ಮೇಜರ್‌, ಮೂವರು ಯೋಧರು ಹುತಾತ್ಮ


Team Udayavani, Aug 8, 2018, 4:45 AM IST

soldire-600.jpg

ಶ್ರೀನಗರ: ಕಳೆದ ಒಂದು ವಾರದಿಂದ ಜಮ್ಮು ಕಾಶ್ಮೀರದಲ್ಲಿ ಉಗ್ರರ ಉಪಟಳ ನಿರಂತರವಾಗಿ ನಡೆಯುತ್ತಿದ್ದು, ಮಂಗಳವಾರ ನುಸುಳುಕೋರ ಉಗ್ರರ ಗುಂಡಿಗೆ ಸೇನೆಯ ಮೇಜರ್‌ ಮತ್ತು ಮೂವರು ಯೋಧರು ಹುತಾತ್ಮರಾಗಿದ್ದಾರೆ. ಗುರೇಜ್‌ ವಲಯದಲ್ಲಿ ನಡೆದ ಕಾರ್ಯಾಚರಣೆ ವೇಳೆ ಈ ಘಟನೆ ನಡೆದಿದ್ದು, ಇಬ್ಬರು ಉಗ್ರವಾದಿಗಳನ್ನು ಹೊಡೆದುರುಳಿಸುವಲ್ಲಿ ಸೇನೆ ಯಶಸ್ವಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಂಡಿಪೋರಾ ಜಿಲ್ಲೆಯ ಗೋವಿಂದ ನಲ್ಹಾ ಎಂಬಲ್ಲಿ ಉಗ್ರರು ನುಸುಳಿಬರುತ್ತಿರುವ ಬಗ್ಗೆ ಮಾಹಿತಿ ಸಿಕ್ಕದ ಬೆನ್ನಲ್ಲೇ ಯೋಧರು ಕಾರ್ಯಾಚರಣೆಗೆ ಇಳಿದಿದ್ದರು. ಈ ವೇಳೆ ಎರಡೂ ಕಡೆ ಗುಂಡಿನ ಚಕಮಕಿ ನಡೆದಿದ್ದು, ಮೇಜರ್‌ ಕೆ. ಪ್ರಕಾಶ್‌ ಕುಮಾರ್‌ ರಾಣೆ (29), ಹಮೀರ್‌ ಸಿಂಗ್‌ (28) ಮತ್ತು ವಿಕ್ರಂಜೀತ್‌ ಸಿಂಗ್‌ (25), ರೈಫ‌ಲ್‌ವುನ್‌ ಮನ್‌ದೀಪ್‌ ಸಿಂಗ್‌ (26) ಅಸುನೀಗಿದ್ದಾರೆ. ಉಗ್ರರು ಎತ್ತರದ ಪ್ರದೇಶದಲ್ಲಿದ್ದು, ಸೈನಿಕರು ಅತ್ತ ಹೋಗುತ್ತಿದ್ದಾಗ ಕತ್ತಲಿನಲ್ಲಿ ಅಡಗಿ ಕುಳಿತು ಗುಂಡಿನ ದಾಳಿ ನಡೆಸಿದ್ದರು ಎಂದು ಸೇನಾ ಮೂಲಗಳು ತಿಳಿಸಿವೆ.


ಎಂಟು ಮಂದಿ ತಂಡ

ಪ್ರಾಥಮಿಕ ಮಾಹಿತಿಯಂತೆ ಎಂಟು ಮಂದಿ ಉಗ್ರರ ತಂಡ ಒಳನುಸುಳುವ ಪ್ರಯತ್ನ ನಡೆಸಿತ್ತು. ಆದರೆ ಅವರಲ್ಲಿ ನಾಲ್ಕು ಮಂದಿ ವಾಪಸ್‌ ಆಗಿದ್ದು, ಇಬ್ಬರನ್ನು ಹೊಡೆದುರುಳಿಸಲಾಗಿದೆ. ಇನ್ನಿಬ್ಬರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೆಲ ತಿಂಗಳ ಹಿಂದಷ್ಟೇ ವಿವಾಹವಾಗಿದ್ದ ವಿಕ್ರಂಜೀತ್‌
ವಿಕ್ರಂಜೀತ್‌ ಸಿಂಗ್‌ ಅವರಿಗೆ ಕೆಲವೇ ತಿಂಗಳ ಹಿಂದಷ್ಟೇ ಮದುವೆಯಾಗಿತ್ತು. ವಿಕ್ರಂಜೀತ್‌ ಅವರು ಹರ್ಯಾಣದ ಅಂಬಲಾದ ತೆಪ್ಲಾ ಗ್ರಾಮದವರು. ಅವರ ಅಣ್ಣ ಕೂಡ ಸೇನೆ ಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಮನ್‌ದೀಪ್‌ ಸಿಂಗ್‌ ರಾವತ್‌ ಮತ್ತು ಹಮೀರ್‌ ಸಿಂಗ್‌ ಉತ್ತರಾಖಂಡದವರಾಗಿದ್ದಾರೆ. 29ರ ಹರೆಯದ ಮೇಜರ್‌ ರಾಣೆ ಅವರು ಮಹಾರಾಷ್ಟ್ರದ ಥಾಣೆಯ ಭಾಯಂದರ್‌ನ ಶೀತಲ್‌ ನಗರದವರು. ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ಇಡೀ ತಂಡವನ್ನು ಮುನ್ನಡೆಸಿದ್ದರು. ರಾಣೆ ಅವರು ತಂದೆ-ತಾಯಿ, ಪತ್ನಿ ಮತ್ತು ಎರಡೂವರೆ ವರ್ಷದ ಮಗುವನ್ನು ಅಗಲಿದ್ದಾರೆ.   

ವರ್ಷದಲ್ಲಿ ನುಸುಳಿದ್ದು 69 ಉಗ್ರರು
ಜೂನ್‌ ತಿಂಗಳವರೆಗಿನ ಮಾಹಿತಿಯಂತೆ ಒಟ್ಟು 69 ಉಗ್ರರು ಜಮ್ಮು – ಕಾಶ್ಮೀರದ ಗಡಿಯಲ್ಲಿ ನುಸುಳಿದ್ದಾರೆ ಎಂದು ಸರಕಾರ ಮಂಗಳವಾರ ಲೋಕಸಭೆಗೆ ತಿಳಿಸಿದೆ. ಈ ವರ್ಷಾವಧಿಯಲ್ಲಿ 133 ಬಾರಿ ಉಗ್ರರು ದೇಶದೊಳಕ್ಕೆ ನುಸುಳುವ ಯತ್ನ ನಡೆಸಿದ್ದಾರೆ. ಅವರಲ್ಲಿ 50 ಮಂದಿ ವಾಪಸ್‌ ಆಗಿದ್ದು, 14 ಮಂದಿಯನ್ನು ಹೊಡೆದುರುಳಿಸಲಾಗಿದೆ ಎಂದು ತಿಳಿಸಿದ್ದಾರೆ. 69 ಉಗ್ರರು ನುಸುಳಿರುವ ಬಗ್ಗೆ ಮಾಹಿತಿ ಇದೆ ಎಂದು ಗೃಹ ಖಾತೆ ಸಹಾಯಕ ಸಚಿವ ಹಂಸರಾಜ್‌ ಅಹಿರ್‌ ಅವರು ತಿಳಿಸಿದ್ದಾರೆ. 

ಟಾಪ್ ನ್ಯೂಸ್

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಯ ಸ್ಥಿತಿ ಹೇಗಾಗಿದೆ ನೋಡಿ…

Bhopal: ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಗೆ ಲಾಠಿ ರುಚಿ ತೋರಿಸಿದ ಪೊಲೀಸರು…

ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಸ್ಥಿತಿಯಲ್ಲಿದ್ದ ತಮಿಳುನಾಡು ಸಂಸದ ಹೃದಯಾಘಾತದಿಂದ ಮೃತ್ಯು

ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಸ್ಥಿತಿಯಲ್ಲಿದ್ದ ತಮಿಳುನಾಡು ಸಂಸದ ಹೃದಯಾಘಾತದಿಂದ ಮೃತ್ಯು

Lok Sabha Election: ದುಡ್ಡಿಲ್ಲ ಹಾಗಾಗಿ ಲೋಕಸಭೆಗೆ ಸ್ಪರ್ಧಿಸುತ್ತಿಲ್ಲ: ಸಚಿವೆ ನಿರ್ಮಲಾ

Lok Sabha Election: ದುಡ್ಡಿಲ್ಲ ಹಾಗಾಗಿ ಲೋಕಸಭೆಗೆ ಸ್ಪರ್ಧಿಸುತ್ತಿಲ್ಲ: ಸಚಿವೆ ನಿರ್ಮಲಾ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.