ಪೂನಾವಾಲ ಸೋಗಿನಲ್ಲಿ ಅವರದ್ದೇ ಕಂಪನಿಗೆ 1 ಕೋಟಿ ರೂ. ವಂಚನೆ!
Team Udayavani, Nov 27, 2022, 6:40 AM IST
ಪುಣೆ: ಸಿಇಒ ಅಡಾರ್ ಪೂನಾವಾಲ ಅವರ ಹೆಸರಿನಲ್ಲಿ ಅವರದ್ದೇ ಕಂಪನಿಗೆ 1.01 ಕೋಟಿ ರೂ. ವಂಚನೆ ಮಾಡಿರುವ ಅಚ್ಚರಿಯ ಘಟನೆಯೊಂದು ನಡೆದಿದೆ. ಪ್ರಕರಣ ಸಂಬಂಧ ಪುಣೆ ಪೊಲೀಸರು 7 ಮಂದಿಯನ್ನು ಬಂಧಿಸಿದ್ದಾರೆ.
ಕೊವಿಶೀಲ್ಡ್ ಲಸಿಕೆ ತಯಾರಕ ಕಂಪನಿ ಸೀರಂ ಇನ್ಸ್ಟಿಟ್ಯೂಟ್ನ ನಿರ್ದೇಶಕ ಸತೀಶ್ ದೇಶಪಾಂಡೆ ಅವರಿಗೆ ಇತ್ತೀಚೆಗೆ ವಾಟ್ಸ್ಆ್ಯಪ್ ಸಂದೇಶವೊಂದು ಬಂದಿತ್ತು. ಸಂದೇಶ ಕಳುಹಿಸಿದ ವ್ಯಕ್ತಿಯು ತನ್ನನ್ನು ತಾನು ಸೀರಂ ಕಂಪನಿಯ ಸಿಇಒ ಅಡಾರ್ ಪೂನಾವಾಲ ಎಂದು ಹೇಳಿಕೊಂಡಿದ್ದು, ನಾನು ಸೂಚಿಸುವ 7 ಬೇರೆ ಬೇರೆ ಖಾತೆಗಳಿಗೆ 1.01 ಕೋಟಿ ರೂ.ಗಳನ್ನು ಕಳುಹಿಸುವಂತೆ ಹೇಳಿದ್ದ.
ಇದು ಪೂನಾವಾಲ ಅವರಿಂದಲೇ ಬಂದ ಸಂದೇಶವಿರಬಹುದೆಂದು ಭಾವಿಸಿದ ದೇಶಪಾಂಡೆ ಅವರು, ಎಲ್ಲ ಖಾತೆಗಳಿಗೂ ಹಣ ಹಾಕಿದ್ದರು. ಕೆಲ ದಿನಗಳ ಬಳಿಕ ತಾವು ಮೋಸ ಹೋಗಿದ್ದು ತಿಳಿದುಬಂದ ಕಾರಣ ಪೊಲೀಸರಿಗೆ ದೂರು ನೀಡಿದ್ದರು. ದೇಶದ ವಿವಿಧ ಮೂಲೆಗಳಲ್ಲಿ ಖಾತೆಗಳನ್ನು ಹೊಂದಿದ್ದ 7 ಮಂದಿಯನ್ನು ಪೊಲೀಸರು ಬಂಧಿಸಿದ್ದು, ಪ್ರಮುಖ ಆರೋಪಿ ನಾಪತ್ತೆಯಾಗಿದ್ದಾನೆ. ಆ ಖಾತೆಗಳಿಂದ 13 ಲಕ್ಷ ರೂ. ಜಪ್ತಿ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಧ್ಯಪ್ರದೇಶದಲ್ಲಿ 230 ರಲ್ಲಿ ಬಿಜೆಪಿ 200ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ: ನಡ್ಡಾ
ಅಂದು ಮೋದಿ ಉಪನಾಮ ಟೀಕೆ…; ಇಂದು ಖುಷ್ಬು ಟ್ವೀಟ್ ವೈರಲ್
ಬಾಲಿವುಡ್ ನಟ ಸಲ್ಮಾನ್ ಖಾನ್ಗೆ ಬೆದರಿಕೆ ಪ್ರಕರಣ: ಆರೋಪಿ ಮುಂಬೈ ಪೊಲೀಸರ ವಶಕ್ಕೆ
ಕೊಕ್ಕರೆಯನ್ನು ರಕ್ಷಿಸಿ ಸಾಕಿದ್ದ ಆರಿಫ್ ಖಾನ್ ಗೆ ಅರಣ್ಯ ಇಲಾಖೆ ನೋಟಿಸ್
ರಾಹುಲ್ ವಿಚಾರದಲ್ಲಿ ಕಾಂಗ್ರೆಸ್ ಸತ್ಯಾಗ್ರಹ ನಡೆಸುವುದು ವಿಪರ್ಯಾಸವೇ ಸರಿ: ಯುಪಿ ಸಿಎಂ ಯೋಗಿ
MUST WATCH
ಹೊಸ ಸೇರ್ಪಡೆ
50 ಕೊಡ್ತಿರಿ ಅಂತ ಗೊತ್ತಿದೆ,ಬೇಕಿರೋದು 123 ಸ್ಥಾನ : ಹೆಚ್.ಡಿ.ಕುಮಾರಸ್ವಾಮಿ
ಮಧ್ಯಪ್ರದೇಶದಲ್ಲಿ 230 ರಲ್ಲಿ ಬಿಜೆಪಿ 200ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ: ನಡ್ಡಾ
ಮೋದಿ ಸರಕಾರ 9 ವರ್ಷಗಳಲ್ಲಿ ಏನು ಕಡಿದು ಗುಡ್ಡೆ ಹಾಕಿದೆ: ನಲಪಾಡ್ ಪ್ರಶ್ನೆ
ಅಂದು ಮೋದಿ ಉಪನಾಮ ಟೀಕೆ…; ಇಂದು ಖುಷ್ಬು ಟ್ವೀಟ್ ವೈರಲ್
ಬಾಲಿವುಡ್ ನಟ ಸಲ್ಮಾನ್ ಖಾನ್ಗೆ ಬೆದರಿಕೆ ಪ್ರಕರಣ: ಆರೋಪಿ ಮುಂಬೈ ಪೊಲೀಸರ ವಶಕ್ಕೆ