![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ಮಾಯಾವತಿಗೆ ಬಂದ ಹಣವೇ ಅತೀ ಹೆಚ್ಚು! ಬಿಜೆಪಿಗೆ 4.7 ಕೋಟಿ
Team Udayavani, Feb 13, 2017, 3:45 AM IST
![Mayawati.jpg](https://www.udayavani.com/wp-content/uploads/2017/02/12/Mayawati.jpg)
ಹೊಸದಿಲ್ಲಿ: ನೋಟುಗಳ ಅಪಮೌಲ್ಯ ಬಳಿಕದ ಎರಡು ತಿಂಗಳ ಅವಧಿಯಲ್ಲಿ ರಾಜಕೀಯ ಪಕ್ಷಗಳು ಠೇವಣಿಯಿಟ್ಟ ಹಳೆಯ ನೋಟುಗಳ ಮೊತ್ತ ಎಷ್ಟು ಗೊತ್ತಾ ?
ಬರೋಬ್ಬರಿ 167 ಕೋಟಿ ರೂ.! ಆದಾಯ ತೆರಿಗೆ ಇಲಾಖೆ ಮತ್ತು ಹಣಕಾಸು ಗುಪ್ತಚರ ಘಟಕ ನಡೆಸಿದ ದತ್ತಾಂಶ ವಿಶ್ಲೇಷಣೆ ಯಿಂದ ಈ ವಿಚಾರ ಬಹಿರಂಗವಾಗಿದೆ.
ದೇಶದ ಪ್ರಮುಖ 15 ಪಕ್ಷ ಗಳು ನವೆಂಬರ್-ಡಿಸೆಂಬರ್ ತಿಂಗಳಲ್ಲಿ ಒಟ್ಟು 167 ಕೋಟಿ ರೂ.ಗಳನ್ನು ಬ್ಯಾಂಕ್ಗಳಲ್ಲಿ ಠೇವಣಿ ಇಟ್ಟಿವೆ ಎಂದು ಈ ವರದಿ ತಿಳಿಸಿದೆ. ಈ ಪೈಕಿ ಅತ್ಯ ಧಿಕ ಮೊತ್ತ ಅಂದರೆ 104 ಕೋಟಿ ರೂ.ಗಳನ್ನು ಠೇವಣಿಯಿಟ್ಟಿದ್ದು ಉತ್ತರ ಪ್ರದೇಶದ ಮಾಜಿ ಸಿಎಂ ಮಾಯಾವತಿ ನೇತೃತ್ವದ ಬಿಎಸ್ಪಿ. ಉಳಿದ 14 ಪಕ್ಷಗಳ ಠೇವಣಿ 63 ಕೋಟಿ ರೂ. ಇದರಲ್ಲಿ ಬಿಜೆಪಿ 4.75 ಕೋಟಿ ರೂ. ಹಾಗೂ ಕಾಂಗ್ರೆಸ್ 3.2 ಕೋಟಿ ರೂ.ಗಳನ್ನು ದೇಶದ ವಿವಿಧ ಭಾಗಗಳಲ್ಲಿ ಠೇವಣಿ ಇಟ್ಟಿವೆ ಎಂಬ ವಿಚಾರವನ್ನೂ ವರದಿ ತಿಳಿಸಿದೆ. ಉಳಿದ ಸಣ್ಣಪುಟ್ಟ ಪಕ್ಷಗಳ ಠೇವಣಿಯು 80 ಲಕ್ಷದಿಂದ 3 ಕೋಟಿ ರೂ.ವರೆಗಿದೆ.
ಕೆಲವೇ ಪಕ್ಷಗಳ ಆಯ್ಕೆ: ದೇಶದಾದ್ಯಂತ 250ರಷ್ಟು ರಾಜಕೀಯ ಪಕ್ಷಗಳ ನೋಂದಣಿ ಯಾಗಿವೆ. ಈ ಪೈಕಿ ಬಹುತೇಕ ಪಕ್ಷಗಳು ಕಾಗದಕ್ಕಷ್ಟೇ ಸೀಮಿತ. ಇವುಗಳ ಕುರಿತ ಮಾಹಿತಿ ಯನ್ನು ಮುಂದಿನ ಹಂತದಲ್ಲಿ ಪ್ರತ್ಯೇಕವಾಗಿ ಸಂಗ್ರಹಿಸಲಾಗುತ್ತದೆ ಎಂದು ಹೆಸರು ಹೇಳಲಿ ಚ್ಛಿಸದ ಅಧಿಕಾರಿಗಳು ತಿಳಿಸಿದ್ದಾರೆ. ಈಗ ಬಹಿರಂಗವಾಗಿರುವ ವರದಿಯಲ್ಲಿ ಎಲ್ಲ 6 ರಾಷ್ಟ್ರೀಯ ಪಕ್ಷಗಳು ಹಾಗೂ ವಿವಿಧ ರಾಜ್ಯಗಳಲ್ಲಿ ಅಧಿಕಾರದಲ್ಲಿರುವ 9 ಪ್ರಾದೇಶಿಕ ಪಕ್ಷಗಳ ಠೇವಣಿ ಮಾಹಿತಿಯನ್ನಷ್ಟೇ ಪಡೆಯಲಾಗಿದೆ. ಅದರಲ್ಲೂ ಡಿಎಂಕೆ, ಶಿವಸೇನೆ, ಆರ್ಜೆಡಿಯಂಥ ಪಕ್ಷಗಳ ಮಾಹಿತಿಯನ್ನು ಸಂಗ್ರಹಿಸಿಲ್ಲ ಎಂದೂ ಅಧಿಕಾರಿಗಳು ಹೇಳಿದ್ದಾರೆ.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
![court](https://www.udayavani.com/wp-content/uploads/2024/07/court-7-150x83.jpg)
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.