ಇಂದಿನಿಂದ ಗೋವಾ ಆಸ್ಪತ್ರೆಯಲ್ಲಿ ಸ್ಥಳೀಯ ನಿವಾಸಿಗಳಿಗಷ್ಟೇ ಆದ್ಯತೆ
Team Udayavani, Oct 30, 2017, 11:20 AM IST
ಪಣಜಿ: ಗೋವಾದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಸಿಗಬೇಕೆಂದರೆ ಗುರುತಿನ ಚೀಟಿ ಕಡ್ಡಾಯ ಎಂಬ ಹೇಳಿಕೆ ಹೊರಬಿದ್ದ ಬೆನ್ನಲ್ಲೇ, ಇದೀಗ ಗೋವಾ ನಿವಾಸಿಗಳಿಗೆ ಗೋವಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಪ್ರಥಮ ಆದ್ಯತೆ ನೀಡಲಾಗುತ್ತದೆ ಎಂದು ಆರೋಗ್ಯ ಸಚಿವ ವಿಶ್ವಜಿತ್ ರಾಣೆ ಹೇಳಿದ್ದಾರೆ. ಹೊರ ರೋಗಿ ವಿಭಾಗದಲ್ಲಿ ಸೋಮವಾರದಿಂದ ಎರಡು ಸರದಿಗಳಿರುತ್ತವೆ. ಗೋವಾ ನಿವಾಸಿಗಳು ಮತ್ತು ಹೊರ ಭಾಗದವರಿಗೆ ಪ್ರತ್ಯೇಕ ಕ್ಯೂ ಇರುತ್ತದೆ. ಆದರೆ ತುರ್ತು ಪರಿಸ್ಥಿತಿಯ ರೋಗಿಗಳಿಗೆ ಗೋವಾ ನಿವಾಸಿ ಗಳಲ್ಲದಿದ್ದರೂ ಆದ್ಯತೆಯ ಮೇರೆಗೆ ಚಿಕಿತ್ಸೆ ಒದಗಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ. ಈವರೆಗೆ ಎಲ್ಲರಿಗೂ ಉಚಿತ ಚಿಕಿತ್ಸೆ ಒದಗಿಸಲಾಗುತ್ತಿತ್ತು. ಆದರೆ, ಇನ್ನು ಮುಂದೆ ಗೋವಾದ ಹೊರಗಿನವರಿಗೆ ಶುಲ್ಕ ವಿಧಿಸಲಾಗುತ್ತದೆ ಎಂದಿದ್ದಾರೆ.
ಗೋವಾದ ಜನರಿಗೆ ಉತ್ತಮ ಸೇವೆ ಲಭ್ಯವಾಗ ಬೇಕು ಎಂಬ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಚಿವ ರಾಣೆ ಹೇಳಿದ್ದಾರೆ. ಉಚಿತ ಚಿಕಿತ್ಸೆ ಸೇವೆಯನ್ನು ಗೋವಾ ಜನರು ಮಾತ್ರ ವಲ್ಲದೆ, ಮಹಾರಾಷ್ಟ್ರ, ಕರ್ನಾಟಕದ ಕರಾವಳಿ ಜನರೂ ಪಡೆದು ಕೊಳ್ಳಬಹು ದಾಗಿದೆ. ಹೊರಗಿವರು ಎಷ್ಟು ಶುಲ್ಕ ವಿಧಿಸಬೇಕು ಎಂಬ ಬಗ್ಗೆ ಶೀಘ್ರದಲ್ಲೇ ನಿರ್ಧರಿಸಲಾಗುತ್ತದೆ. ಇದಕ್ಕಾಗಿ ಸಮಿತಿ ರಚಿಸಲಾಗಿದೆ. ದೀನ ದಯಾಳ್ ಸಾಮಾ ಜಿಕ ಭದ್ರತಾ ಯೋಜನೆ ಕಾರ್ಡ್ ಸಹಿತ ದಂತೆ ಯಾವುದೇ ಗುರುತಿನ ಚೀಟಿ ಯನ್ನು ಗೋವಾ ನಿವಾಸಿಗರು ಪ್ರದ ರ್ಶಿಸಿ ಉಚಿತ ಚಿಕಿತ್ಸೆ ಪಡೆಯಬಹುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ
Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ
MUST WATCH
ಹೊಸ ಸೇರ್ಪಡೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ