ವೈದ್ಯರ ನಿರ್ಲಕ್ಷ್ಯ ಆರೋಪ: ಕಾಲಿನ ಶಸ್ತ್ರ ಚಿಕಿತ್ಸೆಯ ಬಳಿಕ ಯುವ ಫುಟ್ಬಾಲ್ ಆಟಗಾರ್ತಿ ಸಾವು
Team Udayavani, Nov 15, 2022, 4:39 PM IST
ಚೆನ್ನೈ: ಬಹು ಅಂಗಾಂಗ ವೈಫಲ್ಯದಿಂದ 17 ವರ್ಷದ ಯುವ ಫುಟ್ ಬಾಲ್ ಆಟಗಾರ್ತಿಯೊಬ್ಬಳು ಸಾವನ್ನಪ್ಪಿರುವ ಘಟನೆ ಚೆನ್ನೈನಲ್ಲಿ ಮಂಗಳವಾರ (ನ.15 ರಂದು) ನಡೆದಿರುವುದು ಬೆಳಕಿಗೆ ಬಂದಿದೆ.
ಪ್ರಿಯಾ ಮೊಣಕಾಲಿನ ಅಸ್ಥಿರಜ್ಜು(ಮೊಳೆಕಟ್ಟು) ಸಮಸ್ಯೆಯಿಂದ ಪೆರಿಯಾರ್ ನಗರದ ಸರ್ಕಾರಿ ಪೆರಿಫೆರಲ್ ಆಸ್ಪತ್ರೆಗೆ (ನ.7 ರಂದು) ದಾಖಲಾಗಿದ್ದರು. ಪ್ರಿಯಾ ಅವರ ಬಲ ಮೊಣಕಾಲಿನ ಅಸ್ಥಿರಜ್ಜು ಸರಿಪಡಿಸಲು ಆಸ್ಪತ್ರೆಯಲ್ಲಿ ಆರ್ತ್ರೋಸ್ಕೊಪಿ ಶಸ್ತ್ರಚಿಕಿತ್ಸೆಯನ್ನು ಮಾಡಿದ್ದರು. ಇದರಿಂದ ಪ್ರಿಯಾಳ ಕಾಲು ಇನ್ನಷ್ಟು ಊದಿಕೊಂಡಿತ್ತು. ಅವಳ ದೇಹದಲ್ಲಿ ರಕ್ತ ಸಂಚಲನವಾಗದ ಹಾಗೆ ಸಮಸ್ಯೆ ಸಮಸ್ಯೆ ಕಾಣಿಸಿಕೊಂಡಿತ್ತು. ಇದಾದ ಬಳಿಕ ಸೋಮವಾರ ( ನ14 ರಂದು) ರಾಜೀವ್ ಗಾಂಧಿ ಆಸ್ಪತ್ರೆಯ ವೈದ್ಯರು ಮತ್ತೊಂದು ಶಸ್ತ್ರ ಚಿಕಿತ್ಸೆಯ ಬಳಿಕ ಆಕೆಯ ಕಾಲನ್ನು ಕತ್ತರಿಸಿದ್ದರು. ಮಂಗಳವಾರ ಮುಂಜಾನೆ 7:15 ರ ಸಮಯಕ್ಕೆ ಪ್ರಿಯಾ ಬಹು ಅಂಗಾಂಗ ವೈಫ್ಯಲ್ಯದಿಂದ ಕೊನೆಯುಸಿರೆಳೆದಿದ್ದಾಳೆ ಎಂದು ವರದಿ ತಿಳಿಸಿದೆ.
ಇಬ್ಬರು ವೈದ್ಯರ ನಿರ್ಲಕ್ಷ್ಯ ಹಾಗೂ ಎಡವಟ್ಟಿನಿಂದ ನಮ್ಮ ಮಗಳನ್ನು ನಾವು ಕಳೆದುಕೊಂಡಿದ್ದೇವೆ ಎಂದು ಪ್ರಿಯಾಳ ಪೋಷಕರು ಆರೋಪಿಸಿದ್ದಾರೆ. ಈ ಬಗ್ಗೆ ಮಾಹಿತಿ ಪಡೆದುಕೊಂಡ ಆರೋಗ್ಯ ಸಚಿವ ಮಾ ಸುಬ್ರಮಣಿಯನ್ ಇಬ್ಬರು ವೈದ್ಯರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದು, ಇಬ್ಬರ ವಿರುದ್ದವೂ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.
ಪ್ರಿಯಾ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ನೀಡಿದ್ದಾರೆ.ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದ್ದು, ತಮಿಳುನಾಡು ಬಿಜೆಪಿ ವಕ್ತಾರ ಅಣ್ಣಾಮಲೈ ಪ್ರಿಯಾಳ ನಿಧನಕ್ಕೆ ಸಂತಾಪ ಸೂಚಿಸಿ ಆಡಳಿತರೂಢ ಡಿಎಂಕೆ ವಿರುದ್ಧ ಹರಿಹಾಯ್ದಿದ್ದಾರೆ. ಡಿಎಂಕೆ ಆಡಳಿತದಲ್ಲಿ ಪ್ರತಿಯೊಂದು ಇಲಾಖೆಯೂ ನಾಶವಾಗಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
ನೀವು ಬದುಕಿದ್ದಾಗಲೂ, ಸತ್ತಾಗಲೂ ಲೂಟಿ ಮಾಡುವುದೇ ಕಾಂಗ್ರೆಸ್ನ ಮಂತ್ರ: ಮೋದಿ
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ