ದಿಲ್ಲಿಯಲ್ಲಿ ಪಟಾಕಿ ನಿಷೇಧ ಮುಂದುವರಿಕೆ ಕೋರಿ ಸುಪ್ರೀಂಗೆ ಅರ್ಜಿ
Team Udayavani, Oct 27, 2017, 3:52 PM IST
ಹೊಸದಿಲ್ಲಿ : ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಅಕ್ಟೋಬರ್ 31ರ ಬಳಿಕವೂ ಪಟಾಕಿ ಮಾರಾಟ ನಿಷೇಧವನ್ನು ಮುಂದುವರಿಸಬೇಕೆಂದು ಕೋರುವ ಹೊಸ ಅರ್ಜಿಯನ್ನು ಸುಪ್ರೀಂ ಕೋರ್ಟಿಗೆ ಸಲ್ಲಿಸಲಾಗಿದೆ
ಈ ಅರ್ಜಿಯನ್ನು ತುರ್ತಾಗಿ ವಿಚಾರಣೆಗೆ ಎತ್ತಿಕೊಳ್ಳಬೇಕೇ ಬೇಡವೇ ಎಂಬುದನ್ನು ಪರಿಶೀಲಿಸಲಾಗುವುದು ಎಂದು ವರಿಷ್ಠ ನ್ಯಾಯಮೂರ್ತಿ ದೀಪಕ್ ಮಿಶ್ರಾ ಮತ್ತು ಜಸ್ಟಿಸ್ಗಳಾದ ಎ ಎ ಖಾನ್ವಿಲ್ಕರ್ ಮತ್ತು ಡಿ ವೈ ಚಂದ್ರಚೂಡ್ ಅವರನ್ನು ಒಳಗೊಂಡ ಪೀಠ ಹೇಳಿತು.
ದಿಲ್ಲಿಯಲ್ಲಿನ ಈಗಿನ ವಾಯು ಮಾಲಿನ್ಯ ಮಟ್ಟ ಗಂಭೀರ ಇರುವುದನ್ನು ಪರಿಗಣಿಸಿ ಈ ಹೊಸ ಅರ್ಜಿಯಲ್ಲಿನ ಕೋರಿಕೆಯ ಪ್ರಕಾರ ಅ.31ರ ಬಳಿಕವೂ ದಿಲ್ಲಿಯಲ್ಲಿ ಪಟಾಕಿ ಮಾರಾಟ ನಿಷೇಧವನ್ನು ಮುಂದುವರಿಸಬೇಕು ಎಂದು ಅರ್ಜಿದಾರ ಅರ್ಜುನ್ ಗೋಪಾಲ್ ಅವರ ವಕೀಲರು ಪೀಠದ ಮುಂದೆ ನಿವೇದಿಸಿದರು.
ಈ ಹಿಂದೆಯೂ ಅರ್ಜಿದಾರ ಅರ್ಜುನ್ ಗೋಪಾಲ್ ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸಿ ಸುಪ್ರೀಂ ಕೋರ್ಟ್ ದಿಲ್ಲಿಯಲ್ಲಿ ಪಟಾಕಿ ಮಾರಾಟವನ್ನು ನಿಷೇಧಿಸಿ ಆದೇಶ ಹೊರಡಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ