ಸೈನಿಕನಾಗಿ ಬದಲಾಗಿದ್ದ ಮಾಜಿ ಉಗ್ರ ಗುಂಡಿನ ಕಾಳಗದಲ್ಲಿ ಹುತಾತ್ಮ!
Team Udayavani, Nov 27, 2018, 2:50 PM IST
ಜಮ್ಮು: ಉಗ್ರನಾಗಿ ಕಾಶ್ಮೀರ ಜಿಹಾದ್ ಚಳುವಳಿಯಲ್ಲಿ ಪಾಲ್ಗೊಂಡು ಪರಿವರ್ತನೆ ಜಗದ ನಿಯಮ ಎನ್ನುವ ಹಾಗೆ ಮನಪರಿವರ್ತನೆಯಾಗಿ ಸೈನಿಕರಿಗೆ ಶರಣಾಗಿ ಸೇನೆಗೆ ಸೇರ್ಪಡೆಯಾಗಿದ್ದ ನಾಜಿರ್ ಅಹ್ಮದ್ ವಾನಿ ಅವರು ಮಂಗಳವಾರ ಹುತಾತ್ಮರಾಗಿದ್ದಾರೆ.
ಭಾನುವಾರ ಶೋಪಿಯಾನ್ ನಲ್ಲಿ ನಡೆದ ಭೀಕರ ಗುಂಡಿನ ಕಾಳಗದಲ್ಲಿ ಉಗ್ರರ ಗುಂಡು ತಗುಲಿ 38 ರ ಹರೆಯದ ಲ್ಯಾನ್ಸ್ ನಾಯಕ್ ನಾಜಿರ್ ಅಹ್ಮದ್ ಖಾನ್ ಅವರು ಹುತಾತ್ಮರಾಗಿದ್ದರು.
ನಾಜಿರ್ ಅವರ ಹುಟ್ಟುರು ಕುಲ್ಗಾಂನ ಚೆಕಿ ಅಶುಮುಜಿ ಗ್ರಾಮದಲ್ಲಿ ಸೋಮವಾರ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಸಲಾಯಿತು. ಪಾರ್ಥೀವ ಶರೀರದ ಮೇಲೆ ರಾಷ್ಟ್ರ ಧ್ವಜ ಹೊದಿಸಿ, 21 ಸುತ್ತು ಗಾಳಿಯಲ್ಲಿ ಗುಂಡು ಹಾರಿಸುವ ಮೂಲಕ ಗೌರವ ಸಲ್ಲಿಸಲಾಯಿತು. 500 ಕ್ಕೂ ಹೆಚ್ಚು ಮಂದಿ ಗ್ರಾಮಸ್ಥರು ಅಂತಿಮ ಯಾತ್ರೆಯಲ್ಲಿ ಭಾಗಿಯಾಗಿ ಗೌರವ ಸಲ್ಲಿಸಿದರು.
ಲ್ಯಾನ್ಸ್ ನಾಯಕ್ ನಾಜಿರ್ ಅಹ್ಮದ್ ವಾನಿ ಅವರ ಬಲಿದಾನ ದೇಶ ಮತ್ತು ಕಾಶ್ಮೀರಕ್ಕೆ ಕೊಟ್ಟ ಅತ್ಯಂತ ದೊಡ್ಡ ತ್ಯಾಗ ಎಂದು ಸೇನಾ ಅಧಿಕಾರಿಗಳು ಬಣ್ಣಿಸಿದ್ದಾರೆ.
2004 ರಲ್ಲಿ ಪ್ರಾಂತೀಯ ಪಡೆಯಾಗಿರುವ ರಾಷ್ಟ್ರೀಯ ರೈಫಲ್ಸ್ಗೆ ಸೇವೆಗೆ ಸೇರ್ಪಡೆಯಾಗಿದ್ದ ನಾಜಿರ್ ಅವರು ಹಲವು ಉಗ್ರ ವಿರೋಧಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು. 2007 ರಲ್ಲಿ ಅವರಿಗೆ ಸೇನಾ ಪದಕ ನೀಡಿ ಪುರಸ್ಕರಿಸಲಾಗಿತ್ತು.
ವಾನಿ ಅವರು ಪತ್ನಿ ಮತ್ತು 20 ಮತ್ತು 18 ವರ್ಷ ಪ್ರಾಯದ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ದೇಶಕ್ಕಾಗಿ ಪ್ರಾಮಾಣಿಕ ಸೇವೆ ಸಲ್ಲಿಸಿದ ನಾಜಿರ್ ಅಹ್ಮದ್ ವಾನಿ ಅವರು ಉಗ್ರವಾದದತ್ತ ಆಕರ್ಷಿತರಾಗುವ ಯುವಕರಿಗೆ ಮಾದರಿಯಾಗಿ ದೇಶಕ್ಕಾಗಿ ದುಡಿಯುವಂತೆ ಮಾಡಲಿ. ಈ ಮಣ್ಣಿನಲ್ಲಿ ಮತ್ತೆ ಹುಟ್ಟಿ ಬರಲಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
MUST WATCH
ಹೊಸ ಸೇರ್ಪಡೆ
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್