ ಅಭಿಜಿತ್ ಮುಖರ್ಜಿ ಅವರು ಅಂತಿಮ ವಿಧಿ, ವಿಧಾನ ನೆರವೇರಿಸಿದ್ದರು, ವಿದ್ಯುತ್ ಚಿತಾಗಾರದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗಿತ್ತು. ಕೇಂದ್ರ ಹಾಗೂ ಕೆಲವು ರಾಜ್ಯ ಸರ್ಕಾರಗಳು ಏಳು ದಿನಗಳ ಶೋಕಾಚರಣೆ ಘೋಷಿಸಿದ್ದವು.
ಇಂದು ಬೆಳಗ್ಗೆ ಪ್ರಣಬ್ ಪಾರ್ಥಿವ ಶರೀರರವನ್ನು ದಿಲ್ಲಿಯ 10ನೇ ರಾಜಾಜಿ ಮಾರ್ಗದಲ್ಲಿರುವ ನಿವಾಸದಲ್ಲಿ ಇರಿಸಲಾಗಿತ್ತು. ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಸೇರಿದಂತೆ ಹಲವು ಗಣ್ಯರು ಅಂತಿಮ ನಮನ ಸಲ್ಲಿಸಿದ್ದರು.
#WATCH Delhi: Former President #PranabMukherjee laid to rest with full military honours.
His last rites were performed at Lodhi crematorium today, under restrictions for #COVID19. pic.twitter.com/VbwzZG1xX9
— ANI (@ANI) September 1, 2020
ಕೋವಿಡ್ 19 ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಎಲ್ಲಾ ರೀತಿಯ ನಿಯಮಾವಳಿಯನ್ನು ಪಾಲಿಸಲಾಗಿತ್ತು ಎಂದು ವರದಿ ತಿಳಿಸಿದೆ. ಮೆದುಳು ಶಸ್ತ್ರಚಿಕಿತ್ಸೆಗಾಗಿ ಆರ್ಮಿ ರಿಸರ್ಚ್ ಆ್ಯಂಡ್ ರೆಫರಲ್ ಆಸ್ಪತ್ರೆಗೆ ಪ್ರಣಬ್ ಮುಖರ್ಜಿ ಆಗಮಿಸಿದ್ದ ವೇಳೆ ಕೋವಿಡ್ 19 ಇದ್ದಿರುವುದು ಪತ್ತೆಯಾಗಿತ್ತು. ಸರ್ಜರಿ ನಂತರ ಮುಖರ್ಜಿ ಅವರು ಕೋಮಾಕ್ಕೆ ಜಾರಿದ್ದರು, ಹಲವು ದಿನಗಳ ಕಾಲ ಆಸ್ಪತ್ರೆಯಲ್ಲಿದ್ದು ಚಿಕಿತ್ಸೆ ಫಲಕಾರಿಯಾಗದೆ ಆಗಸ್ಟ್ (2020) 30ರಂದು ಕೊನೆಯುಸಿರೆಳೆದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ
MUST WATCH
ಹೊಸ ಸೇರ್ಪಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ
ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?