Hyderabad ಆಂಧ್ರಪ್ರದೇಶದ ತಿರುಮಲದಲ್ಲಿ ನಾಲ್ಕನೇ ಚಿರತೆ ಬಲೆಗೆ
Team Udayavani, Aug 28, 2023, 8:10 PM IST
ಹೈದರಾಬಾದ್: ಆಂಧ್ರಪ್ರದೇಶದ ತಿರುಮಲದಲ್ಲಿ ಕಾಡು ಪ್ರಾಣಿಗಳ ದಾಳಿಗಳ ಪ್ರಕರಣ ಹೆಚ್ಚುತ್ತಿರುವ ನಡುವೆಯೇ, ಸೋಮವಾರ ಚಿರತೆಯೊಂದನ್ನು ಸೆರೆ ಹಿಡಿದು ತಿರುಪತಿ ಮೃಗಾಲಯಕ್ಕೆ ಬಿಡಲಾಗಿದೆ. ಇದು ಈವರೆಗೆ ಸೆರೆ ಸಿಕ್ಕ 4ನೇ ಚಿರತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆಂಜನೇಯ ಸ್ವಾಮಿ ಪ್ರತಿಮೆ ಬಳಿ ಇರುವ 7ನೇ ಮೈಲಿ ಬಳಿ ಚಿರತೆ ಸೆರೆ ಸಿಕ್ಕಿದೆ. ಆಗಸ್ಟ್ 17ರಿಂದಲೂ ಇದನ್ನು ಸೆರೆ ಹಿಡಿಯಲು ಪ್ರಯತ್ನಿಸಲಾಗುತ್ತಿತ್ತು. ಆದರೆ ಸಿಕ್ಕಿಬಿದ್ದಿರಲಿಲ್ಲ. ಸೋಮವಾರ ಬೆಳಗ್ಗೆ 4 ಗಂಟೆಗೆ ಕೊನೆಗೂ ಚಿರತೆ ಬಲೆಗೆ ಬಿದ್ದಿದೆ ಎನ್ನಲಾಗಿದೆ. ಇನ್ನು ಕೆಲ ದಿನದ ಹಿಂದಷ್ಟೇ ಅಪ್ರಾಪ್ತ ವಯಸ್ಕಳನ್ನು ಕೊಂದಿದ್ದು ಇದೇ ಚಿರತೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಇನ್ನು ಈಗ ಸೆರೆಸಿಕ್ಕ ಚಿರತೆಯೂ ಸೇರಿ ಒಟ್ಟು 4 ಚಿರತೆಗಳನ್ನು ಸೆರೆ ಹಿಡಿಯಲಾಗಿದ್ದು, ಈ ನಾಲ್ಕೂ ಚಿರತೆಗಳೂ ಗಂಡು ಹಾಗೂ ಒಂದೇ ವಯಸ್ಸಿನದ್ದಾಗಿವೆ. ಒಂದೇ ತಾಯಿಯ ಮಕ್ಕಳಿರಬಹುದು ಎಂದೂ ಅರಣ್ಯಾಧಿಕಾರಿಗಳು ಸಂಶಯ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ