ಹಗ್ಗದ ಮೂಲಕ ಜೈಲು ಗೋಡೆ ಹಾರಿ ಪರಾರಿಯಾದ 4 ಕೈದಿಗಳು
ಮಧ್ಯಪ್ರದೇಶದಲ್ಲಿ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿದ ಅಪರಾಧಿಗಳು...
Team Udayavani, Jun 23, 2019, 1:57 PM IST
ಭೂಪಾಲ್ : ಮಧ್ಯಪ್ರದೇಶದ ನೀಮುಚ್ ಜಿಲ್ಲೆಯ ಕಾರಾಗೃಹದಿಂದ ನಾಲ್ವರು ಕೈದಿಗಳು ಪರಾರಿಯಾದ ಘಟನೆ ಭಾನುವಾರ ನಸುಕಿನ ವೇಳೆ ನಡೆದಿದೆ.
ಜೈಲರ್ ಮತ್ತು ಸಿಬಂದಿಗಳಿಗೆ ತಿಳಿಯದಂತೆ ಜೈಲಿನ ಸರಳುಗಳನ್ನು ಕತ್ತರಿಸಿ ಹಗ್ಗವನ್ನು ಬಳಸಿಕೊಂಡು ಜೈಲಿನ ಗೋಡೆಗಳನ್ನು ಏರಿ ಪರಾರಿಯಾಗಿದ್ದಾರೆ.
ಪರಾರಿಯಾದ ಕೈದಿಗಳು ನರ್ಸಿಂಗ್ (20), ದುಬೆಲಾಲ್ (19), ಪಂಕಜ್(20), ಲೇಖ್ ರಾಮ್ (29) ಎನ್ನುವವರಾಗಿದ್ದಾರೆ.
ನಾಲ್ವರ ಪೈಕಿ ಓರ್ವ ಕೊಲೆಕೇಸ್ನಲ್ಲಿ ಶಿಕ್ಷೆಗೊಳಗಾಗಿದ್ದು,ಇನ್ನೋರ್ವ ರೇಪ್ ಕೇಸ್ನಲ್ಲಿ ಶಿಕ್ಷೆಗೊಳಗಾದವನು, ಇನ್ನಿಬ್ಬರು ಡ್ರಗ್ಸ್ ಜಾಲದಲ್ಲಿ ಸಿಕ್ಕಿ ಬಿದ್ದವರು.
ಘಟನೆ ನಡೆದ ಬೆನ್ನಲ್ಲೆ ಮೂವರು ಪೊಲೀಸ್ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ.
ಪರಾರಿಯಾದ ಕೈದಿಗಳ ಸುಳಿವು ನೀಡಿದವರಿಗೆ ತಲಾ 50 ಸಾವಿರ ಬಹುಮಾನವನ್ನು ಸರ್ಕಾರ ಘೋಷಿಸಿದೆ.
ಪ್ರಕರಣದ ನ್ಯಾಯಾಂಗ ತನಿಖೆಗೆ ಸರ್ಕಾರ ಆದೇಶ ನೀಡಿದೆ. ನಾಲ್ವರಿಗಾಗಿ ಪೊಲೀಸರು ವ್ಯಾಪಕ ಹುಡುಕಾಟ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ
MUST WATCH
ಹೊಸ ಸೇರ್ಪಡೆ
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ