ಮಾಜಿ ಕೇಂದ್ರ ಸಚಿವ ಜಸ್ವಂತ್ ಸಿಂಗ್ ವಿಧಿವಶ
Team Udayavani, Sep 27, 2020, 8:58 AM IST
ಹೊಸದಿಲ್ಲಿ: ಕೇಂದ್ರದ ಮಾಜಿ ಸಚಿವ ಜಸ್ವಂತ್ ಸಿಂಗ್ ಅವರು ರವಿವಾರ ಬೆಳಿಗ್ಗೆ ವಿಧಿವಶರಾಗಿದ್ದಾರೆ.
ಜಸ್ವಂತ್ ಸಿಂಗ್ ಅವರಿಗೆ 82 ವರ್ಷ ವಯಸ್ಸಾಗಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಬೆಳಿಗ್ಗೆ ನಿಧನರಾಗಿದ್ದಾರೆ.
ರಾಜಸ್ಥಾನದ ಜೋಧ್ ಪುರ ಮೂಲದವರಾದ ಜಸ್ವಂತ್ ಸಿಂಗ್ ಅವರು, ಆರಂಭದಲ್ಲಿ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ್ದರು. ರಾಜಕೀಯ ಆಕಾಂಕ್ಷೆಯಿಂದ ಸೇನೆಗೆ ನಿವೃತ್ತಿ ಘೋಷಿಸಿ ಸಕ್ರಿಯ ರಾಜಕೀಯಕ್ಕೆ ಸೇರ್ಪಡೆಯಾಗಿದ್ದರು.
ಜಸ್ವಂತ್ ಸಿಂಗ್ ಅವರು ಬಿಜೆಪಿ ಪಕ್ಷದಿಂದ ಐದು ಬಾರಿ ರಾಜ್ಯ ಸಭೆಗೆ ಆಯ್ಕೆಯಾಗಿದ್ದರು. ( 1980, 1986, 1998, 1999, 2004) ನಾಲ್ಕು ಬಾರಿ ಲೋಕಸಭೆಗೆ ಆಯ್ಕೆಯಾಗಿದ್ದರು. (1990, 1991,1996, 2009). ಕೇಂದ್ರ ಹಣಕಾಸು, ವಿದೇಶಾಂಗ, ಮತ್ತು ರಕ್ಷಣಾ ಖಾತೆಗಳಂತಹ ಪ್ರಮುಖ ಖಾತೆಗಳನ್ನು ಜಸ್ವಂತ್ ಸಿಂಗ್ ನಿಭಾಯಿಸಿದ್ದರು.
ಇದನ್ನೂ ಓದಿ:“ಮೊಂಡುತನದ ಸರಕಾರ”: ಕೃಷಿ ಮಸೂದೆಗೆ ವಿರೋಧಿಸಿ ಎನ್ ಡಿಎ ನಿಂದ ಹೊರಬಂದ ಶಿರೋಮಣಿ ಅಕಾಲಿ ದಳ
ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದು, ಜಸ್ವಂತ್ ಸಿಂಗ್ ಅವರು ದೇಶಕ್ಕಾಗಿ ಮೊದಲು ಸೈನಿಕರಾಗಿ ಸೇವೆ ಸಲ್ಲಿಸಿದ್ದು, ನಂತರ ರಾಜಕೀಯದೊಂದಿಗೆ ಸುದೀರ್ಘ ಒಡನಾಟ ಹೊಂದಿದ್ದರು. ಅಟಲ್ ಬಿಹಾರಿ ವಾಜಪೇಯಿ ಅವರ ಸರ್ಕಾರದ ಅವಧಿಯಲ್ಲಿ ಅವರು ಪ್ರಮುಖ ಖಾತೆಗಳನ್ನು ನಿಭಾಯಿಸಿ, ಹಣಕಾಸು, ರಕ್ಷಣೆ ಮತ್ತು ವಿದೇಶಾಂಗ ವ್ಯವಹಾರಗಳಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದರು. ಅವರ ಈ ನಿಧನದ ವಾರ್ತೆ ಕೇಳಿ ದುಃಖವಾಯಿತು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ