ಹೊಂಚು ಹಾಕಿ ಕಾದು ಪಶುವೈದ್ಯೆಯನ್ನು ರೇಪ್ ಮಾಡಿ ಸುಟ್ಟು ಕೊಂದರೇ ಆ ನಾಲ್ವರು!?
ಪ್ರಿಯಾಂಕ ರೆಡ್ಡಿ ಅತ್ಯಾಚಾರ ಮಾಡಿ ಸುಟ್ಟು ಕೊಂದ ಪ್ರಕರಣ ; ನಾಲ್ವರು ಪೊಲೀಸ್ ವಶದಲ್ಲಿ
Team Udayavani, Nov 29, 2019, 12:59 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೈದರಾಬಾದ್: ಪಶುವೈದ್ಯೆ ಪ್ರಿಯಾಂಕ ರೆಡ್ಡಿ ಅವರ ಮೃತದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸೈಬರಾಬಾದ್ ಪೊಲೀಸರಿಗೆ ಮಹತ್ವದ ಸುಳಿವು ಲಭ್ಯವಾಗಿದೆ.
ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇಂದು ನಾಲ್ವರನ್ನು ವಶಕ್ಕೆ ಪಡೆದುಕೊಂಡು ತೀವ್ರ ವಿಚಾರಣೆಯನ್ನು ನಡೆಸುತ್ತಿದ್ದಾರೆ. ಸ್ಥಳದಲ್ಲಿದ್ದ ಸಿಸಿಟಿವಿ ಫೂಟೇಜ್ ಗಳು ಮತ್ತು ಕೆಲವೊಂದು ತಾಂತ್ರಿಕ ಪುರಾವೆಗಳ ಆಧಾರದಲ್ಲಿ ಓರ್ವ ಟ್ರಕ್ ಚಾಲಕ, ಆತನ ಸಹಾಯಕ ಮತ್ತು ಇನ್ನಿಬ್ಬರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಪ್ರಿಯಾಂಕ ರೆಡ್ಡಿ ಅವರು ಪ್ರತೀದಿನ ಟೋಲ್ ಪ್ಲಾಝಾ ಬಳಿ ತಮ್ಮ ಸ್ಕೂಟರ್ ನಿಲ್ಲಿಸಿ ಬಳಿಕ ಅಲ್ಲಿಂದ ಕ್ಯಾಬ್ ಮೂಲಕ ತನ್ನ ಕ್ಲಿನಿಕ್ ಗೆ ತೆರಳುತ್ತಿದ್ದರು. ಬುಧವಾರವೂ ಅವರು ಇದೇ ರೀತಿಯಲ್ಲಿ ಸ್ಕೂಟರ್ ನಿಲ್ಲಿಸಿ ತೆರಳುವುದನ್ನು ಗಮನಿಸಿದ ದುಷ್ಕರ್ಮಿಗಳು ಆಕೆಯ ಸ್ಕೂಟರ್ ಚಕ್ರದ ಗಾಳಿಯನ್ನು ಉದ್ದೇಶಪೂರ್ವಕವಾಗಿಯೇ ತೆಗೆದಿದ್ದಾರೆ ಎಂಬ ಮಾಹಿತಿ ಇದೀಗ ಲಭ್ಯವಾಗಿದೆ.
ಬಳಿಕ ಬುಧವಾರ ರಾತ್ರಿ 8 ಗಂಟೆಗೆ ಪ್ರಿಯಾಂಕ ಅವರು ವಾಪಸ್ಸಾಗಿ ತಮ್ಮ ಸ್ಕೂಟರ್ ನಲ್ಲಿ ಹೋಗುತ್ತಿದ್ದ ಸಂದರ್ಭದಲ್ಲಿ ಇಬ್ಬರು ಪಂಕ್ಚರ್ ಹಾಕಿಸುವುದಾಗಿ ಪಡೆದುಕೊಂಡು ಹೋಗಿದ್ದಾರೆ ಇದೇ ಸಂದರ್ಭದಲ್ಲಿ ಇನ್ನಿಬ್ಬರು ಆಕೆಯನ್ನು ಬಲವಂತಾಗಿ ಪೊದೆಗೆ ಎಳೆದೊಯ್ದು ಅವರ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಾರೆ ಎಂಬ ಶಂಕೆಯನ್ನು ತನಿಖೇ ನಡೆಸುತ್ತಿರುವ ಪೊಲೀಸರು ಇದೀಗ ಬಲವಾಗಿ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು