ಉಚಿತ ಕೊಡುಗೆ: ಸುಪ್ರೀಂ ಕೋರ್ಟ್ನಲ್ಲಿ ಇಂದು ವಿಚಾರಣೆ
2013ರ ತೀರ್ಪಿನ ಮರು ಪರಿಶೀಲನೆ ಬೇಕೆಂದ ನ್ಯಾಯಪೀಠ
Team Udayavani, Aug 27, 2022, 8:00 AM IST
ಹೊಸದಿಲ್ಲಿ: ಚುನಾವಣೆಗಳು ಪ್ರಕಟವಾಗುವ ಮೊದಲೇ ಉಚಿತ ಕೊಡುಗೆಗಳನ್ನು ನೀಡುವುದು ಔಚಿತ್ಯಪೂರ್ಣವೇ ಎಂಬುದನ್ನು ಮೂವರು ಸದಸ್ಯರ ನ್ಯಾಯಪೀಠ ತೀರ್ಮಾನಿಸಲಿದೆ. ಈ ಬಗ್ಗೆ ಗುರುವಾರ ಮುಖ್ಯ ನ್ಯಾಯ ಮೂರ್ತಿ ಎನ್.ವಿ. ರಮಣ ನೇತೃತ್ವದ ನ್ಯಾಯ ಪೀಠ ನಿರ್ಧಾರ ಪ್ರಕಟಿಸಿದೆ. ಜತೆಗೆ ಅದನ್ನು ಶುಕ್ರವಾರವೇ ಲಿಸ್ಟ್ ಮಾಡುವಂತೆ ಕೂಡ ಆದೇಶ ನೀಡಿದೆ.
ಈ ವಿಚಾರದಲ್ಲಿ ಹಲವು ಪ್ರಾಥಮಿಕ ಅಂಶಗಳು ಇದ್ದು, ಅದನ್ನು ಆಮೂಲಾಗ್ರವಾಗಿ ಪರಿಶೀಲಿ ಸಬೇಕು. ನ್ಯಾಯಾಂಗ ಈ ವಿಚಾರದಲ್ಲಿ ಯಾವ ಪ್ರಮಾಣದಲ್ಲಿ ಮಧ್ಯಪ್ರವೇಶ ಮಾಡಬೇಕು ಎನ್ನುವುದೂ ಚರ್ಚೆ ಯಾಗಬೇಕಾಗಿದೆ ಎಂದು ನ್ಯಾ| ಹಿಮಾ ಕೋಹ್ಲಿ ಮತ್ತು ನ್ಯಾ| ಸಿ.ಟಿ.ರವಿ ಕುಮಾರ್ ಅವರನ್ನೊಳಗೊಂಡ ನ್ಯಾಯಪೀಠ ಹೇಳಿತು. 2013ರಲ್ಲಿ ಎಸ್.ಸುಬ್ರಮಣಿಯನ್ ಬಾಲಾಜಿ ಮತ್ತು ತಮಿಳು ನಾಡು ಸರಕಾರ ನಡುವಿನ ಪ್ರಕರಣದಲ್ಲಿ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ನೀಡಲಾಗಿದ್ದ ತೀರ್ಪನ್ನು ಮರು ಪರಿಶೀಲಿಸಬೇಕು ಎಂದು ಅಭಿಪ್ರಾಯಪಟ್ಟಿತು.
2013ರಲ್ಲಿ ಸುಪ್ರೀಂ ಕೋರ್ಟ್ನ ದ್ವಿಸದಸ್ಯ ಪೀಠ ನೀಡಿದ್ದ ತೀರ್ಪಿನಲ್ಲಿ ಚುನಾವಣ ಪ್ರಣಾಳಿಕೆಯಲ್ಲಿ ಕೊಡುಗೆಗಳನ್ನು ನೀಡುವ ಬಗ್ಗೆ ಮಾಡಿದ ವಾಗ್ಧಾನವನ್ನು ಭ್ರಷ್ಟ ಪದ್ಧತಿ ಎನ್ನುವಂತಿಲ್ಲ ಎಂದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ