ಶೋಪಿಯಾನ್ ಕಾರ್ಯಾಚರಣೆ; ಭದ್ರತಾ ಪಡೆ ಎನ್ ಕೌಂಟರ್ ಗೆ ನಾಲ್ವರು ಉಗ್ರರ ಸಾವು
ಕಿಲೂರಾ ಪ್ರದೇಶದಲ್ಲಿ ಉಗ್ರರು ಅಡಗಿಕೊಂಡಿದ್ದಾರೆ ಎಂಬ ಮಾಹಿತಿ ಆಧಾರದ ಮೇಲೆ ಜಂಟಿ ಕಾರ್ಯಾಚರಣೆ ನಡೆಸಲಾಗಿತ್ತು.
Team Udayavani, Aug 28, 2020, 6:35 PM IST
ಜಮ್ಮು-ಕಾಶ್ಮೀರ: ಭದ್ರತಾ ಪಡೆಯ ಎನ್ ಕೌಂಟರ್ ಗೆ ನಾಲ್ವರು ಉಗ್ರರು ಸಾವನ್ನಪ್ಪಿರುವ ಘಟನೆ ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಶುಕ್ರವಾರ (ಆಗಸ್ಟ್ 28, 2020) ನಡೆದಿದೆ. ಶೋಪಿಯಾನದ ಕಿಲೂರಾ ಪ್ರದೇಶದಲ್ಲಿ ನಡೆದ ಎನ್ ಕೌಂಟರ್ ನಲ್ಲಿ ನಾಲ್ವರು ಉಗ್ರರು ಬಲಿಯಾಗಿರುವುದನ್ನು ಜಮ್ಮು-ಕಾಶ್ಮೀರ ಪೊಲೀಸರು ಖಚಿತಪಡಿಸಿದ್ದಾರೆ.
ಜಮ್ಮು ಕಾಶ್ಮೀರ ಪೊಲೀಸ್ ಹಾಗೂ ಭದ್ರತಾ ಪಡೆ ಖಚಿತ ಮಾಹಿತಿ ಮೇರೆಗೆ ಕಿಲೂರಾ ಪ್ರದೇಶವನ್ನು ಸುತ್ತುವರಿದ ವೇಳೆ ಅಪಾಯದ ಸುಳಿವು ಅರಿತ ಉಗ್ರರು ಭದ್ರತಾ ಪಡೆ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಇದಕ್ಕೆ ಪ್ರತಿಯಾಗಿ ನಡೆಸಿದ ದಾಳಿಗೆ ನಾಲ್ವರು ಉಗ್ರರು ಸಾವನ್ನಪ್ಪಿದ್ದಾರೆ.
ಕಿಲೂರಾ ಪ್ರದೇಶದಲ್ಲಿ ಉಗ್ರರು ಅಡಗಿಕೊಂಡಿದ್ದಾರೆ ಎಂಬ ಮಾಹಿತಿ ಆಧಾರದ ಮೇಲೆ ಜಂಟಿ ಕಾರ್ಯಾಚರಣೆ ನಡೆಸಲಾಗಿತ್ತು. ಘಟನೆಯ ನಂತರ ಶೋಧ ಕಾರ್ಯಾಚರಣೆ ಮುಂದುವರಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ದಕ್ಷಿಣ ಕಾಶ್ಮೀರ ಭಾಗದಲ್ಲಿ ಅಡಗಿಕೊಂಡಿದ್ದ 150ಕ್ಕೂ ಅಧಿಕ ಉಗ್ರರನ್ನು ಹೊಡೆದುರುಳಿಸಲಾಗಿದೆ. ಇದರಲ್ಲಿ ವಿವಿಧ ಭಯೋತ್ಪಾದಕ ಸಂಘಟನೆಯ 26 ಉಗ್ರ ಕಮಾಂಡರ್ಸ್ ಗಳು ಸೇರಿರುವುದಾಗಿ ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ