ಯಾಕೆ? ಇಂಧನ ದರ ಇಳಿಕೆಯಾಯಿತು


Team Udayavani, Mar 10, 2020, 6:21 AM IST

ಯಾಕೆ? ಇಂಧನ ದರ ಇಳಿಕೆಯಾಯಿತು

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಭಾರೀ ಇಳಿಕೆ ಕಂಡಿದೆ. ಕೊರೊನಾ ಜಾಗತಿಕ ಮಾರುಕಟ್ಟೆಯ ಮೇಲೆ ಪರಿಣಾಮ ಬೀರಿದ್ದು ಬೇಡಿಕೆ ಕುಸಿದಿದೆ. ಈ ಹಿನ್ನೆಲೆಯಲ್ಲಿ ಕೆಲವು ದಿನಗಳಿಂದ ತೈಲ ದರ ಇಳಿಕೆಯಾಗುತ್ತಲೇ ಇತ್ತು. ಇದನ್ನು ಸ್ಥಿರಗೊಳಿಸಲು ಶೇ. 4ರಷ್ಟು ಉತ್ಪಾದನೆ ತಗ್ಗಿಸುವ ಕುರಿತಾಗಿ 14 ಸದಸ್ಯರನ್ನು ಒಳಗೊಂಡಿರುವ ಪೆಟ್ರೋಲಿಯಂ ರಫ್ತುರಾಷ್ಟ್ರಗಳ ಸಂಘಟನೆ (ಒಪೆಕ್‌) ಮುಂದಾಗಿತ್ತು. ಆದರೆ…

ರಷ್ಯಾ ಕಾರಣ!
ಮಾರ್ಚ್‌ ತಿಂಗಳಿಗೆ ಈ ಒಪ್ಪಂದ ಕೊನೆಯಾಗ ಲಿರುವ ಹಿನ್ನೆಲೆಯಲ್ಲಿ ಮತ್ತೆ ಮುಂದುವರಿಸುವಂತೆ ಸೌದಿ ಅರೆಬೀಯಾ ಮಾತುಕತೆಗೆ ಮುಂದಾಗಿತ್ತು. ಆದರೆ ಮತ್ತೆ ಒಪ್ಪಂದ ನಡೆಸಲು ನಾವು ಸಿದ್ಧರಿಲ್ಲ ಎಂದು ರಷ್ಯಾ ಹೇಳಿದ ಬೆನ್ನÇÉೇ ಈಗ ತೈಲ ಉತ್ಪಾದಿಸುವ ರಾಷ್ಟ್ರಗಳ ಮಧ್ಯೆ ದರ ಸಮರ ಆರಂಭಗೊಂಡಿದೆ. ದರ ಇಳಿಕೆಗೆ ಇದು ಕಾರಣ.

ಪ್ರಸ್ತಾವದಲ್ಲಿ ಏನಿತ್ತು?
ಒಪೆಕ್‌ ರಾಷ್ಟ್ರಗಳು ಈಗ ಪ್ರತಿ ದಿನ ಉತ್ಪಾದನೆ ಯಾಗುತ್ತಿರುವ ತೈಲ ಪ್ರಮಾಣ ಕಡಿತಗೊಳಿಸಲು ನಿರ್ಧರಿಸಿದ್ದವು. ಎಪ್ರಿಲ್‌ನಿಂದ ಪ್ರತಿದಿನ ಶೇ. 1.5 ದಶಲಕ್ಷ ಬ್ಯಾರೆಲ್‌ (ಶೇ. 4ರಷ್ಟು) ಇಳಿಸಿ ಡಿಸೆಂ ಬರ್‌ ವರೆಗೆ ಇದೇ ಮಾನದಂಡದ ಅನ್ವಯ ತೈಲ ಉತ್ಪಾದಿಸುವ ಪ್ರಸ್ತಾವವಿತ್ತು. ಆದರೆ ಈ ಪ್ರಸ್ತಾವ ವನ್ನು ರಷ್ಯಾ ತಿರಸ್ಕರಿಸಿದ್ದು, ಗಲ್ಫ್ ರಾಷ್ಟ್ರಗಳು ಉತ್ಪಾ ದನೆ ಹೆಚ್ಚಿಸಿದ್ದು ಪರಿಣಾಮವಾಗಿ ದರ ಇಳಿದಿದೆ.

ಸೌದಿಯತ್ತ ಚಿತ್ತ
ವಿಶ್ವದ ಅತಿ ದೊಡ್ಡ ತೈಲ ಉತ್ಪಾದಕ ರಾಷ್ಟ್ರವಾಗಿ ರುವ ಸೌದಿ ಅರೇಬಿಯಾ ಸೋಮವಾರವೇ ಕಚ್ಚಾ ತೈಲದ ಬೆಲೆಯನ್ನು ಇಳಿಕೆ ಮಾಡಿದೆ. ಈಗಿನ ಉತ್ಪಾ ದನೆಗಿಂತ ಹೆಚ್ಚುವರಿಯಾಗಿ ಪ್ರತಿದಿನ 10 ದಶಲಕ್ಷ ಬ್ಯಾರೆಲ್‌ ಕಚ್ಚಾ ತೈಲ ಉತ್ಪಾದಿಸುವುದಾಗಿ ಹೇಳಿದೆ.

ಭಾರತಕ್ಕೆ ಲಾಭ ಇದೆಯೇ?
ಚೀನ, ಅಮೆರಿಕದ ಬಳಿಕ ಭಾರತ ಹೆಚ್ಚು ತೈಲ ಆಮದು ಮಾಡುತ್ತಿದೆ. ಇದು ಆರ್ಥಿಕತೆ ಮೇಲೆ ತೈಲ ದರ ಭಾರೀ ಪ್ರಭಾವ ಬೀರುತ್ತದೆ. ಭಾರತ ತನ್ನ ಬೇಡಿಕೆಯ ಶೇ. 80ರಷ್ಟು ತೈಲವನ್ನು ಆಮದು ಮಾಡಿಕೊಳ್ಳುತ್ತಿದೆ. ತೈಲ ದರ ಇಳಿಕೆಯಾದರೆ ಆಮದು ಹೊರೆ ಕಡಿಮೆಯಾಗಿ ರಫ್ತು ವಹಿವಾಟಿನ ನಡುವಿನ ಚಾಲ್ತಿ ಖಾತೆಯ ಕೊರತೆಯೂ ನೀಗುತ್ತದೆ.

ಪೂರ್ಣ ಲಾಭ ಯಾಕಿಲ್ಲ?
ದರ ಇಳಿಕೆಯ ಪೂರ್ಣ ಲಾಭ ಭಾರತಕ್ಕೆ ಸದ್ಯದ ಮಟ್ಟಿಗೆ ದೊರೆಯುವುದು ಕಷ್ಟ. ಡಾಲರ್‌ ಮತ್ತು ರೂಪಾಯಿ ನಡುವಿನ ಅಂತರದ ಮೇಲೆ ಅದು ಅವಲಂಬಿಸಿದೆ. ಸದ್ಯ ಭಾರತ ಹೆಚ್ಚು ಡಾಲರ್‌ ನೀಡಿ ಖರೀದಿಸಬೇಕಾಗುತ್ತದೆ. ಈ ಕಾರಣಕ್ಕೆ ಗ್ರಾಹಕನಿಗೆ ಇದರ ಪೂರ್ಣ ಲಾಭ ಸಿಗದು.

ಬೇಡಿಕೆ ಇಳಿಕೆಯಾಗುವ ಸಾಧ್ಯತೆ
ಏಶ್ಯಾದ ಪ್ರಬಲ ರಾಷ್ಟ್ರವಾಗಿರುವ ಚೀನದಲ್ಲಿ ಮಾರಣಾಂತಿಕ ಕೊರೊನಾ ಭೀತಿಯಿಂದ ಉತ್ಪಾದನೆ ಸ್ಥಗಿತಗೊಂಡಿದೆ. ಇದರೊಂದಿಗೆ ದಕ್ಷಿಣ ಕೊರಿಯಾ, ಇಟಲಿಯಲ್ಲಿಯೂ ಕೊರೊನಾ ವೇಗವಾಗಿ ಹಬ್ಬು ತ್ತಿದೆ. ಯುರೋಪ್‌, ಏಶ್ಯಾ ರಾಷ್ಟ್ರಗಳಿಗೆ ಭೀತಿ ಎದು ರಾದ ಹಿನ್ನೆಲೆಯಲ್ಲಿ ಈ ಬಾರಿ ತೈಲ ಬೇಡಿಕೆ ಮತ್ತಷ್ಟು ಇಳಿಕೆಯಾಗುವ ಸೂಚನೆ ಇದು ಎನ್ನಲಾಗಿದೆ.

ರಷ್ಯಾಕ್ಕೆ ಸೌದಿ ಪಾಠ
ಅಂದು 2016ರಲ್ಲಿ ಅಮೆರಿಕದ ಶೇಲ್‌ ತೈಲ ಉತ್ಪಾದನೆ ತಗ್ಗಿಸಲು ಸೌದಿ ಅರೇಬಿಯಾ, ರಷ್ಯಾ ಸೇರಿದಂತೆ ಮಧ್ಯಪ್ರಾಚ್ಯದ ಇತರ ತೈಲ ಉತ್ಪಾದಕ ರಾಷ್ಟ್ರಗಳು ಏಶ್ಯಾದ ಮಾರುಕಟ್ಟೆಗೆ ಕಡಿಮೆ ಬೆಲೆಯಲ್ಲಿ ತೈಲವನ್ನು ಪೂರೈಸಿದ್ದವು. ಈಗ ಈ ಒಪ್ಪಂದದಿಂದ ಹಿಂದಕ್ಕೆ ಸರಿದ ರಷ್ಯಾಕ್ಕೆ ಪಾಠ ಕಲಿಸಲು ಸೌದಿ ಭಾರೀ ಪ್ರಮಾಣದಲ್ಲಿ ಉತ್ಪಾದಿಸಲು ಮುಂದಾಗಿದೆ. ಬೆಲೆ ಕಡಿಮೆ ಮಾಡಿದರೆ ಸಹಜವಾಗಿ ಖರೀದಿಯ ಬೇಡಿಕೆ ಹೆಚ್ಚಾಗುವುದರಿಂದ ಯುರೋಪ್‌ ಮತ್ತು ಏಶ್ಯಾದಲ್ಲಿ ರಷ್ಯಾ ಜತೆಗೆ ಪೈಪೋಟಿ ನಡೆಸುವುದು ಇದರ ಉದ್ದೇಶವಾಗಿದೆ.

ಅಬಕಾರಿ ಸುಂಕ ಏರಿಸಿದರೆ…?
ಒಂದು ಲೀಟರ್‌ ಪೆಟ್ರೋಲ್‌ ಮೇಲೆ ಕೇಂದ್ರ ಸರಕಾರ 17.98 ರೂ. ಅಬಕಾರಿ ಸುಂಕ ಹಾಕಿದೆ. 1 ಲೀಟರ್‌ ಡೀಸೆಲ್‌ ಮೇಲೆ 13.83 ರೂ. ಸುಂಕ ಇದೆ. ಈ ಹಿಂದೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ದರ ಇಳಿಕೆಯಾದಾಗ ಅಬಕಾರಿ ಸುಂಕವನ್ನು ಹೆಚ್ಚಿಸಿತ್ತು. ಈಗ ಭಾರೀ ಗಾತ್ರದಲ್ಲಿ ದರ ಇಳಿಕೆಯಾದ ಹಿನ್ನೆಲೆಯಲ್ಲಿ ಅಬಕಾರಿ ಸುಂಕ ಏರಿಕೆಯಾಗುವ ಸಾಧ್ಯತೆಯೂ ದಟ್ಟವಾಗಿದೆ.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.